ಕೊಪ್ಪಳದಲ್ಲಿ ಸ್ಥಾಪನೆಯಾಗಲಿದೆ ಬೃಹತ್ ಗೊಂಬೆ ತಯಾರಿಕಾ ಕ್ಲಸ್ಟರ್
ಕೊಪ್ಪಳ, ಆಗಸ್ಟ್ 30: ಕೇಂದ್ರ ಸರ್ಕಾರದ ಆತ್ಮನಿರ್ಭರ್ ಭಾರತ್ ಯೋಜನೆಯಡಿ ಬೃಹತ್ ಗೊಂಬೆಗಳ ತಯಾರಿಕಾ ಕ್ಲಸ್ಟರ್ ನ್ನು ಕೊಪ್ಪಳದಲ್ಲಿ ಸ್ಥಾಪನೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ.
Recommended Video
ಕೇಂದ್ರ ಸರ್ಕಾರದ ಆತ್ಮನಿರ್ಭರ್ ಭಾರತ್ ಯೋಜನೆಯಡಿ ಕೊಪ್ಪಳದಲ್ಲಿ ಬೃಹತ್ ಗೊಂಬೆ ತಯಾರಿಕಾ ಕ್ಲಸ್ಟರ್ ತಲೆ ಎತ್ತಲಿದ್ದು, ಈ ಬಗ್ಗೆ ಟ್ವೀಟ್ ಮಾಡುವ ಮೂಲಕ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮಾಹಿತಿ ನೀಡಿದ್ದಾರೆ.
ಮೊದಲನೆಯದಾಗಿ "ಸ್ವಾವಲಂಬಿ ರಾಷ್ಟ್ರ ನಿರ್ಮಾಣದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ #VocalForLocal ಪರಿಕಲ್ಪನೆಗೆ ಅನುಗುಣವಾಗಿ, ಆಟಿಕೆ ತಯಾರಿಕೆ ಮೂಲಕ ಆರ್ಥಿಕತೆ ಹಾಗೂ ಉದ್ಯೋಗ ಸೃಷ್ಟಿಗೆ ಬಲ ತುಂಬಲು ದೇಶದ ಮೊದಲ ಆಟಿಕೆ ಉತ್ಪಾದನಾ ಕ್ಲಸ್ಟರ್ ಕೊಪ್ಪಳದಲ್ಲಿ ಪ್ರಾರಂಭಿಸಲಾಗುತ್ತಿದೆ. ಇಲ್ಲಿ ದೇಶ-ವಿದೇಶಗಳ ಆಟಿಕೆ ತಯಾರಕರಿಗೆ ಅಗತ್ಯ ಸೌಲಭ್ಯ ಕಲ್ಪಿಸಲಾಗುವುದು" ಎಂದು ತಿಳಿಸಿದ್ದಾರೆ.

ಕೊಪ್ಪಳದಲ್ಲಿ 400 ಎಕರೆ ಜಮೀನಿನಲ್ಲಿ ವಿಶೇಷ ಆರ್ಥಿಕ ವಲಯದಲ್ಲಿ ಸ್ಥಾಪನೆ ಮಾಡಲಾಗುತ್ತಿದ್ದು, ಇದು ಮುಂದಿನ ಐದು ವರ್ಷಗಳಲ್ಲಿ 40 ಸಾವಿರ ಉದ್ಯೋಗವನ್ನು ಸೃಷ್ಟಿಸುವ ನಿರೀಕ್ಷೆ ಇದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.












Click it and Unblock the Notifications