ಗಂಗಾವತಿ: ಪಿಯು ಪರೀಕ್ಷೆಗೂ ಜಗಳಕ್ಕೂ ಸಂಬಂಧವಿಲ್ಲ
ಕೊಪ್ಪಳ, ಮಾರ್ಚ್ 02: ಗಂಗಾವತಿಯ ವೈ. ಜೆ ಪದವಿಪೂರ್ವ ಕಾಲೇಜಿನಲ್ಲಿ ಮಾ. 01 ರಂದು ನಡೆದಿದೆ ಎನ್ನಲಾದ ಅಹಿತಕರ ಘಟನೆಗೂ, ಇದೇ ಪರೀಕ್ಷಾ ಕೇಂದ್ರದಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಗೂ ಯಾವುದೇ ಸಂಬಂಧವಿಲ್ಲ ಎಂದು ಕೊಪ್ಪಳ ಜಿಲ್ಲಾಡಳಿತ ಸ್ಪಷ್ಟನೆ ನೀಡಿದೆ. ಈ ವಿಷಯವನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್ ಫೇಸ್ಬುಕ್ನಲ್ಲಿ ಶೇರ್ ಮಾಡಿದ್ದಾರೆ.
ವೈ.ಜೆ. ಪಿಯು ಕಾಲೇಜಿನಲ್ಲಿ ಅದೇ ಕಾಲೇಜಿನ ನಿರ್ದೇಶಕನ ಮೇಲೆ ಗಂಗಾವತಿಯ ವಿದ್ಯಾನಿಕೇತನ ಕಾಲೇಜಿನ ಪ್ರಾಂಶುಪಾಲ ಮತ್ತು ಸಿಬ್ಬಂದಿ ಹಲ್ಲೆ ನಡೆಸಿದ್ದರು, ತಮ್ಮ ಕಾಲೇಜು ವಿದ್ಯಾರ್ಥಿಗಳಿಗೆ ನಕಲು ಮಾಡಲು ಅವಕಾಶ ಕೊಡಲಿಲ್ಲವೆಂದು ಹಲ್ಲೆ ನಡೆಸಲಾಗಿದೆ ಎಂದು ಸುದ್ದಿಯಾಗಿತ್ತು, ಆದರೆ ಇದನ್ನು ಜಿಲ್ಲಾಡಳಿತ ಅಲ್ಲಗಳೆದಿದೆ.

ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರವಾಗಿರುವ ಗಂಗಾವತಿಯ ವೈ. ಜನತಾರಾಣಿ ಪದವಿಪೂರ್ವ ಕಾಲೇಜಿನಲ್ಲಿ ಕಳೆದ ಮಾ. 01 ರಂದು ಸಂಜೆ 6-30 ಗಂಟೆಯ ನಂತರ ನಡೆದಿರುವ ಅಹಿತಕರ ಘಟನೆಗೂ, ದ್ವಿತೀಯ ಪರೀಕ್ಷೆಗೂ ಯಾವುದೇ ಸಂಬಂಧವಿರುವುದಿಲ್ಲ. ಈ ಕುರಿತಂತೆ ಪೊಲೀಸ್ ಇಲಾಖೆ, ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರಿಂದ ಮಾಹಿತಿ ಪಡೆಯಲಾಗಿದೆ. ಪರೀಕ್ಷೆಯ ಪ್ರಾರಂಭದಿಂದ ಮುಕ್ತಾಯದವರೆಗೂ ಪರೀಕ್ಷಾ ಕೇಂದ್ರದಲ್ಲಿ ಯಾವುದೇ ಅಹಿತಕರ ಘಟನೆಯಾಗಲಿ, ದುರ್ನಡತೆಯಾಗಲಿ ಅಥವಾ ಕಾನೂನು ಬಾಹಿರ ಚಟುವಟಿಕೆಗಳಾಗಲಿ ಕೇಂದ್ರದ ಸಿಬ್ಬಂದಿ ಅಥವಾ ವಿದ್ಯಾರ್ಥಿಗಳಿಂದ ನಡೆದಿಲ್ಲ. ಪರೀಕ್ಷೆ ಜರುಗುವ ಎಲ್ಲ ಕೊಠಡಿಗಳಲ್ಲಿ ಸಿ.ಸಿ. ಟಿವಿ ಕ್ಯಾಮೆರಾ ಅಳವಡಿಸಲಾಗಿದ್ದು, ಪರೀಕ್ಷೆ ಮುಗಿದ ಬಳಿಕ, ಉತ್ತರ ಪತ್ರಿಕೆಗಳನ್ನು ನಿಯಮಾನುಸಾರವಾಗಿ ಸಮರ್ಪಕವಾಗಿ ಅಂಚೆ ಮೂಲಕ ಕಳುಹಿಸಿಕೊಡಲಾಗಿದೆ ಎಂದು ಪಿಯು ಇಲಾಖೆ ಸ್ಪಷ್ಟೀಕರಣ ನೀಡಿದೆ.
ಘಟನೆ ಕುರಿತಂತೆ ವಿಚಾರಣೆಯ ಸಂದರ್ಭದಲ್ಲಿ ಬಂದ ಮಾಹಿತಿಯ ಪ್ರಕಾರ, ಅಹಿತಕರ ಘಟನೆಯು ಅಂದು ಸಂಜೆ 6-30 ರಿಂದ 7-30 ರ ಅವಧಿಯಲ್ಲಿ ಜರುಗಿರುವುದಾಗಿ ತಿಳಿದುಬಂದಿದೆ. ಗಂಗಾವತಿಯ ವಿದ್ಯಾನಿಕೇತನ ಪ.ಪೂ. ಕಾಲೇಜು ಹಾಗೂ ವೈ. ಜನತಾರಾಣಿ ಪ.ಪೂ. ಕಾಲೇಜುಗಳ ಆಡಳಿತ ಮಂಡಳಿ ಸದಸ್ಯರ ನಡುವೆ ಹಿಂದಿನಿಂದಲೂ ವೈಯಕ್ತಿಕ ದ್ವೇಷವಿರುವುದಾಗಿ ತಿಳಿದುಬಂದಿದ್ದು, ಪರಸ್ಪರ ಹೊಡೆದಾಟ ನಡೆದ ಪ್ರಕರಣ ಕೂಡ ಜರುಗಿತ್ತು ಎಂಬುದಾಗಿ ಪೊಲೀಸ್ ಇಲಾಖೆ ಮೂಲಗಳಿಂದ ತಿಳಿದುಬಂದಿದೆ.
ಹೀಗಾಗಿ ಪರೀಕ್ಷೆಗೂ, ಕಾಲೇಜಿನಲ್ಲಿ ಅಂದು ಸಂಜೆ ನಡೆದ ಘಟನೆಗೂ ಯಾವುದೇ ಸಂಬಂಧ ಇರುವುದಿಲ್ಲ. ಅಲ್ಲದೆ ಪರೀಕ್ಷಾ ಕಾರ್ಯದಲ್ಲಿ ಭಾಗವಹಿಸಿದ ಇಲಾಖಾ ಸಿಬ್ಬಂದಿಯ ಮೇಲೆ ಯಾವುದೇ ಹಲ್ಲೆ ನಡೆದಿಲ್ಲ. ಗಂಗಾವತಿ ಪೊಲೀಸ್ ಠಾಣೆಯಲ್ಲಿ ದಾಖಲಾದ ಎಫ್ಐಆರ್ ವರದಿಯನ್ವಯ ಎರಡು ಗುಂಪುಗಳ ವೈಯಕ್ತಿಕ ದ್ವೇಷ ಹಾಗೂ ಇನ್ನಿತರ ಕಾರಣಗಳಿಂದ ಹೊಡೆದಾಡಿಕೊಂಡು, ಪರೀಕ್ಷೆಯ ನೆಪ ಹೇಳುತ್ತಿರುವುದು ಕಂಡುಬಂದಿರುತ್ತದೆ.
ಮುಂದಿನ ಪರೀಕ್ಷಾ ದಿನಗಳಿಗೆ ಮುಂಜಾಗ್ರತಾ ಕ್ರಮವಾಗಿ ವೈ. ಜನತಾರಾಣಿ ಪದವಿಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಒದಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳ ಕಚೇರಿಯಿಂದ ಸ್ಪಷ್ಟನೆ ನೀಡಲಾಗಿದೆ.
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications