Get Updates
Get notified of breaking news, exclusive insights, and must-see stories!

ಕೊಪ್ಪಳ: ಮೇ 22ರಂದು ಗವಿಮಠ ಕ್ಯಾಂಪಸ್‌ನಲ್ಲಿ ಬೃಹತ್ ಉದ್ಯೋಗ ಮೇಳ

ಕೊಪ್ಪಳ, ಮೇ 20: ಕೊಪ್ಪಳ ಜಿಲ್ಲೆಯಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಪ್ರಮುಖವಾದ ಮಾಹಿತಿ ಇದೆ. ಕೊಪ್ಪಳದಲ್ಲಿ ಮೇ 22ರಂದು ಬೃಹತ್ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ. ಆಸಕ್ತ, ಅರ್ಹ ಅಭ್ಯರ್ಥಿಗಳು ನಿಗದಿತ ದಾಖಲಾತಿಗಳ ಜೊತೆ ಈ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಬಹುದು.

ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಬಳ್ಳಾರಿಯ ಸಮರ್ಥನಂ ಅಂಗವಿಕಲರ ಸಂಸ್ಥೆ ಹಾಗೂ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಕಾಲೇಜ್ ಆಫ್ ಎಜ್ಯುಕೇಶನ್ ಇವರ ಸಂಯುಕ್ತಾಶ್ರಯದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ.

jobs

ಗವಿಮಠ ಕ್ಯಾಂಪಸ್‌ನಲ್ಲಿ ಮೇ 22ರ ಗುರುವಾರ ಬೆಳಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಉದ್ಯೋಗ ಮೇಳ ನಡೆಯಲಿದೆ. ಈ ಬೃಹತ್ ಉದ್ಯೋಗ ಮೇಳದಲ್ಲಿ ಕೊಪ್ಪಳ, ಹುಬ್ಬಳ್ಳಿ, ಬೆಂಗಳೂರು, ಬೆಳಗಾವಿ, ಬಳ್ಳಾರಿ, ಹಾಸನ, ಶಿವಮೊಗ್ಗ ಹಾಗೂ ಇತರ ಜಿಲ್ಲೆಗಳ ಪ್ರತಿಷ್ಠಿತ ಕಂಪನಿಗಳು ಭಾಗವಹಿಸಲಿದ್ದು, ತಮ್ಮಲ್ಲಿನ ಖಾಲಿ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ.

ಈ ಉದ್ಯೋಗ ಮೇಳದಲ್ಲಿ 18 ರಿಂ 35 ವರ್ಷದ ಆಸಕ್ತ ನಿರುದ್ಯೋಗ ಪುರುಷ, ಮಹಿಳಾ ಹಾಗೂ ವಿಕಲಚೇತನ ಅಭ್ಯರ್ಥಿಗಳು ಭಾಗವಹಿಸಬಹುದು. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಕೊಪ್ಪಳ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರವನ್ನು ಸಂಪರ್ಕಿಸಿ, ದೂರವಾಣಿ ಸಂಖ್ಯೆ 9353515518.

ಉದ್ಯೋಗ ಮೇಳದಲ್ಲಿ ಎಸ್.ಎಸ್.ಎಲ್.ಸಿ, ಪಿಯುಸಿ, ತತ್ಸಮಾನ, ಐಟಿಐ, ಡಿಪ್ಲೋಮಾ, ಕಂಪ್ಯೂಟರ್ ತರಬೇತಿ ಹಾಗೂ ಯಾವುದೇ ಪದವಿ ಪಡೆದ ಅಭ್ಯರ್ಥಿಗಳು, ತಮ್ಮ ವಿದ್ಯಾರ್ಹತೆಯ ಎಲ್ಲಾ ಪ್ರಮಾಣ ಪತ್ರಗಳ 10 ಪ್ರತಿ ಮತ್ತು ಆಧಾರ್‌ ಕಾರ್ಡ್‌ ಪ್ರತಿ, ರೆಸ್ಯೂಮ್‌ ಹಾಗೂ ಪಾಸ್ ಪೋರ್ಟ್ ಅಳತೆಯ 2 ಭಾವಚಿತ್ರಗಳೊಂದಿಗೆ ಭಾಗವಹಿಸಬಹುದು.

ಅಪ್ರೆಂಟೀಸ್ ತರಬೇತಿಗೆ ಆಯ್ಕೆ: ಬಳ್ಳಾರಿ ನಗರದ ರೇಡಿಯೋ ಪಾರ್ಕ್ ಹತ್ತಿರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಮೇ 21ರಂದು ಬೆಳಗ್ಗೆ 9 ಗಂಟೆಗೆ ಅಪ್ರೆಂಟೀಸ್ ತರಬೇತಿಗಾಗಿ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, ಆಸಕ್ತ ಅಭ್ಯರ್ಥಿಗಳು ಭಾಗವಹಿಸಬಹುದು.

ಬೆಂಗಳೂರಿನ ಟೊಯೋಟಾ, ಕಿರ್ಲೋಸ್ಕರ್, ಹೊಂಡಾ ಮೋಟಾರ್ ಸೈಕಲ್ ಕಂಪನಿಯಲ್ಲಿ ಅಪ್ರೆಂಟಿಸ್ ತರಬೇತಿ ಆಯ್ಕೆಗಾಗಿ ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನ ನಡೆಸಲಾಗುತ್ತದೆ.

ಆಸಕ್ತ ಅಭ್ಯರ್ಥಿಗಳು 18 ವರ್ಷ ಪೂರೈಸಿರಬೇಕು. ಆಧಾರ್ ಕಾರ್ಡ್ ಪ್ರತಿ, ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಐ.ಟಿ.ಐ ಅಂಕಪಟ್ಟಿ, ಎರಡು ಭಾವಚಿತ್ರ ಹಾಗೂ ಸ್ವ-ವಿವರದ ಪ್ರತಿ ಜೊತೆ ಹಾಜರಾಗಬೇಕಿದೆ.

ಫಿಟ್ಟರ್, ಟರ್ನರ್, ಎಲೆಕ್ಟ್ರಿಷಿಯನ್, ವೆಲ್ಡರ್, ಇ.ಎಂ., ಎಂ.ಎಂ.ವಿ., ಮೆಕ್ಯಾನಿಕ್ ಡೀಸೆಲ್ ವೃತ್ತಿಗಳ ಅಂತಿಮ ವರ್ಷದ ವಿದ್ಯಾರ್ಥಿಗಳು ಹಾಗೂ ಐ.ಟಿ.ಐ ಪಾಸಾದ ಆಸಕ್ತಿಯುಳ್ಳ ಅಭ್ಯರ್ಥಿಗಳು ಹಾಜರಾಗಬಹುದು.

ಗೌರವಧನದ ಆಧಾರದ ಮೇಲೆ ತಾತ್ಕಾಲಿಕ ಸೇವೆಗೆ ಅರ್ಜಿ ಆಹ್ವಾನ: ದಾವಣಗೆರೆ ಜಿಲ್ಲೆಯ ಮಲೇಬೆನ್ನೂರು ಪುರಸಭೆಯ ವ್ಯಾಪ್ತಿಯಲ್ಲಿ ಸ್ವಚ್ಛ ಭಾರತ ಮಿಷನ್ (ನ)-2.0 ಯೋಜನೆಯ ಮಾಹಿತಿ ಶಿಕ್ಷಣ ಮತ್ತು ಸಂವಹನ ಘಟಕದಡಿಯಲ್ಲಿ ಘನತ್ಯಾಜ್ಯ ಮತ್ತು ದ್ರವ ತ್ಯಾಜ್ಯ ನಿರ್ವಹಣೆಯ ಕುರಿತಂತೆ ನಗರ ಸ್ಥಳೀಯ ಸಂಸ್ಥೆಗಳ ಮಟ್ಟದಲ್ಲಿ ವಿವಿಧ ಬಗೆಯ ಚಟುವಟಿಕೆಗಳನ್ನು ಕೈಗೊಳ್ಳಲು ಸ್ವ-ಸಹಾಯ ಗುಂಪುಗಳ ಸದಸ್ಯೇತರ ನೇಮಕಾತಿ (ಘನತ್ಯಾಜ್ಯ, ಪಾರಂಪರಿಕ ತ್ಯಾಜ್ಯ, ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ಸಿಡಿ ತ್ಯಾಜ್ಯ ನಿರ್ವಹಣೆ ಸ್ವಚ್ಛ-ಸರ್ವೇಕ್ಷಣ, ನಗರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಓಡಿಎಫ್, ಓಡಿಎಫ್, ಸ್ಟಾರ್ ರೇಟಿಂಗ್ಸ್ ಮತ್ತು ಇತರೆ ವಿಷಯಗಳ ಕುರಿತು ಮನೆ ಮನೆಗೂ ಭೇಟಿ ನೀಡಿ ನೇರವಾಗಿ ಮಾತನಾಡುವುದರ ಮೂಲಕ ಐ.ಇ.ಸಿ ಚಟುವಟಿಕೆಗಳನ್ನು ಕೈಗೊಳ್ಳಲು ಮಹಿಳಾ ಸ್ವ-ಸಹಾಯ ಗುಂಪುಗಳಿಂದ 2 ಸದಸ್ಯರುಗಳನ್ನು ಮಾಸಿಕ ಗೌರವಧನ ಆಧಾರದ ಮೇಲೆ ತಾತ್ಕಾಲಿಕ ಸೇವೆ ಪಡೆದುಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಮಹಿಳಾ ಅಭ್ಯರ್ಥಿಗಳು ಅಗತ್ಯ ದಾಖಲಾತಿಯೊಂದಿಗೆ ಮೇ 23ರೊಳಗಾಗಿ ನಿಗದಿತ ಅರ್ಜಿ ನಮೂನೆಯನ್ನು ಕಛೇರಿಯಿಂದ ಪಡೆದು ಮುಖ್ಯಾಧಿಕಾರಿಗಳು, ಪುರಸಭೆ, ಮಲೇಬೆನ್ನೂರು ವಿಳಾಸಕ್ಕೆ ದ್ವಿ-ಪ್ರತಿಯಲ್ಲಿ ಸಲ್ಲಿಸಬೇಕು ಎಂದು ಸೂಚನೆ ನೀಡಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+