ಗಂಗಾವತಿ-ದರೋಜಿ ರೈಲ್ವೆ ಬ್ರಾಡ್ಗೇಜ್ ನಿರ್ಮಿಸಿ: ಸಂಗಣ್ಣ ಕರಡಿ
ಕೊಪ್ಪಳ, ಸೆ.17: ಕೊಪ್ಪಳ ಜಿಲ್ಲೆಯ ಗಂಗಾವತಿಯಿಂದ ದರೋಜಿವರೆಗಿನ 35 ಕಿ.ಮೀ. ಅಂತರದ ರೈಲ್ವೇ ಬ್ರಾಡ್ಗೇಜ್ ಲೈನ್ ನಿರ್ಮಿಸಬೇಕು ಎಂದು ಸಂಸದ ಕರಡಿ ಸಂಗಣ್ಣ ಹೇಳಿದರು.
ಸಂಸದ ಕರಡಿ ಸಂಗಣ್ಣ ಅವರು ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಗಂಗಾವತಿ-ದರೋಜಿ ಹೊಸ ರೈಲ್ವೇ ಬ್ರಾಡ್ಗೇಜ್ ಲೈನ್ ನಿರ್ಮಿಸುವಂತೆ ವಿಷಯ ಮಂಡನೆ ಮಾಡಿ, ಕೇಂದ್ರ ಸರ್ಕಾರದ ಮುಂದೆ ಆಗ್ರಹಪೂರ್ವಕ ಮನವಿ ಮಾಡಿದರು.
ಭತ್ತ ನಾಟಿ ಮಾಡಲು ದಕ್ಷಿಣ ಕನ್ನಡಕ್ಕೆ ಬಂದ ಗಂಗಾವತಿ ಕೃಷಿ ಕಾರ್ಮಿಕರು
ಕೊಪ್ಪಳ ಜಿಲ್ಲೆಯ ಗಂಗಾವತಿಯಿಂದ ಬಳ್ಳಾರಿ ಜಿಲ್ಲೆಯ ದರೋಜಿ ವರೆಗೆ 35_ಕಿ.ಮೀ. ಅಂತರವಿದ್ದು, ಇಲ್ಲಿ ರೈಲ್ವೆ ಬ್ರಾಡ್ಗೇಜ್ ನಿರ್ಮಿಸುವುದರಿಂದ ಈ ಭಾಗದ ಜನರಿಗೆ ಅನುಕೂಲವಾಗಲಿದೆ. ಗಂಗಾವತಿಯು ಹೆಚ್ಚು ಭತ್ತ ಬೆಳೆಯುವ ಪ್ರದೇಶವಾಗಿದ್ದು, ಇಲ್ಲಿ ಉತ್ತಮ ಗುಣಮಟ್ಟದ_ಭತ್ತ ಬೆಳೆಯುವುದರ ಜೊತೆಗೆ ಇಲ್ಲಿ ಹಲವಾರು ರೈಸ್ ಮಿಲ್ಗಳು ಇವೆ. ಮತ್ತು ಆನೆಗೊಂದಿ ಹನುಮಂತ ಜನಿಸಿದ ನಾಡಾಗಿರುವುದರಿಂದ ಇಲ್ಲಿ ದೇಶ ವಿದೇಶಗಳಿಂದ ಹಲವಾರು ಭಕ್ತರು ಮತ್ತು ಪ್ರವಾಸಿಗರು ಬರುತ್ತಾರೆ. ಈ ಭಾಗದ ಭತ್ತದ ವ್ಯಾಪಾರದ ವಾಣಿಜ್ಯೋದ್ಯಮಕ್ಕೂ ಕೂಡ ಅನುಕೂಲವಾಗಲಿದೆ.
ಕಲ್ಯಾಣ ಕರ್ನಾಟಕದವರು ಕೀಳರಿಮೆಯಿಂದ ಹೊರಬರಬೇಕು: ಬಿ.ಸಿ. ಪಾಟೀಲ್
Recommended Video
ದರೋಜಿಯು ಕೂಡ ಪ್ರವಾಸಿಗರ ಆಕರ್ಷಣೆಯ ಕೇಂದ್ರವಾಗಿದ್ದು, ಕರಡಿ ಧಾಮವಿದೆ. ದರೋಜಿಯಿಂದ ಬಳ್ಳಾರಿ ಮತ್ತು ಬೆಂಗಳೂರಿಗೆ ಸಂಪರ್ಕ ಕಲ್ಪಿಸಿದರೆ ಗಂಗಾವತಿಯಿಂದ ರಾಯಚೂರು, ಮುನಿರಾಬಾದ್ ಹಾಗೂ ಮೆಹಬೂಬ್ನಗರಕ್ಕೆ ಸಂಪರ್ಕವನ್ನು ಕಲ್ಪಿಸುತ್ತದೆ. ಹಾಗಾಗಿ ಗಂಗಾವತಿ-ದರೋಜಿ ಹೊಸ ರೈಲ್ವೇ ಬ್ರಾಡ್ಗೇಜ್ ಲೈನ್ ನಿರ್ಮಿಸುವುದರ ಕುರಿತು ಸಂಸದ ಕರಡಿ ಸಂಗಣ್ಣನವರು ಸಂಸತ್ತಿನಲ್ಲಿ ವಿಷಯ ಮಂಡನೆ ಮಾಡಿದರು. (ಮಾಹಿತಿ ಕೃಪೆ: ವಾರ್ತಾ ಇಲಾಖೆ)