ಕೊಪ್ಪಳ ಗ್ಯಾಂಗ್ ರೇಪ್ ಪ್ರಕರಣ: ಇಬ್ಬರು ಆರೋಪಿಗಳ ಬಂಧನ
Koppal Gang Rape Case: ಕೊಪ್ಪಳದ ಗಂಗಾವತಿಯಲ್ಲಿ ಇಬ್ಬರು ಮಹಿಳಯರ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಗಂಗಾವತಿ ಗ್ರಾಮೀಣ ಠಾಣೆ ಪೊಲೀಸರು ಬಂಧಿದ್ದಾರೆ ಎಂದು ತಿಳಿದುಬಂದಿದೆ.
ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನಡೆದ ವಿದೇಶಿ ಮಹಿಳೆ ಮತ್ತು ಸ್ಥಳೀಯ ಹೋಮ್ ಸ್ಟೇ ಮಾಲಕಿಯರ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಗಾತಾವತಿ ಗ್ರಾಮೀಣ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಮಲ್ಲೇಶ್ ಅಲಿಯಾಸ್ ಹಂಡಿಮಲ್ಲ (22) ಮತ್ತು ಚೇತನ್ ಸಾಯಿ (21) ಬಂಧಿತ ಆರೋಪಿಗಳಾಗಿದ್ದಾರೆ.

ಬಂಧಿತರಾಗಿರುವ ಆರೋಪಿಗಳಿಬ್ಬರು ಗಂಗಾವತಿ ತಾಲೂಕಿನ ಸಾಯಿನಗರದ ನಿವಾಸಿಗಳಾಗಿದ್ದಾರೆ. ತಲೆಮರೆಸಿಕೊಂಡಿರುವ ಮತ್ತೊಬ್ಬ ಆರೋಪಿಗಾಗಿ ಪೊಲೀಸರು ಶೋಧಕಾರ್ಯ ಮುಂದುವರೆಸಿದ್ದಾರೆ. ಮಾರ್ಚ್ 6ರಂದು ರಾತ್ರಿ 11 ಗಂಟೆ ಸುಮಾರಿಗೆ ಗಂಗಾವತಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು.
ದೇಶ, ವಿದೇಶದ 5 ಮಂದಿ ಪ್ರವಾಸಿಗರ ಮೇಲೆ ದುರುಳರು ಹಲ್ಲೆ ನಡೆಸಿದ್ದರು. ಆ ಪೈಕಿ ಎರಡು ದಿನದ ಹಿಂದೆ ನಾಪತ್ತೆ ಆಗಿದ್ದ ಪ್ರವಾಸಿಗ ಇಂದು ಜಿಲ್ಲೆಯ ಗಂಗಾವತಿ ತಾಲೂಕಿನ ಮಲ್ಲಾಪುರ ಬಳಿ ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮೃತ ಪ್ರವಾಸಿಗ ಒರಿಸ್ಸಾ ಮೂಲದ ಬಿಬಾಸ್ (33) ಎಂದು ಗುರುತಿಸಲಾಗಿದೆ.
ದುಷ್ಕರ್ಮಿಗಳು ಹಣಕ್ಕಾಗಿ ಹಲ್ಲೆ ಮಾಡಿ ಎಡದಂಡೆ ಕಾಲುವೆಗೆ ದೂಡಿದ್ದರು. ನಾಲ್ವರು ಸುರಕ್ಷಿತ ಆಗಿದ್ದರೆ, ಬಿಬಾಸ್ ನಾಪತ್ತೆ ಆಗಿದ್ದರು. ಬಿಬಾಸ್ಗಾಗಿ ಹುಡುಕಾಟ ನಡೆಸಲಾಗಿತ್ತು. ಆದರೆ ಅವರು ಸಿಕ್ಕಿರಲಿಲ್ಲ. ಇಂದು ಬೆಳಗ್ಗೆ ಶವವಾಗಿ ಪತ್ತೆ ಆಗಿದ್ದಾರೆ.
ಇನ್ನು ಗಂಗಾವತಿಯಲ್ಲಿ ಎಸ್ಪಿ ಡಾ.ರಾಮ್ ಅರಸಿದ್ದಿ ಈ ಬಗ್ಗೆ ಪ್ರತಿಕ್ರಿಯಿಸಿ, ಗಾರೆ ಕೆಲಸ ಮಾಡುವ ಆರೋಪಿಗಳಿಬ್ಬರು ಕುಡಿದು ಗಲಾಟೆ ಮಾಡಿಕೊಂಡಿದ್ದಾರೆ. ಈ ವೇಳೆ ಪ್ರವಾಸಿಗರನ್ನು ನೋಡಿ ಅವರ ಬಳಿಯಿದ್ದ ಹಣ ಕಿತ್ತುಕೊಳ್ಳಲು ಮುಂದಾಗಿದ್ದರು. ಈ ವೇಳೆ ಪ್ರವಾಸಿಗರು ಮತ್ತು ದುಷ್ಕರ್ಮಿಗಳ ನಡುವೆ ಗಲಾಟೆ ಆಗಿದೆ. ಕೃತ್ಯ ಮಾಡಿದ್ದನ್ನು ಆರೋಪಿಗಳು ಒಪ್ಪಿಕೊಂಡಿದ್ದಾರೆ ಎಂದು ಹೇಳಿದ್ದಾರೆ.
ಬಳ್ಳಾರಿ ವಲಯ ಐಜಿಪಿ ಲೋಕೇಶ ಕುಮಾರ್ ಪ್ರತಿಕ್ರಿಯಿಸಿ, ನಿನ್ನೆ ರಾತ್ರಿ ನಾಲ್ವರು ಪ್ರವಾಸಿಗರು, ಓರ್ವ ಹೋಮ್ ಸ್ಟೇ ಮಹಿಳೆ ಬಂದಿದ್ದರು. ಇಸ್ರೇಲ್ ಮಹಿಳೆ, ಅಮೆರಿಕದ ಪ್ರವಾಸಿಗ, ಮಹರಾಷ್ಟ್ರ ಮತ್ತು ಒರಿಸ್ಸಾ ಪ್ರವಾಸಿಗರು ಸಾಣಾಪುರ ಕೆರೆ ಬಳಿಯಿರುವ ಎಡದಂಡೆ ಕಾಲುವೆಗೆ ಬಂದಿದ್ದರು. ಇಲ್ಲಿನ ವಾಯು ವಿಹಾರಕ್ಕೆಂದು ಬಂದಿದ್ದರು. ಈ ವೇಳೆ ಮೂವರು ಯುವಕರು ಬಂದಿದ್ದರು ಎಂದರು.
ಪೆಟ್ರೋಲ್ಗೆ ತಮಗೆ ಹಣ ಬೇಕು ಅಂತಾ ಕೇಳಿದ್ದಾರೆ. ಆಗ 20 ರೂಪಾಯಿ ಕೊಟ್ಟಿದ್ದಾರೆ. ಆದರೆ, 100 ರೂಪಾಯಿ ಬೇಕೆಂದು ಕೇಳಿದ್ದರಂತೆ. ಈ ವೇಳೆ ಮೂವರು ಪ್ರವಾಸಿಗರ ಮೇಲೆ ಕಲ್ಲಿನಿಂದ ಹಲ್ಲೆ ಮಾಡಿದ ದುಷ್ಕರ್ಮಿಗಳು ಬಳಿಕ ಎಡದಂಡೆ ಕಾಲುವೆಗೆ ದೂಡಿ ಓಡಿ ಹೋಗಿದ್ದರು. ಡೇನಿಯಲ್ ಮತ್ತು ಪಂಕಜ್ ಈಜಿ ದಡಕ್ಕೆ ಬಂದಿದ್ದಾರೆ. ಇನ್ನು ಹೋಮಸ್ಟೇ ಮಹಿಳಾ ಓನರ್, ಇಸ್ರೆಲ್ ಪ್ರವಾಸಿ ಮಹಿಳೆ ಮೇಲೆ ಸಾಮೂಹಿತ ಅತ್ಯಾವಾರ ನಡೆಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಗಂಗಾವತಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಗಾಗಿ 6 ತಂಡ ರಚನೆ ಮಾಡಿದ್ದೇವೆ ಎಂದು ತಿಳಿಸಿದ್ದರು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications