ಹನುಮ ಜಯಂತಿ; ಅಂಜನಾದ್ರಿ ಬೆಟ್ಟದಲ್ಲಿ ಅದ್ಧೂರಿ ಆಚರಣೆ
ಕೊಪ್ಪಳ, ಏಪ್ರಿಲ್ 16: ಗಂಗಾವತಿ ತಾಲೂಕಿನ ಐತಿಹಾಸಿಕ ಪ್ರಸಿದ್ಧ ಅಂಜನಾದ್ರಿ ಬೆಟ್ಟದ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಇಂದು (ಏ. 16) ಹನುಮ ಜಯಂತ್ಯುತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತಿದೆ.
ರಾಜ್ಯದ ವಿವಿಧ ಜಿಲ್ಲೆಗಳಿಂದ 40 ಸಾವಿರಕ್ಕೂ ಹೆಚ್ಚು ಹನುಮ ಮಾಲಾಧಾರಿಗಳು ಆಗಮಿಸುವ ನಿರೀಕ್ಷೆ ಇದ್ದು, ಗಂಗಾವತಿ ತಾಲೂಕು ಆಡಳಿತ ಮತ್ತು ಪೊಲೀಸ್ ಇಲಾಖೆ ಸಕಲ ಸಿದ್ಧತೆ ಕೈಗೊಂಡಿದೆ. ಕಳೆದ ಮೂರು ದಿನಗಳ ಹಿಂದೆ ಹನುಮ ಜಯಂತಿ ಅಂಗವಾಗಿ ಕಾಶಿ, ಅಯೋಧ್ಯೆ, ವಾರಣಾಸಿ ಸೇರಿದಂತೆ ವಿವಿಧ ಧಾರ್ಮಿಕ ಕ್ಷೇತ್ರಗಳಿಂದ ಆಗಮಿಸಿದ್ದ ಸಾಧು- ಸಂತರು ಋಷಿಮುಖ ಬೆಟ್ಟದಿಂದ ಅಂಜನಾದ್ರಿಯವರೆಗೆ ಕುಂಭ ಮೆರವಣಿಗೆ ಮಾಡಿ ಕುಂಭದಲ್ಲಿ ತಂದಿದ್ದ ತುಂಗಭದ್ರೆಯ ಜಲದಿಂದ ಹನುಮನ ಮೂರ್ತಿಗೆ ಜಲಾಭಿಷೇಕ ಮಾಡಿದರು.
ಶನಿವಾರ ಹನುಮ ಜಯಂತಿ ಅಂಗವಾಗಿ ಅಂಜನಾದ್ರಿ ಬೆಟ್ಟದ ದೇವಸ್ಥಾನದ ಮುಂಭಾಗದಲ್ಲಿ ಪವಮಾನ ಹೋಮ ಸೇರಿದಂತೆ ವಿವಿಧ ಹೋಮಗಳು, ಅಭಿಷೇಕ ಸೇರಿದಂತೆ ಸಂಕೀರ್ತನೆ ನಡೆಯಲಿವೆ. ಕಳೆದ ಎರಡು ವರ್ಷಗಳಿಂದ ರಾಜ್ಯದಲ್ಲಿ ಕೊರೊನಾ ಹಿನ್ನೆಲೆ ಅದ್ಧೂರಿ ಹನುಮ ಜಯಂತಿ ಆಚರಣೆಗೆ ನಿಯಂತ್ರಣ ಹೇರಲಾಗಿತ್ತು. ಈಗ ಕೊರೊನಾ ಪ್ರಕರಣಗಳು ಕಡಿಮೆಯಾಗಿರುವುದರಿಂದ ಅದ್ಧೂರಿ ಹನುಮ ಜಯಂತಿಗೆ ಭಕ್ತರು ಮುಂದಾಗಿದ್ದಾರೆ.

ದೇವಸ್ಥಾನಕ್ಕೆ ಮುಕ್ತ ಅವಕಾಶ
ಅಂಜನಾದ್ರಿ ಬೆಟ್ಟಕ್ಕೆ ತೆರಳಲು ಭಕ್ತರಿಗೆ ತಾಲೂಕು ಆಡಳಿತ ಮತ್ತು ಪೊಲೀಸ್ ಇಲಾಖೆ ಮುಕ್ತ ಅವಕಾಶ ಕಲ್ಪಿಸಿದೆ. ಯಾವುದೇ ನಿರ್ಬಂಧ ಇಲ್ಲದೆ ನೇರವಾಗಿ ಆಯಾ ಜಿಲ್ಲೆಗಳಿಂದ ಬರುವ ಭಕ್ತರು ಅಂಜನಾದ್ರಿ ಬೆಟ್ಟವೇರಲು ಆನೆಗೊಂದಿ-ಮುನಿರಾಬಾದ್ ಮಾರ್ಗವಾಗಿ ಹೋಗಲು ಅವಕಾಶ ನೀಡಿದೆ. ಬೆಟ್ಟ ಏರಲು ಇಕ್ಕಟ್ಟಾದ ಮಾರ್ಗ ಇರುವುದರಿಂದ ಭಕ್ತರು ನಿಧಾನವಾಗಿ ಬೆಟ್ಟ ಏರಿ ದರ್ಶನ ಪಡೆದ ನಂತರ ಚಿಕ್ಕರಾಂಪುರ ಮಾರ್ಗವಾಗಿ ತೆರಳಲು ಅವಕಾಶ ನೀಡಿದೆ. ಚಿಕ್ಕರಾಂಪುರ ಸನಿಹದಲ್ಲಿ ಬರುವ ಭಕ್ತರಿಗೆ ಪ್ರಸಾದದ ವ್ಯವಸ್ಥೆ ಕಲ್ಪಿಸಲಾಗಿದೆ.
ಹನುಮ ಮಾಲಾಧಾರಿಗಳು ನೇರವಾಗಿ ಬೆಟ್ಟಕ್ಕೆ ತೆರಳಿ ಮಾಲಾ ವಿಸರ್ಜನೆ ಮಾಡಲು ಸೂಚಿಸಿದೆ. ಈ ಬಾರಿ ಅಂಜನಾದ್ರಿ ಬೆಟ್ಟದಲ್ಲಿ ಅಧಿಕ ಸಂಖ್ಯೆಯಲ್ಲಿ ಭಕ್ತರು ಮಾಲೆ ವಿಸರ್ಜನೆ ಮಾಡುತ್ತಿದ್ದು, ಕಟ್ಟುನಿಟ್ಟಿನ ಕ್ರಮಕ್ಕೆ ತಾಲೂಕು ಆಡಳಿತ ಮುಂದಾಗಿದೆ.

200ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ನಿಯೋಜನೆ
ಶಾಂತಿ ಸುವ್ಯವಸ್ಥೆಗಾಗಿ ಪೊಲೀಸ್ ಇಲಾಖೆ 200ಕ್ಕೂ ಹೆಚ್ಚು ಸಿಬ್ಬಂದಿಯನ್ನು ನಿಯೋಜಿಸಿದೆ. ಐಆರ್ಬಿ 3 ತುಕಡಿ, ಕೆಎಸ್ಆರ್ಪಿ 3, ಡಿಆರ್ಪಿ 6, ಪಿಎಸ್ಐ 20 ಅಧಿಕಾರಿಗಳು, ಡಿವೈಎಸ್ಪಿ 1 ಹಾಗೂ 200ಕ್ಕೂ ಹೆಚ್ಚು ಸಿಬ್ಬಂದಿ ಕಾರ್ಯನಿರ್ವಹಿಸಲಿದ್ದಾರೆ. ವಾಹನಗಳ ನಿಲುಗಡೆಗೆ ಮುನಿರಾಬಾದ್, ಸಣ್ಣಾಪುರ ಮತ್ತು ಪಂಪಾ ಸರೋವರ ಬಳಿ ಪಾರ್ಕಿಂಗ್ಗೆ ವ್ಯವಸ್ಥೆ ಮಾಡಲಾಗಿದೆ.
ಅಂಜನಾದ್ರಿ ಬೆಟ್ಟದಲ್ಲಿ ಹನುಮ ಜಯಂತಿ ಅಂಗವಾಗಿ ಮಾಲಾಧಾರಿಗಳು ಅಧಿಕ ಸಂಖ್ಯೆಯಲ್ಲಿ ಆಗಮಿಸುವ ನಿರೀಕ್ಷೆ ಇದ್ದು, ಭಕ್ತರಿಗೆ ವೇದಪಾಠಾ ಶಾಲೆಯ ಬಳಿ ಪ್ರಸಾದ ಮತ್ತು ಪಂಚಾಮೃತ ವ್ಯವಸ್ಥೆ ಕೈಗೊಳ್ಳಲಾಗಿದೆ. ಬೆಟ್ಟಏರಲು ಮತ್ತು ಇಳಿಯಲು ಒನ್ವೇ ಮಾಡಲಾಗಿದೆ ಎಂದು ಗಂಗಾವತಿ ತಹಶೀಲ್ದಾರ ನಾಗರಾಜ ತಿಳಿಸಿದ್ದಾರೆ.
ಅಂಜನಾದ್ರಿ ಬೆಟ್ಟಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿರುವ ಹಿನ್ನೆಲೆ 200ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತೆ ವಹಿಸಲಾಗಿದೆ. ಪಾರ್ಕಿಂಗ್ ವ್ಯವಸ್ಥೆ ಸೇರಿದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದು ಗಂಗಾವತಿ ಡಿವೈಎಸ್ಪಿ ರುದ್ರೇಶ ಉಜ್ಜನಕೊಪ್ಪ ಹೇಳಿದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications