ಅಂಜನಾದ್ರಿ ದರ್ಶನ: ಮಾವ ಪುನೀತ್ ರಾಜ್ಕುಮಾರ್ ಹಾದಿಯನ್ನು ಅನುಸರಿಸಿದ ಧೀರೆನ್
ಕೊಪ್ಪಳ, ಆಗಸ್ಟ್, 19: ಡಾ.ರಾಜ್ಕುಮಾರ್ ಅವರ ಮೊಮ್ಮಗ ಧೀರನ್ ರಾಮ್ಕುಮಾರ್ ಇಂದು ಗಂಗಾವತಿಯ ಅಂಜನಾದ್ರಿ ಬೆಟ್ಟಕ್ಕೆ ಹೋಗಿ ಹನುಮ ದರ್ಶನ ಪಡೆದಿದ್ದಾರೆ. ಧೀರನ್ ರಾಮಕುಮಾರ್ 575 ಮೆಟ್ಟಿಲುಗಳನ್ನು ಏರಿ ಹನುಮ ದರ್ಶನ ಪಡೆದಿದ್ದು, ಅವರಿಗೆ ತಾಯಿ ಪೂರ್ಣಿಮಾ ಸಾಥ್ ನೀಡಿದ್ದಾರೆ. ಡಾ.ರಾಜ್ಕುಮಾರ್ ಅವರ ಮಗಳಾದ ಪೂರ್ಣಿಮಾ ಅವರು ಆಂಜನೇಯನ ಜನ್ಮ ಸ್ಥಳವಾದ ಅಂಜನಾದ್ರಿ ಬೆಟ್ಟಕ್ಕೆ ತೆರಳಿದ್ದರು.
ಮಾವ ಪುನೀತ್ ಹಾದಿಯನ್ನೇ ಅನುಸರಿಸಿದ ಧೀರೆನ್
ಧೀರೆನ್ ರಾಮ್ಕುಮಾರ್ ಅಭಿನಯದ ಶಿವ 143 ಚಿತ್ರ ಆಗಸ್ಟ್ 26 ರಂದು ರಾಜ್ಯಾದ್ಯಂತ ಬಿಡುಗಡೆ ಆಗಲಿದೆ. ಈ ಹಿನ್ನೆಲೆ ಧೀರೆನ್ ರಾಮ್ಕುಮಾರ್ ಜೊತೆಗೆ ಚಲನಚಿತ್ರ ತಂಡದವರು ಸಹ ಅಂಜನಾದ್ರಿ ಬೆಟ್ಟಕ್ಕೆ ತೆರಳಿ ಹನುಮ ದರ್ಶನ ಪಡೆದರು. ಈ ಹಿಂದೆ ಪುನೀತ್ ರಾಜ್ಕುಮಾರ್ ಅವರು ಸಹ ಅಂಜನಾದ್ರಿಯ ದರ್ಶನ ಪಡೆದಿದ್ದರು. ಮಾವ ಪುನೀತ್ ರಾಜ್ಕುಮಾರ್ ಹಾದಿಯಂತೆ ಧೀರನ್ ರಾಮ್ಕುಮಾರ್ ಸಹ ಅಂಜನಾದ್ರಿ ದರ್ಶನ ಪಡೆದರು.
ಆಗಸ್ಟ್ 26ಕ್ಕೆ ಧೀರೆನ್ ತೆರೆ ಮೇಲೆ
ಅನಿಲ್ ಕುಮಾರ್ ನಿರ್ದೇಶನದಲ್ಲಿ ಮೂಡಿಬರುತ್ತುರುವ ಶಿವ 143 ಸಿನಿಮಾದಲ್ಲಿ ಧಿರೇನ್ ರಾಮ್ಕುಮಾರ್ ಮಿಂಚಲು ತಯಾರಾಗಿದ್ದಾರೆ. ಇದೀಗ ಚಿತ್ರದ ಶೂಟಿಂಗ್ ಪೂರ್ಣಗೊಳಿಸಿದ್ದು, ಆಗಸ್ಟ್ 26ರಂದು ತೆರೆಗೆ ಅಪ್ಪಳಿಸಲು ಸಜ್ಜಾಗಿದೆ.
ಹಾಡುಗಳ ಚಿತ್ರೀಕರಣಕ್ಕಾಗಿ ಬೃಹತ್ ಸೆಟ್ ಅನ್ನು ಹಾಕಲಾಗಿತ್ತು. ಧೀರೆನ್ ರಾಮ್ಕುಮಾರ್ ಚಿತ್ರ ವೀಕ್ಷಣೆಗೆ ಅಭಿಮಾನಿಗಳು ತುಗಿಗಾಲಲ್ಲಿ ಕಾಯುತ್ತಿದ್ದಾರೆ.

ಅಪ್ಪು ಅಭಿಮಾನಿಗಳಿಂದ ಅದ್ಧೂರಿ ಸ್ವಾಗತ
ಗಂಗಾವತಿಯಲ್ಲಿ ಅಪ್ಪು ಅಭಿಮಾನಿಗಳು ಧೀರನ್ ರಾಮ್ಕುಮಾರ್ ಅವರಿಗೆ ಭರ್ಜರಿ ಸ್ವಾಗತವನ್ನು ಮಾಡಿದರು. ಪಟಾಕಿ ಸಿಡಿಸಿ ಅದ್ಧೂರಿ ಸ್ವಾಗತ ಕೋರಿದ್ದಾರೆ. ಧೀರೆನ್ ಅವರಿಗೆ ಜೆಸಿಬಿ ಮೇಲಿಂದ ಹೂಮಳೆ ಸುರಿಸಿ ಅಪ್ಪು ಅಭಿಮಾನಿಗಳು ಭರ್ಜರಿ ಸ್ವಾಗತ ಕೋರಿದರು. ನಂತರ ಆಟೋ, ಬೈಕ್ಗಳ ಮೂಲಕ ಬೃಹತ್ ಮೆರವಣಿಗೆ ರ್ಯಾಲಿ ಮಾಡಿದರು. ಧೀರನ್ ರಾಮ್ಕುಮಾರ್ ಡಾ.ರಾಜ್ಕುಮಾರ್ ಕುಟುಂಬದ ಚಿತ್ರಗಳುಳ್ಳ ವಿಶೇಷ ಶರ್ಟ್ ಧರಿಸಿ ಗಮನ ಸೆಳೆದರು.
ಸಿನಿಮಾ ಶೂಟಿಂಗ್ ಮುಕ್ತಾಯ:
ಒಂದು ವಿಶೇಷವಾದ ಹಾಡಿನಲ್ಲಿ ಸಾಧು ಕೋಕಿಲಾ ಅವರು ಮಾಡೆಲ್ ನಮ್ರತಾ ಮಲ್ಲಾ ಜೆನಿತ್ ಎನ್ನುವ ಅತಿಥಿ ಪಾತ್ರದಲ್ಲಿ ನಟಿಸಿದ್ದಾರೆ. ಜಯಣ್ಣ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಈ ಸಿನಿಮಾವನ್ನು ನಿರ್ಮಿಸಲಾಗಿದೆ. ಆಕ್ಷನ್ ರೊಮ್ಯಾಂಟಿಕ್ ಸಿನಿಮಾದಲ್ಲಿ ಮಾನ್ವಿತಾ ಕಾಮತ್ ಧೀರೆನ್ಗೆ ನಟಿಯಾಗಿ ಜೋಡಿಯಾಗಿದ್ದಾರೆ. ಈ ಸಿನಿಮಾಗೆ ಅರ್ಜುನ್ ಜನ್ಯಾ ಸಂಗೀತ ಸಂಯೋಜಿಸಿದ್ದಾರೆ. ರಾಜ್ಕುಮಾರ್ ಕುಟುಂಬದ ಕುಡಿ ನಟ ಧೀರನ್ ರಾಮ್ಕುಮಾರ್ ಶಿವ 143 ಚಿತ್ರದ ಮೂಲಕ ಕನ್ನಡ ಸಿನಿಮಾ ರಂಗಕ್ಕೆ ಪದಾರ್ಪಣೆ ಮಾಡಿದ್ದು, ಅಭಿಮಾನಿಗಳಲ್ಲಿ ಕುತೂಹಲ ಹುಟ್ಟು ಹಾಕಿದ್ದಾರೆ.

ಮೊದಲು ಪುನೀತ್ ರಾಜ್ಕುಮಾರ್ ಸಿನಿಮಾ ಚಿತ್ರಿಕರಣ ಮುಗಿಸಿಕೊಂಡು ಅಂಜನಾದ್ರಿ ಬೆಟ್ಟಕ್ಕೆ ಭೇಟಿ ನೀಡಿ, ಹನುಮ ದರ್ಶನವನ್ನು ಪಡೆದಿದ್ದರು. ಇದೀಗ ಮಾವ ಪುನೀತ್ ರಾಜ್ಕುಮಾರ್ ಹಾದಿಯಂತೆ ಧೀರೆನ್ ರಾಮ್ಕುಮಾರ್ ಕೂಡ ಅಂಜನಾದ್ರಿ ಬೆಟ್ಟಕ್ಕೆ ಭೇಟಿ ನೀಡಿ ದರ್ಶನ ಪಡೆದಿದ್ದಾರೆ.
Recommended Video
-
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ












Click it and Unblock the Notifications