ಕೊಪ್ಪಳದಲ್ಲಿ ಜೆಡಿಎಸ್ ಪಕ್ಷಕ್ಕೆ ಭಾರೀ ಹಿನ್ನಡೆ!
ಕೊಪ್ಪಳ, ಜುಲೈ 14; ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ಸಮಯದಲ್ಲಿ ಜೆಡಿಎಸ್ ಪಕ್ಷಕ್ಕೆ ಭಾರೀ ಹಿನ್ನಡೆಯಾಗಿದೆ. ರಾಜ್ಯ ಉಪಾಧ್ಯಕ್ಷರು ಪಕ್ಷ ತೊರೆದು ಬಿಜೆಪಿ ಸೇರಿದ್ದಾರೆ.
ಜೆಡಿಎಸ್ ರಾಜ್ಯ ಉಪಾಧ್ಯಕ್ಷ, ಮಾಜಿ ಜಿಲ್ಲಾಧ್ಯಕ್ಷ ಪ್ರದೀಪಗೌಡ ಮಾಲಿ ಪಾಟೀಲ ಬಿಜೆಪಿ ಸೇರಿದರು. ಕೃಷಿ, ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಬಿ. ಸಿ. ಪಾಟೀಲ್ ಸಮ್ಮುಖದಲ್ಲಿ ಪಕ್ಷ ಸೇರ್ಪಡೆಗೊಂಡಿದ್ದಾರೆ.
ಜುಲೈ 9ರಂದು ಜೆಡಿಎಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದ ಪ್ರದೀಪಗೌಡ ಮಾಲಿ ಪಾಟೀಲ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಬೆಂಬಲಿಗರ ಜೊತೆ ಅವರು ಈಗ ಬಿಜೆಪಿ ಸೇರಿದ್ದಾರೆ.

"ಎಚ್. ಡಿ. ಕುಮಾರಸ್ವಾಮಿ ಬಕೆಟ್ ಹಿಡಿಯುವವರ, ಕಿವಿ ಕಡಿಯುವವರ ಮಾತು ಕೇಳುತ್ತಾರೆ. ಪಕ್ಷದ ನಿಜವಾದ ಕಾರ್ಯಕರ್ತರಿಗೆ ಜೆಡಿಎಸ್ ಪಕ್ಷದಲ್ಲಿ ಬೆಲೆ ಇಲ್ಲ" ಎಂದು ಪ್ರದೀಪಗೌಡ ಮಾಲಿ ಪಾಟೀಲ ವಾಗ್ದಾಳಿ ನಡೆಸಿದ್ದರು.
"10 ವರ್ಷದಿಂದ ನಾನು ಜೆಡಿಎಸ್ ಪಕ್ಷದಲ್ಲಿದ್ದೇನೆ. 2 ಬಾರಿ ಕೊಪ್ಪಳ ವಿಧಾನಸಭೆ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದೇನೆ. ಆಗಲೂ ನನಗೆ ಪಕ್ಷ ಬೆಂಬಲ ನೀಡಿಲ್ಲ. ಶೀಘ್ರದಲ್ಲಿಯೇ ಕೊಪ್ಪಳ ಜಿಲ್ಲೆಯ ಜೆಡಿಎಸ್ನ ಹಲವು ಪದಾಧಿಕಾರಿಗಳು ರಾಜೀನಾಮೆ ನೀಡಲಿದ್ದಾರೆ" ಎಂದು ಹೇಳಿದ್ದರು.
"ಜೆಡಿಎಸ್ ಪಕ್ಷದಲ್ಲಿ ಕಾರ್ಯಕರ್ತರನ್ನು ಕಡೆಗಣಿಸಲಾಗುತ್ತಿದೆ. ಅದಕ್ಕಾಗಿ ಉತ್ತರ ಕರ್ನಾಟಕದಲ್ಲಿ ಪಕ್ಷ ಬೆಳೆಯುತ್ತಿಲ್ಲ. ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ" ಎಂದು ತಿಳಿಸಿದ್ದರು.
ಪ್ರದೀಪಗೌಡ ಮಾಲಿ ಪಾಟೀಲ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದೇನೆ ಎಂದು ಹೇಳಿದ್ದಾರೆ. ತಮ್ಮ ನೂರಾರು ಬೆಂಬಲಿಗರ ಜೊತೆ ಪ್ರದೀಪಗೌಡ ಮಾಲಿ ಪಾಟೀಲ ಬಿಜೆಪಿ ಸೇರಿದ್ದು, ಜೆಡಿಎಸ್ ಪಕ್ಷಕ್ಕೆ ಹಿನ್ನಡೆಯಾಗಿದೆ.
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ -
SWR: ಬೆಂಗಳೂರಿನಿಂದ ಇಲ್ಲಿಗೆ ಮಾ.10ರಿಂದ ವಿಶೇಷ ರೈಲುಗಳ ಸಂಚಾರ, ವೇಳಾಪಟ್ಟಿ ಹೀಗಿದೆ












Click it and Unblock the Notifications