BJP Ticket Miss: ಕೈ ತಪ್ಪಿದ ಟಿಕೆಟ್: ಕರಡಿ ಸಂಗಣ್ಣ ಬೆಂಬಲಿಗರಿಂದ ಆಕ್ರೋಶ- ಕೊಪ್ಪಳ ಬಿಜೆಪಿ ಕಚೇರಿ ಕಿಟಕಿ ಗಾಜು ಚೂರು ಚೂರು
ಕೊಪ್ಪಳ ಮಾರ್ಚ್ 14: ಹಾಲಿ ಸಂಸದ ಕರಡಿ ಸಂಗಣ್ಣ ಅವರಿಗೆ ಕೊಪ್ಪಳ (Koppal) ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ನಿರಾಕರಿಸಿದ ಕಾರಣ ಬೆಂಬಲಿಗರು ಆಕ್ರೋಶಗೊಂಡಿದ್ದಾರೆ. ತಮ್ಮ ನಾಯಕರಿಗೆ ಟಿಕೆಟ್ ನೀಡದೇ ಇರುವುದು ಅನ್ಯಾಯ ಎಂದು ಘೋಷಣೆಗಳನ್ನು ಕೂಗಿತ್ತಾ ಕಲ್ಲು ತೂರಾಟ ನಡೆಸಿದ್ದಾರೆ.
ಕರ್ನಾಟಕ ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬುಧವಾರ ಸಂಜೆ ಬಿಡುಗಡೆ ಮಾಡಿತು. ಆದರೆ ಈ ಪಟ್ಟಿಯಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಕರಡಿ ಸಂಗಣ್ಣ (Karadi Sanganna) ಬದಲಿಗೆ ವೃತ್ತಿಯಲ್ಲಿ ವೈದ್ಯರಾಗಿರುವ ಬಸವರಾಜ ಕ್ಯಾವಟರ್ (Dr Basavaraj S Kyavator) ಅವರಿಗೆ ಹೈಕಮಾಂಡ್ ಟಿಕೆಟ್ ನೀಡಿದೆ. ಇದು ಕರಡಿ ಸಂಗಣ್ಣ ಬೆಂಬಲಿಗರ ಕೆಂಗಣ್ಣಿಗೆ ಗುರಿಯಾಗಿದೆ. ಇದರಿಂದ ತಾಳ್ಮೆ ಕಳೆದುಕೊಂಡ ಕರಡಿ ಅವರ ಬೆಂಬಲಿಗರು ಕೊಪ್ಪಳದ ಬಿಜೆಪಿ ಕಚೇರಿಯ ಗಾಜು ಕಿಟಕಿ ಚೂರು ಚೂರು ಮಾಡಿದ್ದಾರೆ.

ಮಾತ್ರವಲ್ಲದೆ ಕಲ್ಲು ತೂರಾಟ ನಡೆಸಿದ್ದಾರೆ. ಪೀಠೋಪಕರಣಗಳನ್ನು ಧ್ವಂಸಗೊಳಿಸಿದ್ದಾರೆ. ಕಳೆದ ದಿನ ಬಿಜೆಪಿ ಎರಡನೇ ಪಟ್ಟಿ ಬಿಡುಗಡೆಗೊಳಿಸಿದ ಬೆನ್ನಲ್ಲೆ ಇಂದು ಕೊಪ್ಪಳ ಬಿಜೆಪಿ ಕಚೇರಿಯಲ್ಲಿ ಸಭೆಯನ್ನು ಕರೆಯಲಾಗಿತ್ತು. ಈ ವೇಳೆ ಏಕಾಏಕಿ ಬಂದ ಕರಡಿ ಸಂಗಣ್ಣ ಅವರ ಬೆಂಬಲಿಗರ ಗುಂಪು ಬಸವರಾಜ ಬೊಮ್ಮಾಯಿ, ಯಡಿಯೂರಪ್ಪ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಕಲ್ಲು ತೂರಾಟ ಮಾಡಿದ್ದಾರೆ.
ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಕರಡಿ ಸಂಗಣ್ಣ ಅವರು,'ನನಗೆ ಯಾಕೆ ಟಿಕೆಟ್ ಮಿಸ್ ಆಯ್ತು ನನಗೆ ಗೊತ್ತಿಲ್ಲ. ಯಾರು ಅಭ್ಯರ್ಥಿ ಆಗಿದ್ದಾರೋ ಅವರಿಗೆ ಒಳ್ಳೆಯದಾಗಲಿ. ಬಿಜೆಪಿ ಯಾವ ನಾಯಕರು ನನ್ನನ್ನು ಸಂಪರ್ಕಿಸಿಲ್ಲ. ಬಹುಶ: ಅವರೆಲ್ಲಾ ತುಂಬಾ ಬ್ಯೂಸಿ ಇರಬೇಕು. ಫ್ರೀ ಆದ್ಮೆಲೆ ಮಾತನಾಡಬಹುದು. ಜನರ ಆಶೀರ್ವಾದಕ್ಕೆ ನಾನು ಋಣಿಯಾಗಿದ್ದೇನೆ. ಬಿಜೆಪಿಗೆ ಬೆಂಬಲ ನೀಡಿ. ಶಾಂತತೆಯಿಂದ ವರ್ತಿಸಿ' ಎಂದು ತಮ್ಮ ಬೆಂಬಲಿಗರಿಗೆ ಮನವಿ ಮಾಡಿದರು.
ಕೊಪ್ಪಳದಲ್ಲಿ ಹಾಲಿ ಸಂಸದ ಸಂಗಣ್ಣ ಕರಡಿ ಅವರು ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಅವರಿಗೆ ಟಿಕೆಟ್ ಸಿಗಲಿಲ್ಲ. ಬದಲಿಗೆ ಮಾಜಿ ಶಾಸಕ ಕೆ.ಶರವಣ್ಣಪ್ಪ ಅವರ ಪುತ್ರ ಹಾಗೂ ವೈದ್ಯ ಡಾ.ಕೆ.ಬಸವರಾಜ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ. ಬಸವರಾಜ ಹೊಸಬರಾಗಿದ್ದು ಇವರ ಹೆಸರು ಘೋಷಣೆ ಮಾಡುವ ಮೂಲಕ ಬಿಜೆಪಿ ಅಚ್ಚರಿ ಮೂಡಿಸಿದೆ.
ಆದರೆ ನಾಲ್ಕು ಬಾರಿ ಶಾಸಕರಾಗಿ ಮತ್ತು ಎರಡು ಬಾರಿ ಬಿಜೆಪಿಯಿಂದಲೇ ಸತತವಾಗಿ ಮತ್ತು ಎರಡು ಬಾರಿ ಬಿಜೆಪಿಯಿಂದಲೇ ಸತತವಾಗಿ ಸಂಸದರಾಗಿದ್ದ ಸಂಗಣ್ಣ ಕರಡಿ ಅವರಿಗೆ ಈ ಬಾರಿಯ ಲೋಕಸಭಾ ಚುನಾವಣೆ ಬಿಜೆಪಿ ಟಿಕೆಟ್ ಕೈ ತಪ್ಪಿದೆ. ಈ ಹಿಂದೆಯೂ ಹಾಲಿ ಸಂಸದ ಶಿವರಾಮಗೌಡ ಅವರಿಗೆ ಟಿಕೆಟ್ ತಪ್ಪಿಸಿ, ವಿಧಾನಸಭಾ ಚುನಾವಣೆಯಲ್ಲಿ ಪರಾಭವಗೊಂಡಿದ್ದ ಸಂಗಣ್ಣ ಕರಡಿ ಅವರಿಗೆ ಟಿಕೆಟ್ ನೀಡಲಾಗಿತ್ತು. ಈಗ ಸತತವಾಗಿ ಎರಡು ಬಾರಿ ಗೆಲುವು ಸಾಧಿಸಿದರೂ ಟಿಕೆಟ ತಪ್ಪಿಸಿ, ಮತ್ತೆ ಹೊಸಬರಿಗೆ ಬಿಜೆಪಿ ಅವಕಾಶ ನೀಡಿದೆ.
ಇದರಿಂದ ಬೇಸರಗೊಂಡ ಕರಡಿ ಸಂಗಣ್ಣ ಬೆಂಬಲಿಗರು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ಜೊತೆಗೆ ತಾವು ಯಾವುದೇ ಬಿಜೆಪಿ ಅಭ್ಯರ್ಥಿಗೆ ಬೆಂಬಲ ನೀಡುವುದಿಲ್ಲ. ಮತ ಚಲಾಯಿಸುವುದಿಲ್ಲ ಎಂದು ಪಣತೊಟ್ಟಿದ್ದಾರೆ. ಇದರಿಂದಾಗಿ ಕರಡಿ ಸಂಗಣ್ಣ ಅವರ ಬೆಂಬಲಿಗರ ಮತಗಳನ್ನು ಬಿಜೆಪಿ ಘೋಷಿತ ಅಭ್ಯರ್ಥಿ ಬಸವರಾಜ ಕ್ಯಾವಟರ್ ಕಳೆದುಕೊಳ್ಳುವ ಸಾಧ್ಯತೆ ಇದೆ. ಈ ಒಳಜಗಳ ಕಾಂಗ್ರೆಸ್ಗೆ ಲಾಭವಾದರೂ ಆಚ್ಚರಿಯಿಲ್ಲ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications