ಗಂಗಾವತಿಯಲ್ಲಿ ಮೋದಿ : ಕರ್ನಾಟಕದಲ್ಲಿ ಈಗ 20 ಪರ್ಸೆಂಟ್ ಸರ್ಕಾರವಿದೆ
ಕೊಪ್ಪಳ, ಏಪ್ರಿಲ್ 12 : 'ಕರ್ನಾಟಕದಲ್ಲಿ ಹಿಂದೆ 10 ಪರ್ಸೆಂಟ್ ಸರ್ಕಾರವಿತ್ತು. ಈಗ ಕಾಂಗ್ರೆಸ್ ಜೆಡಿಎಸ್ ಸೇರಿ 20 ಪರ್ಸೆಂಟ್ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ' ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಮೈತ್ರಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕಕ್ಕೆ ಆಗಮಿಸಿದ್ದರು. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಅವರು ಬೃಹತ್ ಸಮಾವೇಶ ಉದ್ದೇಶಿಸಿ ಮಾತಾಡಿದರು. ಕೊಪ್ಪಳ, ಬಳ್ಳಾರಿ, ರಾಯಚೂರು ಕ್ಷೇತ್ರದ ಅಭ್ಯರ್ಥಿಗಳು ಸಮಾವೇಶದಲ್ಲಿ ಪಾಲ್ಗೊಂಡಿದ್ದರು.
ಕೊಪ್ಪಳ ಚುನಾವಣಾ ಕಣ : ಸಂಗಣ್ಣ ಕರಡಿಗೆ ಸಿಗುವುದೇ ಗೆಲವು?
ಧಾರವಾಡ, ಕಲಬುರಗಿ, ಚಿತ್ರದುರ್ಗ ಮತ್ತು ಮೈಸೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಈಗಾಗಲೇ ಪ್ರಚಾರ ನಡೆಸಿದ್ದಾರೆ. ಶುಕ್ರವಾರ ಬಳ್ಳಾರಿ, ಕೊಪ್ಪಳ ಮತ್ತು ರಾಯಚೂರು ಲೋಕಸಭಾ ಕ್ಷೇತ್ರದ ಚುನಾವಣೆಗಾಗಿ ಪ್ರಚಾರ ನಡೆಸಿದರು.
ಪ್ರಧಾನಿ ನರೇಂದ್ರ ಮೋದಿ ಅವರಿಗೆ 1650 ಗ್ರಾಂ ತೂಕದ ಬೆಳ್ಳಿ ಗದೆಯನ್ನು ಉಡುಗೊರೆಯಾಗಿ ನೀಡಲಾಯಿತು. ಹನುಮ ಮಾಲಾಧಾರಿಗಳು ಗದೆಗೆ ಗಂಗಾವತಿಯ ಅಂಜನಾದ್ರಿ ಪರ್ವತದಲ್ಲಿ ವಿಶೇಷ ಪೂಜೆ ಮಾಡಿಸಿದ್ದರು. ಅಂಜನಾದ್ರಿ ಪರ್ವತ ಹನುಮಂತ ಹುಟ್ಟಿದ ಸ್ಥಳ ಎಂದೇ ಪ್ರಸಿದ್ಧಿ ಪಡೆದಿದೆ...