CM Siddaramaiah: ಕೊಪ್ಪಳ, ವಿಜಯನಗರ ಸಿಎಂ ಪ್ರವಾಸ ರದ್ದು
ವಿಜಯನಗರ ಆಗಸ್ಟ್ 5: ಸಿಎಂ ಸಿದ್ದರಾಮಯ್ಯ ಅವರ ಕೊಪ್ಪಳ ಹಾಗೂ ವಿಜಯನಗರ ಪ್ರವಾಸವನ್ನು ದಿಢೀರ್ ರದ್ದು ಮಾಡಲಾಗಿದೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು ಎನ್ನುವ ಒತ್ತಾಯದ ಬೆನ್ನಲ್ಲೆ ಸಿದ್ದರಾಮಯ್ಯ ಅವರು ವಿಜಯನಗರ ಪ್ರವಾಸ ರದ್ದಾಗಿದ್ದು ಸಾಕಷ್ಟು ಪ್ರಶ್ನೆಗಳನ್ನು ಹುಟ್ಟು ಹಾಕಿದೆ.
ಅಂದಹಾಗೆ ನಾಳೆ (ಆಗಸ್ಟ್ 6) ಸಿಎಂ ಸಿದ್ದರಾಮಯ್ಯ ಅವರು ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಬೇಕಿತ್ತು. ಈ ಕಾರ್ಯಕ್ರಮವನ್ನು ಸಿಎಂ ಸಿದ್ದರಾಮಯ್ಯ ಬರುವ ಒಂದು ದಿನಕ್ಕೂ ಮೊದಲೇ ರದ್ದು ಮಾಡಲಾಗಿದೆ. ಈ ಬಗ್ಗೆ ವಿಜಯನಗರ ಜಿಲ್ಲಾಧಿಕಾರಿ ಎಂ.ಎಸ್ ದಿವಾಕರ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪಾದಯಾತ್ರೆ ಶುರು ಮಾಡಿದೆ. ಇನ್ನೂ ಇತ್ತ ವಿಧಾನ ಪರಿಷತ್ತಿನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಸಿದ್ದರಾಮ್ಯ ರಾಜಕೀಯ ಭವಿಷ್ಯವನ್ನು ನುಡಿದಿದ್ದಾರೆ.
ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸಬೇಕೆಂದಿದ್ದರು. ಆ ಸಂದರ್ಭದಲ್ಲಿ ಅದೃಷ್ಟವಷಾತ್ ವಾಪಸ್ ಕಳುಹಿಸಲಾಯಿತು. ಇಲ್ಲದಿದ್ದರೆ ಬಂಗಾರದ ಭೂಮಿಯ ಕೋಲಾರಕ್ಕೆ ಕೆಟ್ಟ ಹೆಸರಿನ ಶಾಪ ತಟ್ಟುತ್ತಿತ್ತು. ಸಿದ್ದರಾಮಯ್ಯ ದಲಿತ ಪರ ಎಂದು ಹೇಳಿಕೊಂಡು ಅಧಿಕಾರದ ಚುಕ್ಕಾಣಿ ಹಿಡಿದ ನಂತರ ಎಸ್ಸಿ,ಟಿಪಿಎಸ್ಸಿಗಳ ವಿವಿಧ ಕಾರ್ಯಕ್ರಮಗಳಿಗೆ ಮೀಸಲಾಗಿದ್ದ ಅನುದಾನ ಗ್ಯಾರಂಟಿಗಳಿಗೆ 25369 ಕೋಟಿ ರೂ. ದುರ್ಬಳಕೆ ಮಾಡಿಕೊಂಡಿದ್ದಾರೆ. ಬಜೆಟ್ನಲ್ಲಿ ಗ್ಯಾರಂಟಿಗಳಿಗೆ 52 ಸಾವಿರ ಕೋಟಿ ರು. ಇಟ್ಟಿದ್ದರೂ ಈ ಹಣವನ್ನು ಏಕೆ ಪಡೆದುಕೊಂಡಿದ್ದಾರೆ ಎಂದು ಛಲವಾದಿ ನಾರಾಯಣಸ್ವಾಮಿ ಕಿಡಿ ಕಾರಿದ್ದಾರೆ.
ಅಲ್ಲದೆ ಸಿದ್ದರಾಮಯ್ಯ ವಾಲ್ಮೀಕಿ ಅಭಿವೃದ್ದಿ ನಿಗಮದಲ್ಲಿ 187 ಕೋಟಿ ರೂ ಅನುದಾನ ನೇರವಾಗಿ ಚಿನ್ನದ ಅಂಗಡಿಗಳಿಗೆ ಹೇಗೆ ವರ್ಗಾವಣೆ ಮಾಡಿದ್ದಾರೆ, ಅನುದಾನ ದುರ್ಬಳಿಕೆ ಆಗಿರುವುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಒಪ್ಪಿಕೊಂಡಿದ್ದಾರೆ. ಅಂದ ಮೇಲೆ ಅವರು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯುವ ಅರ್ಹತೆ ಕಳೆದುಕೊಂಡಿದ್ದಾರೆ. ಮೈಸೂರಿನ ಮುಡಾ ಯೋಜನೆಯಲ್ಲಿ 1992 - 93 ರಲ್ಲಿ ನೋಟಿಫೀಕೇಷನ್ ಆಗಿದ್ದರೂ ಡಿ ನೋಟಿಫಿಕೇಷನ್ ಜಾರಿಯಾಗಿರಲಿಲ್ಲ. ಅವರಿಗೆ ಆಗಲೇ 40 ಲಕ್ಷ ರೂ 3 ಕುಟುಂಬಗಳಿಗೆ ಪರಿಹಾರ ಘೋಷಿಸಿತ್ತು ಅವರು ಪಡೆಯದೆ ಹೋದಾಗ ನ್ಯಾಯಾಲಯದ ಸೂಚನೆಯಂತೆ ಅವರ ಬ್ಯಾಂಕ್ ಖಾತೆಯಲ್ಲಿ ಠೇವಣಿ ಇಡಲಾಗಿತ್ತು ನಂತರದಲ್ಲಿ ಕುಟುಂಬದವರಿಂದ ಪತ್ರ ಪಡೆದು ಅಕ್ರಮವಾಗಿ ಡಿ. ನೋಟಿಫೀಕೇಷನ್ ಮಾಡಿದರು ಎಂದು ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದಾರೆ.

ಹೀಗಾಗಿ ಸಿದ್ದರಾಮಯ್ಯ ಸಿಎಂ ಆಗಿ ಉಳಿಯುವುದು ಇನ್ನೂ ಒಂದು ವಾರ ಮಾತ್ರ ಎಂದು ಛಲವಾದಿ ನಾರಾಯಣಸ್ವಾಮಿ ಭವಿಷ್ಯ ನುಡಿದಿದ್ದಾರೆ. ಬಿಜೆಪಿ ಪಾದಯಾತ್ರೆ, ಸದ್ಯದ ಬೆಳವಣಿಗೆಯನ್ನು ಕಂಡರೆ ಸಿದ್ದರಾಮಯ್ಯ ಸಿಎಂ ಖುರ್ಚಿಗೆ ಕಂಠಟ ಶುರುವಾಗಿದಿಯಾ ಅನ್ನೋ ಅನುಮಾನ ಶುರುವಾಗಿದೆ.
-
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್












Click it and Unblock the Notifications