Leopard Attack: ಕೊಪ್ಪಳ ಜಿಲ್ಲೆಯಲ್ಲಿ ಚಿರತೆ ದಾಳಿಯಿಂದ 13 ಕುರಿಗಳು ಬಲಿ
Leopard Attack: ಇತ್ತೀಚಿನ ದಿನಗಳಲ್ಲಿ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಬಿಟ್ಟಿದೆ. ಅಲ್ಲದೆ, ಇವುಗಳ ದಾಳಿಯಿಂದಾಗಿ ಹಲವರು ಪ್ರಾಣ ಕಳೆದುಕೊಂಡಿರುವ ಘಟನೆಗಳು ಹಲವು ಜಿಲ್ಲೆಗಳಲ್ಲಿ ನಡೆದಿರುವ ಉದಾಹರಣೆಗಳಿವೆ. ಇದೀಗ ಚಿರತೆ ದಾಳಿಯಿಂದ 13 ಕುರಿಗಳು ಬಲಿ ಆಗಿರುವ ಘಟನೆ ಕೊಪ್ಪಳ ಜಿಲ್ಲೆಯ ನೇಲಜೇರಿ ಗ್ರಾಮದಲ್ಲಿ ನಡೆದಿದೆ.
ಚಿರತೆ ದಾಳಿಯಿಂದ ಸಾವನ್ನಪ್ಪಿರುವ 13 ಕುರಿಗಳು ನೇಲಜೇರಿ ಗ್ರಾಮದ ದೇವಪ್ಪ ಬೇವಿನಗಿಡದ ಅವರಿಗೆ ಸೇರಿದವಾಗಿವೆ. ಕೊಟ್ಟಿಗೆಯಲ್ಲಿ ಕುರಿಗಳನ್ನು ಕೂಡಿ ಹಾಕಿದ್ದರು. ಈ ವೇಳೆ ಚಿರತೆ ದಾಳಿ ನಡೆಸಿ, ಕೊಂದುಹಾಕಿದೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಚಿರತೆ ಸೆರೆಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಮತ್ತು ಸರ್ಕಾರದಿಂದ ಪರಿಹಾರ ಕೊಡಿಸಲಾಗುವುದು ಎಂದು ಭರವಸೆ ನೀಡಿದ್ದಾರೆ. ಚಿರತೆ ಕಾಣಿಸಿಕೊಂಡ ಹಿನ್ನೆಲೆ ಭಯಗೊಂಡ ರೈತರು ಜಾನುವಾರುಗಳನ್ನು ಮೇಯಿಸಲು ಭಯಪಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಚಿರತೆ ದಾಳಿಯಿಂದ ಈಗಾಗಲೇ ಸಾಕು ಪ್ರಾಣಿಗಳನ್ನು ಕಳೆದುಕೊಂಡಿದ್ದೇವೆ. ಆದ್ದರಿಂದ ಚಿರತೆ ಹಾವಳಿ ತಪ್ಪಿಸಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದರು.
ಬಲೆಗೆ ಬಿದ್ದ ಚಿರತೆ: ಹಸು ಮೇಯಿಸಲು ಹೋಗಿದ್ದ ರೈತನ ಮೇಲೆ ದಾಳಿ ಮಾಡಿದ್ದ ಚಿರತೆಯನ್ನು ಗ್ರಾಮಸ್ಥರು ಹಿಡಿದು ಅರಣ್ಯ ಇಲಾಖೆ ವಶಕ್ಕೆ ನೀಡಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಇತ್ತೀಚೆಗಷ್ಟೇ ನಡೆದಿತ್ತು.
ಜಿಲ್ಲೆಯ ಗುಂಡಿಬಂಡೆ ತಾಲೂಕಿನ ವರ್ಲಕೊಂಡ ಬೆಟ್ಟದಲ್ಲಿ ಚಿರತೆಗಳು ಪ್ರತ್ಯಕ್ಷ ಆಗಿದ್ದು, ಚಿರತೆಯನ್ನು ಸೆರೆ ಹಿಡಿಯುವಂತೆ ಸುತ್ತಮುತ್ತಲಿನ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮನವಿ ಮಾಡಿದ್ದರು. ಈ ನಡುವೆ ನಿನ್ನೆ ಬೆಳಗ್ಗೆ ಚಿರತೆ ದಾಳಿಯ ಆತಂಕದಲ್ಲಿಯೇ ಕರೇನಹಳ್ಳಿಯ ರೈತ ರಾಮಕೃಷ್ಣಪ್ಪ ಹಸು ಮೇಯಿಸಲು ವರ್ಲಕೊಂಡ ಬೆಟ್ಟದ ಕಡೆ ಹೋಗಿದ್ದರು.
ಈ ವೇಳೆ ಚೊಕ್ಕನಹಳ್ಳಿಯ ಕೆರೆ ಬಳಿ ಚಿರತೆ ದಿಢೀರ್ ಮಕೃಷ್ಣಪ್ಪನ ಮೇಲೆ ದಾಳಿ ನಡೆಸಿದೆ. ಅವರು ಜೋರಾಗಿ ಕೂಗಿಕೊಂಡಾಗ ಚಿರತೆ ಅಲ್ಲಿಂದ ಪರಾರಿ ಆಗಿತ್ತು. ರೈತನ ಚೀರಾಟ ಕೇಳಿ ಸ್ಥಳಕ್ಕೆ ಗ್ರಾಮಸ್ಥರು ಆಗಮಿಸಿ ರಕ್ಷಣೆ ಮಾಡಿದ್ದರು. ಇದರಿಂದ ಆಕ್ರೋಶಗೊಂಡಿದ್ದ ಗ್ರಾಮಸ್ಥರು ಬೆಟ್ಟದಲ್ಲಿ ಅಡಗಿದ ಚಿರತೆಯನ್ನು ಸೆರೆ ಹಿಡಿದು ಅರಣ್ಯ ಇಲಾಖೆಯ ವಶಕ್ಕೆ ನೀಡಿದ್ದರು.
ವರ್ಲಕೊಂಡ ಬೆಟ್ಟದಲ್ಲಿ ಮೂರು ಚಿರತೆಗಳು ವಾಸವಾಗಿದ್ದು, ಆಗಾಗ ಗ್ರಾಮಸ್ಥರ ಕಣ್ಣಿಗೆ ಕಾಣಿಸಿಕೊಳ್ಳುತ್ತಿದ್ದವು. ಡ್ರೋನ್ ಕ್ಯಾಮರಾ ಮೂಲಕ ಸರ್ವೆ ಮಾಡಿದ ವೇಳೆ ಬೆಟ್ಟದಲ್ಲಿ ವಾಸ ಆಗಿರುವ ಚಿರತೆಗಳ ದೃಶ್ಯ ಸೆರೆ ಆಗಿದೆ. ಚಿರತೆಯನ್ನು ಸೆರೆ ಹಿಡಿಯುವಂತೆ ಕಳೆದ ಒಂಡು ವಾರದ ಹಿಂದೆ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮನವಿ ಮಾಡಿದ್ದರು. ಅರಣ್ಯ ಇಲಾಖೆ ಬೋನ್ ಸಹ ಇಟ್ಟಿದ್ದರು. ಆದರೆ, ಬೋನ್ಗೆ ಬೀಳದ ಚಿರತೆಯನ್ನು ಗ್ರಾಮಸ್ಥರೇ ಮುಂದಾಗಿ ಸೆರೆ ಹಿಡಿದಿರುವುದು ಶ್ಲಾಘನೀಯವಾಗಿದೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications