ಕೊಪ್ಪಳ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಲ್ಯಾಪ್ ಟಾಪ್ ಹಗರಣದಲ್ಲಿ ಬಸವರಾಜ್ ರಾಯರೆಡ್ಡಿ ಭಾಗಿ: ಆರೋಪ

|
Google Oneindia Kannada News

ಕೊಪ್ಪಳ, ಡಿಸೆಂಬರ್ 13 : ಲ್ಯಾಪ್ ಟಾಪ್ ಟೆಂಡರ್ ಅವ್ಯವಹಾರದಲ್ಲಿ ಸಚಿವ ಬಸವರಾಜ ರಾಯರೆಡ್ಡಿ ನೇರವಾಗಿ ಭಾಗಿಯಾಗಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ರಘುನಾಥ ಮಲ್ಕಾಪುರೆ ಆರೋಪಿಸಿದರು.

ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಂಪನಿಗಳಿಂದ ಸರ್ಕಾರ ಕಿಕ್ ಬ್ಯಾಕ್ ಪಡೆದಿದೆ. ಇದೀಗ ಕರೆದಿರುವ ಟೆಂಡರ್ ಪ್ರಕ್ರಿಯೆ ತಕ್ಷಣವೇ ಕೈಬಿಡಬೇಕು. 30 ಸಾವಿರ ಲ್ಯಾಪ್ ಟಾಪ್ ಗಳು ಇದುವರೆಗೂ ವಿದ್ಯಾರ್ಥಿಗಳ ಕೈಸೇರಿಲ್ಲ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸರ್ಕಾರ ಈ ಯೋಜನೆಯನ್ನು ರೂಪಿಸಿದೆ ಆದರೆ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತಿಲ್ಲ ಎಂದರು.

House committee members accuses scam in Laptop tender

ಐ3 ವರ್ಷನ್ ಲ್ಯಾಪ್ ಟಾಪ್ ಕೊಡಬೇಕಾಗಿತ್ತು. ಆದರೆ ನಿಯಮ ಉಲ್ಲಂಘನೆ ಮಾಡಿ ಟೆಂಡರ್ ಪ್ರಕ್ರಿಯೆ ಮಾಡುತ್ತಿದ್ದಾರೆ. ಇದರಲ್ಲಿ 300 ಕೋಟಿ ರೂ. ಹಗರಣವಾಗಿದೆ. ಇನ್ನೊಂದು ಟಿಎಪಿ ರಚನೆ ಮಾಡಿ ಟೆಂಡರ್ ಪ್ರಕ್ರಿಯೆ ಮಾಡಬೇಕು ಎಂದರು.

ಉತ್ತರಕನ್ನಡದಲ್ಲಿ ನಡೆದ ಗಲಭೆಗೆ ಆರ್ ಎಸ್ ಎಸ್ ಮತ್ತು ಬಿಜೆಪಿ ಕಾರಣವಲ್ಲ. ಅಲ್ಲಿನ ಜನರ ಹಿಂಸೆಯನ್ನು ಖಂಡಿಸಿ ಹೋರಾಟ ಮಾಡಿದ್ದಾರೆ. ಆವರಿಗೆ ನ್ಯಾಯ ಒದಗಿಸಲು ನಾವು ಜನರೊಂದಿಗೆ ಹೋರಾಟ ಮಾಡುತ್ತಿದ್ದೇವೆ ಎಂದು ಹೇಳಿದರು.

English summary
Raghunatha Malkapure, MLC and member of house committee on laptop purchase issue in the higher education department, has accused taht the minister Basavaraj Rayareddy in involved in the laptop purchasing tender.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X