ಕೊಪ್ಪಳ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಾಮಾಜಿಕ ಜಾಲತಾಣದಲ್ಲಿ ಈಶ್ವರಪ್ಪ ಹೇಳಿಕೆ ವಿಡಿಯೋ ವೈರಲ್

|
Google Oneindia Kannada News

Recommended Video

ಬಿಜೆಪಿ ನಾಯಕ ಕೆ ಎಸ್ ಈಶ್ವರಪ್ಪನವರ ವಿಡಿಯೋ ವೈರಲ್ | Oneindia Kannada

ಕೊಪ್ಪಳ, ಡಿಸೆಂಬರ್. 13 : ಕರ್ನಾಟಕ ಬಿಜೆಪಿಯಲ್ಲಿ ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿ ಮಾಡುವವರು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ. ಕಳೆದ ವಾರ ಅವರು ನೀಡಿರುವ ಹೇಳಿಕೆ ಬಗ್ಗೆ ಈಗ ಚರ್ಚೆ ನಡೆಯುತ್ತಿದೆ.

'ಹನುಮ ಜಯಂತಿಗೆ ನಿಷೇಧ, ಇದೇನು ಪಾಕಿಸ್ತಾನವೇ?''ಹನುಮ ಜಯಂತಿಗೆ ನಿಷೇಧ, ಇದೇನು ಪಾಕಿಸ್ತಾನವೇ?'

ಸಾಮಾಜಿಕ ಜಾಲತಾಣಗಳಲ್ಲಿ ಕೆ.ಎಸ್.ಈಶ್ವರಪ್ಪ ಅವರ ಹೇಳಿಕೆ ಚರ್ಚೆ ನಡೆಯುತ್ತಿದೆ. ಪರ-ವಿರೋಧ ಕಮೆಂಟ್‌ಗಳು ಹರಿದಾಡುತ್ತಿವೆ. ಆದರೆ, ಈಶ್ವರಪ್ಪ ಅವರು ಈ ಬಗ್ಗೆ ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ.

Lie to voters : BJP leader KS Eshwarappa video goes viral

ಈಶ್ವರಪ್ಪ ಹೇಳಿದ್ದೇನು? : ಗಂಗಾವತಿ ತಾಲೂಕಿನ ಕಾಟರಗಿಯಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಈಶ್ವರಪ್ಪ ಅವರು, 'ಬಿಜೆಪಿ ಸಾಧನೆಯ ಬಗ್ಗೆ ಏನೂ ಗೊತ್ತಿಲ್ಲ ಎಂದರೆ ಸುಳ್ಳನಾದರೂ ಹೇಳಿ' ಎಂದು ಕಾರ್ಯಕರ್ತರಿಗೆ ಕಿವಿಮಾತು ಹೇಳಿದ್ದಾರೆ.

ಪಕ್ಷದಲ್ಲಿ ಭಿನ್ನಮತ ಇರುವುದಾಗಿ ಒಪ್ಪಿಕೊಂಡ ಕೆ.ಎಸ್.ಈಶ್ವರಪ್ಪಪಕ್ಷದಲ್ಲಿ ಭಿನ್ನಮತ ಇರುವುದಾಗಿ ಒಪ್ಪಿಕೊಂಡ ಕೆ.ಎಸ್.ಈಶ್ವರಪ್ಪ

'ಹಿಂದೆ ಬಿಜೆಪಿ ಸರ್ಕಾರವಿದ್ದಾಗ ನಾವು ಏನು ಮಾಡಿದ್ದೆವು. ಮುಂದೆ ಗೆದ್ದರೆ ಏನು ಮಾಡುತ್ತೇವೆ ಎಂಬುದು ಎಲ್ಲಾ ಕಾರ್ಯಕರ್ತರಿಗೆ ತಿಳಿದಿರಬೇಕು. ಕೇಂದ್ರ ಸರ್ಕಾರದ ಸಾಧನೆ ಏನು ಎಂಬುದು ತಿಳಿದುಕೊಂಡಿರಬೇಕು. ಇವುಗಳು ತಿಳಿದಿಲ್ಲ ಎಂದರೆ ಸುಳ್ಳನಾದ್ರು ಹೇಳಿ' ಎಂದು ಈಶ್ವರಪ್ಪ ಸಭೆಯಲ್ಲಿ ಹೇಳಿದ್ದಾರೆ.

ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಈಶ್ವರಪ್ಪ ನೀಡಿದ ಹೇಳಿಕೆ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ.

English summary
Video of the Leader of the opposition in the legislative council K.S. Eshwarappa viral on social media. In a party workers meeting Koppal K.S. Eshwarappa sadis that, party workers never to hesitate from bluffing to voters to win political support.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X