ದೇವೇಗೌಡರ ಮಾತು ನಂಬುತ್ತೀರಾ? ಕೊಪ್ಪಳದಲ್ಲಿ ಮೋದಿ ಪ್ರಶ್ನೆ
Recommended Video
ಕೊಪ್ಪಳ, ಏಪ್ರಿಲ್ 12 : 'ಎಚ್.ಡಿ.ದೇವೇಗೌಡರ ಕುಟುಂಬದ ಮಾತನ್ನು ಕರ್ನಾಟಕದ ಜನರು ನಂಬುತ್ತಾರೆಯೇ?' ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಗಂಗಾವತಿಯಲ್ಲಿ ಪ್ರಶ್ನಿಸಿದರು.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಲೋಕಸಭಾ ಚುನಾವಣೆ ಪ್ರಚಾರಕ್ಕಾಗಿ ಕೊಪ್ಪಳದ ಗಂಗಾವತಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ದೇವೇಗೌಡರು ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧ ವಾಗ್ದಾಳಿ ನಡೆಸಿದರು. 'ಕರ್ನಾಟಕದಲ್ಲಿ 20 ಪರ್ಸೆಂಟ್ ಸರ್ಕಾರ ಅಧಿಕಾರದಲ್ಲಿದೆ' ಎಂದು ಲೇವಡಿ ಮಾಡಿದರು.
ಗಂಗಾವತಿಯಲ್ಲಿ ಮೋದಿ : ದೇವೇಗೌಡರ ಮಾತು ನಂಬುತ್ತೀರಾ? ಎಂದು ಪ್ರಶ್ನೆ
ಶುಕ್ರವಾರ ಕೊಪ್ಪಳದ ಗಂಗಾವತಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕೊಪ್ಪಳ, ಬಳ್ಳಾರಿ ಮತ್ತು ರಾಯಚೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಿದರು.
ಪ್ರಧಾನಿ ಮೋದಿ ಹೇಳಿದ್ದೇನು?
* ಸಚಿವ ಎಚ್.ಡಿ.ರೇವಣ್ಣ ಅವರು, 'ಬೇಕಾದ್ರೆ ಡೈರಿಯಲ್ಲಿ ಬರೆದಿಟ್ಟುಕೊಳ್ಳಿ. ಮತ್ತೆ ಮೋದಿ ಪ್ರಧಾನಿ ಆದ್ರೆ ನಾನು ರಾಜಕೀಯ ಬಿಟ್ಟು ಹೋಗ್ತಿನಿ' ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ಮುಂದಿಟ್ಟುಕೊಂಡು ಮೋದಿ ವಾಗ್ದಾಳಿ ನಡೆಸಿದರು.
* ಎಚ್.ಡಿ.ದೇವೇಗೌಡರ ಸುಪುತ್ರ ಹೇಳುತ್ತಾರೆ. ಮತ್ತೆ ಮೋದಿ ಪ್ರಧಾನಿಯಾದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು. 2014ರ ಚುನಾವಣೆಯಲ್ಲಿ ದೇವೇಗೌಡರು ಇದೇ ಮಾತನ್ನು ಹೇಳಿದ್ದರು. ಅವರು ರಾಜಕೀಯ ನಿವೃತ್ತಿ ಪಡೆದರೇ? ಎಂದು ಮೋದಿ ಪ್ರಶ್ನಿಸಿದರು.
* ಮೋದಿ ಪ್ರಧಾನಿಯಾದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು 2014ರಲ್ಲಿ ಹೇಳಿದವರು ಈಗ ಮನೆಯ ಎಲ್ಲಾ ಮಕ್ಕಳಿಗೆ ಟಿಕೆಟ್ ಕೊಟ್ಟು ಚುನಾವಣೆಗೆ ನಿಲ್ಲಿಸಿದ್ದಾರೆ.
* ದೇವೇಗೌಡರು ಮತ್ತು ಅವರ ಕುಟುಂಬ ಸದಸ್ಯರು ಹೇಳಿದಂತೆ ನಡೆದುಕೊಳ್ಳುತ್ತಾರೆಯೇ?, ನೀವು ಅವರ ಮಾತನ್ನು ನಂಬುತ್ತೀರಾ? ಎಂದು ಪ್ರಧಾನಿ ಮೋದಿ ಪ್ರಶ್ನೆ ಮಾಡಿದರು.
* ಈ ರಾಜ್ಯದ ಮುಖ್ಯಮಂತ್ರಿ ಎರಡು ಹೊತ್ತು ಊಟಕ್ಕೆ ಇಲ್ಲದವರು ಸೇನೆ ಸೇರುತ್ತಾರೆ ಎಂದು ಹೇಳಿಕೆ ನೀಡುತ್ತಾರೆ. ಇದು ಸೈನಿಕರಿಗೆ ಮಾಡುವ ಅವಮಾನವಲ್ಲವೇ?. ಇಂತಹವರು ಮತ ಕೇಳಿದರೆ ನೀವು ಕೊಡುತ್ತೀರಾ? ಎಂದು ಪ್ರಶ್ನಿಸಿದರು.