ಕೊಪ್ಪಳ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚೀನಾದವರು ನಮ್ ತಂಟೆಗೆ ಬಂದ್ರೆ ಸುಮ್ನೆ ಒದೆ ತಿಂದು ಹೋಗ್ತಾರೆ!

|
Google Oneindia Kannada News

ಕೊಪ್ಪಳ, ಜೂನ್ 16: ಭಾರತ ಮತ್ತು ಚೀನಾ ಸಂಘರ್ಷದ ಬಗ್ಗೆ ರಾಜ್ಯ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆಯನ್ನು ನೀಡಿದ್ದಾರೆ.

Recommended Video

Ramesh Aravind's week days with ramesh is start from June 18th | Oneindia Kannada

"ಮೋದಿಯವರು ಪ್ರಧಾನಿಯಾದ ಮೇಲೆ, ಸೇನೆಗೆ ಸಂಪೂರ್ಣ ಸ್ವಾತಂತ್ರ್ಯ ಸಿಕ್ಕಿದೆ. ಹಿಂದಿನ ಹಾಗೇ ಎಲ್ಲದಕ್ಕೂ ಅನುಮತಿ ಪಡೆದು ಮುನ್ನುಗ್ಗುವ ಅವಶ್ಯಕತೆಯಿಲ್ಲ"ಎಂದು ಈಶ್ವರಪ್ಪ ಅಭಿಪ್ರಾಯ ವ್ಯಕ್ತ ಪಡಿಸಿದರು.

ಚೀನಾ-ಭಾರತ ನಡುವೆ ನಡೆಯುತ್ತಾ ಯುದ್ಧ: ಇಲ್ಲಿದೆ ಅಸಲಿ ಕಾರಣ! ಚೀನಾ-ಭಾರತ ನಡುವೆ ನಡೆಯುತ್ತಾ ಯುದ್ಧ: ಇಲ್ಲಿದೆ ಅಸಲಿ ಕಾರಣ!

"ಪಾಕಿಸ್ತಾನ ಕೂಡಾ ನಮ್ಮ ತಂಟೆಗೆ ಬಂದು, ಈಗ ಬಾಲ ಮುದುಡಿ ಕೂತಿದೆ. ಚೀನಾದ ಪರಿಸ್ಥಿತಿಯೂ ಹಾಗೇ ಹಾಗಲಿದೆ. ಸುಮ್ಮನೆ ನಮ್ಮ ಯೋಧರ ತಂಟೆಗೆ ಬಂದರೆ, ಒದೆ ತಿಂದು ಹೋಗುವುದು ನಿಶ್ಚಿತ"ಎಂದು ಈಶ್ವರಪ್ಪ ಹೇಳಿದರು.

India - China Border Conflict: Karnataka Rural Development Minister KS Eshwarappa Statement

"ವಿಶ್ವದ ಬಹುತೇಕ ಎಲ್ಲಾ ರಾಷ್ಟ್ರಗಳ ಜೊತೆ ಮೋದಿ ಉತ್ತಮ ಸಂಬಂಧವನ್ನು ಹೊಂದಿದ್ದಾರೆ. ಪಾಕಿಸ್ತಾನ ಅಥವಾ ಚೀನಾ, ಕಾಲುಕರೆದು ಜಗಳಕ್ಕೆ ಬಂದರೆ, ತೊಂದರೆ ಅನುಭವಿಸಿದು ಅವರೇ"ಎಂದು ಈಶ್ವರಪ್ಪ ಹೇಳಿದರು.

ಭಾರತ-ಚೀನಾ 'ಗಡಿರೇಖೆ' ಗೊಂದಲದ ಹಿಂದಿನ ಅಸಲಿ ಸತ್ಯ!ಭಾರತ-ಚೀನಾ 'ಗಡಿರೇಖೆ' ಗೊಂದಲದ ಹಿಂದಿನ ಅಸಲಿ ಸತ್ಯ!

ಸೋಮವಾರ (ಜೂನ್ 15) ರಾತ್ರಿ ನಡೆದ ಭಾರತ-ಚೀನಾ ಸೇನೆ ನಡುವಿನ ಮುಖಾಮುಖಿಯಲ್ಲಿ ಭಾರತೀಯ ಸೇನಾಧಿಕಾರಿ, ಇಬ್ಬರು ಸೈನಿಕರು ಸೇರಿ ಮೂರು ಮಂದಿ ಹುತಾತ್ಮರಾಗಿದ್ದರು. ಜೂನ್ 6ರಂದು ನಡೆದ ಉಭಯ ದೇಶಗಳ ಉನ್ನತ ಸೇನಾ ಕಮಾಂಡರ್‌ಗಳ ಸಭೆಯಲ್ಲಿ ಗಡಿ ಉದ್ವಿಗ್ನತೆ ಕಡಿಮೆ ಮಾಡಿ ಶಾಂತಿ ಮಾತುಕತೆ ನಡೆಸುವ ನಿರ್ಧಾರಕ್ಕೆ ಬರಲಾಗಿತ್ತು.

ಪೂರ್ವ ಲಡಾಖ್‌ ಗಡಿಯಿಂದ ಉಭಯ ದೇಶಗಳ ಸೇನಾ ಪಡೆಗಳೂ ಹಿಂದಕ್ಕೆ ಸರಿಯುತ್ತಿದ್ದು, ಪೆಟ್ರೋಲಿಂಗ್ ಪಾಯಿಂಟ್(ಗಸ್ತು ಪ್ರದೇಶ) 14, 15 ಹಾಗೂ 17 ಸ್ಥಳಗಳಿಂದ ಸುಮಾರು 2 ರಿಂದ 2.5 ಕಿ.ಮೀ ಹಿಂದಕ್ಕೆ ಸರಿಯಲಾಗಿದೆ ಎಂದು ಹೇಳಲಾಗಿತ್ತು.

English summary
India - China Border Conflict: Karnataka Rural Development Minister KS Eshwarappa Statement,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X