ಕರ್ನಾಟಕ ಮಳೆ: ನದಿಯಲ್ಲಿ ಕೊಚ್ಚಿಹೋದ ಇಬ್ಬರು ಪೊಲೀಸರಿಗಾಗಿ ಶೋಧ

ಕೊಪ್ಪಳ, ಸೆಪ್ಟೆಂಬರ್‌ 06: ಕರ್ನಾಟಕದ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಬಂಡಿಹಾಳ ಗ್ರಾಮದಲ್ಲಿ ಮಂಗಳವಾರ ಉಕ್ಕಿ ಹರಿಯುವ ನದಿಯಲ್ಲಿ ಕೊಚ್ಚಿ ಹೋಗಿರುವ ಇಬ್ಬರು ಪೊಲೀಸರ ಪತ್ತೆಗೆ ಕಾರ್ಯಾಚರಣೆ ಆರಂಭಿಸಲಾಗಿದೆ.

ಮುಂಡರಗಿ ಪೊಲೀಸ್ ಠಾಣೆ ವ್ಯಾಪ್ತಿಯ ಮಹೇಶ ಹಾಗೂ ನಿಂಗಪ್ಪ ಎಂಬುವರು ಕೊಚ್ಚಿ ಹೋದ ಪೊಲೀಸರು ಎಂದು ಗುರುತಿಸಲಾಗಿದೆ. ಕರ್ತವ್ಯ ಮುಗಿಸಿ ಹಿಂತಿರುಗುತ್ತಿದ್ದಾಗ ಈ ದುರಂತ ಸಂಭವಿಸಿದೆ. ಕೊಪ್ಪಳ ತಾಲೂಕಿನ ಹಿರೇಹಳ್ಳದ ಅಣೆಕಟ್ಟಿನ ನಾಲ್ಕೂ ಗೇಟ್‌ಗಳಿಂದ ನೀರು ಬಿಟ್ಟಿದ್ದರಿಂದ ನದಿ ಉಕ್ಕಿ ಹರಿಯುತ್ತಿದೆ.

ಈ ನಡುವೆ ಸೋಮವಾರ ಸಂಜೆ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದ ನಾಗಮ್ಮ ಕವಲೂರು (52) ಮೃತದೇಹವನ್ನು ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಆಕೆಯ ಶವ ಗದಗ ಜಿಲ್ಲೆಯಲ್ಲಿ 1.5 ಕಿಲೋಮೀಟರ್ ದೂರದಲ್ಲಿ ಪತ್ತೆಯಾಗಿದೆ. ಬೆಂಗಳೂರಿನಲ್ಲಿ ಸೋಮವಾರ ತಡರಾತ್ರಿ ಸುರಿದ ಭಾರೀ ಮಳೆಗೆ 23 ವರ್ಷದ ಬಿಕಾಂ ಪದವೀಧರ ಮಹಿಳೆಯೊಬ್ಬರು ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ.

ಬೆಂಗಳೂರಿನಲ್ಲಿ ಸೋಮವಾರ ತಡರಾತ್ರಿ ಮನೆಗೆ ಬರುತ್ತಿದ್ದ ಬಿಕಾಂ ಪದವೀಧರ ಅಖಿಲಾ ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಕೆ ಬೈಕ್‌ನಲ್ಲಿ ವೈಟ್‌ಫೀಲ್ಡ್ ಪೊಲೀಸ್ ವ್ಯಾಪ್ತಿಯಲ್ಲಿ ಜಲಾವೃತಗೊಂಡ ರಸ್ತೆಯಲ್ಲಿ ಚಲಿಸುತ್ತಿದ್ದಳು. ಖಾಸಗಿ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದ ಅಖಿಲಾ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ದುರಂತ ಸಂಭವಿಸಿದೆ. ಆಕೆ ರಸ್ತೆಯ ಪಕ್ಕದಲ್ಲಿ ವಿದ್ಯುತ್ ಕಂಬವನ್ನು ಹಿಡಿಯಲು ಮುಂದಾದಾಗ ಹೊರಬಿದಿದ್ದಿದ್ದ ವಿದ್ಯುತ್ ತಂತಿಗಳು ವಿದ್ಯುತ್ ಸ್ಪರ್ಶಕ್ಕೆ ಕಾರಣವಾಗಿದ್ದು, ಗಾಯಗಳಿಂದ ಆಕೆ ಸಾವನ್ನಪ್ಪಿದ್ದಾಳೆ.

ರಸ್ತೆಗಳಲ್ಲಿ ಕಾರುಗಳ ತೇಲಾಟ

ರಸ್ತೆಗಳಲ್ಲಿ ಕಾರುಗಳ ತೇಲಾಟ

ಈ ನಿಟ್ಟಿನಲ್ಲಿ ಬೆಂಗಳೂರು ವಿದ್ಯುತ್ ಸರಬರಾಜು ಮಂಡಳಿ ಕಂಪನಿ (ಬೆಸ್ಕಾಂ) ನಿರ್ಲಕ್ಷ್ಯವೇಕೆ ಎಂದು ಜನತೆ ಪ್ರಶ್ನಿಸಿದ್ದಾರೆ. ಬೆಂಗಳೂರಿನ ಯಮಲೂರು ಪ್ರದೇಶದಲ್ಲಿ ಎಲ್ಲಾ ಮುಖ್ಯ ರಸ್ತೆಗಳು ಮತ್ತು ಅಡ್ಡರಸ್ತೆಗಳು ಜಲಾವೃತವಾಗಿದ್ದು ಅಪಾರ್ಟ್‌ಮೆಂಟ್ ನಿವಾಸಿಗಳು ಟ್ರ್ಯಾಕ್ಟರ್‌ಗಳಲ್ಲಿ ಪ್ರಯಾಣಿಸುತ್ತಿದ್ದಾರೆ. ಈ ವೇಳೆ ರಸ್ತೆಗಳಲ್ಲಿ ಕಾರುಗಳು ತೇಲುತ್ತಿರುವುದು ಕಂಡುಬಂತು. ಶಾಲಾ ಮಕ್ಕಳನ್ನೂ ಟ್ರ್ಯಾಕ್ಟರ್‌ಗಳಲ್ಲಿ ಸಾಗಿಸಲಾಗುತ್ತಿತ್ತು.

ಅನ್‌ ಅಕಾಡೆಮಿಯ ಸಿಇಒ ರಕ್ಷಣೆ

ಅನ್‌ ಅಕಾಡೆಮಿಯ ಸಿಇಒ ರಕ್ಷಣೆ

ಮಂಗಳವಾರ ಭಾರತದ ಸಿಲಿಕಾನ್ ವ್ಯಾಲಿ ಬೆಂಗಳೂರಿನಾದ್ಯಂತ ನಿವಾಸಿಗಳು ಮುಳುಗಿದ್ದರಿಂದ ರಸ್ತೆಗಳು ಜಲಾವೃತವಾಗಿದ್ದು, ಸಾರಿಗೆ ಸಾಧನಗಳಾಗಿರುವ ದೋಣಿಗಳು ಮತ್ತು ಟ್ರ್ಯಾಕ್ಟರ್‌ಗಳಲ್ಲಿ ಜನರನ್ನು ಪ್ರವಾಹ ಪ್ರದೇಶಗಳಿಂದ ರಕ್ಷಿಸಲಾಗುತ್ತಿದೆ. ಈ ಮಧ್ಯೆ ಅನ್‌ ಅಕಾಡೆಮಿಯ ಸಹ ಸಂಸ್ಥಾಪಕ ಮತ್ತು ಸಿಇಒ ಗೌರವ್ ಮುಂಜಾಲ್ ಅವರು ತಮ್ಮ ನೆರೆಹೊರೆಯವರಿಂದ ಟ್ರ್ಯಾಕ್ಟರ್‌ನಲ್ಲಿ ತನ್ನನ್ನು, ತಮ್ಮ ಕುಟುಂಬ ಮತ್ತು ತನ್ನ ನಾಯಿಯನ್ನು ರಕ್ಷಿಸಿದ ವೀಡಿಯೊವನ್ನು ಟ್ವೀಟ್ ಮಾಡಿದ್ದಾರೆ. ಮಳೆಯ ವಿಷಯಗಳು ಕೆಟ್ಟದಾಗಿವೆ. ದಯವಿಟ್ಟು ಕಾಳಜಿ ವಹಿಸಿ ಎಂದು ಗೌರವ್ ಮುಂಜಾಲ್ ಟ್ವಿಟರ್‌ನಲ್ಲಿ ಹೇಳಿದ್ದಾರೆ.

ಮತ್ತೆ ವರ್ಕ್‌ ಪ್ರಮ್‌ ಹೋ ಘೋಷಣೆ

ಮತ್ತೆ ವರ್ಕ್‌ ಪ್ರಮ್‌ ಹೋ ಘೋಷಣೆ

ನಗರದ ಬೀದಿಗಳು ನೀರಿನಿಂದ ಮುಳುಗಿರುವಾಗ ಮತ್ತು ಟ್ರಾಫಿಕ್ ಜಾಮ್‌ ಉಂಟಾಗುತ್ತಿರುವುದರಿಂದ ಅನೇಕ ಕಂಪನಿಗಳು ತಮ್ಮ ಸಿಬ್ಬಂದಿಯನ್ನು ಮನೆಯಿಂದಲೇ ಕೆಲಸ ಮಾಡುವಂತೆ ಸೂಚನೆ ನೀಡಿವೆ. ಏತನ್ಮಧ್ಯೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಳೆ ಅವಾಂತರಕ್ಕೆ ಹಿಂದಿನ ಕಾಂಗ್ರೆಸ್ ಸರ್ಕಾರದ ದುರಾಡಳಿತವೇ ಕಾರಣವೆಂದು ಆರೋಪಿಸಿದ್ದಾರೆ.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿರುಗೇಟು

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿರುಗೇಟು

ಬೆಂಗಳೂರಿನ ಮೂಲಸೌಕರ್ಯಗಳನ್ನು ನಿಭಾಯಿಸಲು ನಮ್ಮ ಅಧಿಕಾರಿಗಳು, ಎಂಜಿನಿಯರ್‌ಗಳು, ಕಾರ್ಮಿಕರು ಮತ್ತು ಎಸ್‌ಡಿಆರ್‌ಎಫ್ ತಂಡಗಳು 24/7 ಕೆಲಸ ಮಾಡುತ್ತಿವೆ. ನಾವು ಸಾಕಷ್ಟು ಒತ್ತುವರಿಯನ್ನು ತೆರವುಗೊಳಿಸಿದ್ದೇವೆ ಮತ್ತು ಅದನ್ನು ಮುಂದುವರಿಸುತ್ತೇವೆ ಎಂದು ಬೊಮ್ಮಾಯಿ ಹೇಳಿದರು. ಈ ಮಧ್ಯೆ ಸಿಎಂ ಕಾಂಗ್ರೆಸ್‌ ಮೇಲೆ ಮಾಡಿರುವ ಆರೋಪಕ್ಕೆ ಮಾಜಿ ಸಿಎಂ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+