Breaking; ಗವಿಸಿದ್ದೇಶ್ವರ ಮಠಕ್ಕೆ 10 ಕೋಟಿ ಅನುದಾನ ನೀಡಿದ ಸರ್ಕಾರ
ಕೊಪ್ಪಳ, ಜೂನ್ 27; ಕರ್ನಾಟಕ ಸರ್ಕಾರ ಕೊಪ್ಪಳದ ಗವಿಸಿದ್ದೇಶ್ವರ ಮಠದ ವಿದ್ಯಾರ್ಥಿಗಳ ವಸತಿ ಮತ್ತು ಪ್ರಸಾದ ನಿಲಯ ಕಟ್ಟಡಕ್ಕೆ 10 ಕೋಟಿ ರೂ. ಅನುದಾನ ಘೋಷಣೆ ಮಾಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅನುದಾನ ಬಿಡುಗಡೆ ಮಾಡಲು ಸೂಚನೆ ನೀಡಿದ್ದಾರೆ.
ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗವಿಸಿದ್ದೇಶ್ವರ ಮಠದ ಉಚಿತ ವಸತಿ ಮತ್ತು ಪ್ರಸಾದ ನಿಲಯ ಕಟ್ಟಡ ನಿರ್ಮಾಣಕ್ಕೆ 10 ಕೋಟಿ ರೂ. ಅನುದಾನ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ಕೊಟ್ಟಿದ್ದಾರೆ.
ಮಂಗಳವಾರ ಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿ ಅನಿಲ ಕುಮಾರ್ ಈ ಕುರಿತು ಆದೇಶ ಹೊರಡಿಸಿದ್ದಾರೆ. ಕೊಪ್ಪಳ ಸಂಸದ ಸಂಗಣ್ಣ ಕರಡಿ ಹಾಗೂ ಜಿಲ್ಲೆಯ ಶಾಸಕರು ಮಠಕ್ಕೆ ಅನುದಾನ ಒದಗಿಸಲು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ಈ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಅನುದಾನ ಒದಗಿಸಲು ಸೂಚಿಸಿದ್ದಾರೆ.

ಸುಮಾರು 5 ಸಾವಿರ ವಿದ್ಯಾರ್ಥಿಗಳಿಗಾಗಿ ಮಠವು ಉಚಿತ ವಸತಿ ಮತ್ತು ಪ್ರಸಾದ ನಿಲಯವನ್ನು ನಿರ್ಮಿಸುತ್ತಿದೆ. ಹಲವಾರು ವರ್ಷಗಳಿಂದ ಶ್ರೀಮಠದಲ್ಲಿ ವಿದ್ಯಾರ್ಥಿಗಳಿಗೆ ದಾಸೋಹ ನೀಡಲಾಗುತ್ತಿದೆ. ಈಗ ಮಕ್ಕಳಿಗೆ ವ್ಯವಸ್ಥಿತವಾದ ಪ್ರಸಾದ ನಿಲಯ ನಿರ್ಮಾಣವಾಗುತ್ತಿದೆ.
ಮುಖ್ಯಮಂತ್ರಿಗಳು 10 ಕೋಟಿ ರೂ. ಅನುದಾನ ನೀಡುವುದಕ್ಕೆ ಒಪ್ಪಿಗೆ ನೀಡಿರುವುದಕ್ಕೆ ಕೊಪ್ಪಳ ಗವಿಮಠದ ಭಕ್ತರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕಲಬುರಗಿ ಸಂಸದ ಡಾ. ಉಮೇಶ್ ಜಾಧವ್ ಟ್ವೀಟ್ ಮಾಡಿ, 'ಶ್ರೀ ಗವಿಸಿದ್ದೇಶ್ವರ ಮಠದ 5000 ವಿದ್ಯಾರ್ಥಿಗಳು ಉಚಿತ ವಸತಿ ಮತ್ತು ಪ್ರಸಾದ ನಿಲಯ ಕಟ್ಟಡಕ್ಕೆ ಸರ್ಕಾರದಿಂದ 10 ಕೋಟಿ ರೂಪಾಯಿ ಮಂಜೂರು ಮಾಡಿ ಬಿಡುಗಡೆ ಮಾಡಿದ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಅವರಿಗೆ ತುಂಬು ಹೃದಯದ ಧನ್ಯವಾದಗಳು' ಎಂದು ಹೇಳಿದ್ದಾರೆ.












Click it and Unblock the Notifications