ರೈತರಿಗೆ ವರದಾನವಾದ ಮಾವು ಮಾಗಿಸುವ ನೂತನ ತಂತ್ರಜ್ಞಾನ
ಕೊಪ್ಪಳ, ಏಪ್ರಿಲ್ 24: ಕರ್ನಾಟಕದಲ್ಲಿ ಮಾವು ಬೆಳೆಯುವ ಜಿಲ್ಲೆಗಳಲ್ಲಿ ಕೊಪ್ಪಳ ಸಹ ಸೇರಿದೆ. 'ಕೊಪ್ಪಳ ಕೇಸರ್ ಮಾವು' ಎಂಬ ಬ್ರಾಂಡ್ ಇದ್ದು, ಕೊಪ್ಪಳದ ಮಾವಿನ ಹಣ್ಣುಗಳಿಗೆ ದೇಶ-ವಿದೇಶದಲ್ಲಿ ಹೆಚ್ಚಿನ ಬೇಡಿಕೆ ಇದೆ. ತೋಟಗಾರಿಕಾ ಇಲಾಖೆ ಕಾಲ ಕಾಲಕ್ಕೆ ಜಿಲ್ಲೆಯ ರೈತರಿಗೆ ಮಾವು ಬೆಳೆಯ ನೂತನ ತಂತ್ರಜ್ಞಾನದ ಕುರಿತು ಮಾಹಿತಿ ನೀಡುತ್ತಲೇ ಇರುತ್ತದೆ. ಈಗ ಮಾವು ಮಾಗಿಸುವ ನೂತನ ತಂತ್ರಜ್ಞಾನವನ್ನು ಪರಿಚಯಿಸಲಾಗಿದೆ.
ಕೊಪ್ಪಳ ಜಿಲ್ಲೆಯಾದ್ಯಂತ ಈಗ ಮಾವು ಬೆಳೆ ಈಗ ಕಟಾವಿಗೆ ಸಿದ್ದವಾಗಿದೆ. ರೈತರಿಗೆ ಉತ್ತಮ ಬೆಲೆ ದೊರೆಯುವ ನಿರೀಕ್ಷೆಯಿದ್ದು, ವೈಜ್ಞಾನಿಕವಾಗಿ ಹಣ್ಣು ಮಾಗಿಸಿದಲ್ಲಿ ಹೆಚ್ಚಿನ ಲಾಭ ಪಡೆಯಬಹುದಾಗಿದೆ ಎಂದು ಕೊಪ್ಪಳ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದ ವಿಜ್ಞಾನಿಗಳು ರೈತರಿಗೆ ಸಲಹೆ ನೀಡಿದ್ದಾರೆ.

ಮಾವು ಕಟಾವು ಮೊದಲು ರೈತರು ಮ್ಯಾಚುರಿಟಿ ಇಂಡೆಕ್ಸ್ ಅಂದರೆ, ಹಣ್ಣಿನ ಆಕಾರ, ಗಾತ್ರ ಮತ್ತು ಬಣ್ಣ ಆಧರಿಸಿ ಹಣ್ಣುಗಳು ಕಟಾವಿಗೆ ಬಂದಿದೆ, ಹಣ್ಣುಗಳ ಬುಜಗಳು ಎತ್ತರವಾಗಿ ಕಿತ್ತಳೆ ಬಣ್ಣಕ್ಕೆ ತಿರುಗುತ್ತವೆ ಎನ್ನುವ ಸೂಚನೆ ಕುರಿತು ತಿಳಿದುಕೊಂಡಿರಬೇಕು ಎಂದು ಹೇಳಿದ್ದಾರೆ.
ಸಾಮಾನ್ಯವಾಗಿ ತಳಿಯನ್ನಾಧರಿಸಿ ಕಾಯಿ ಕಚ್ಚಿದ ನಂತರ 15 ರಿಂದ 16 ವಾರಗಳಲ್ಲಿ ಕಾಯಿಗಳು ಕಟಾವಿಗೆ ಬರುತ್ತವೆ. ಈ ಸಮಯದಲ್ಲಿ 6 ರಿಂದ 8 ಕಾಯಿಗಳು ಉದುರಿ ಬೀಳುತ್ತವೆ. ಇವೆಲ್ಲವುಗಳನ್ನು ಗಮನಿಸಿ ಸೂಕ್ತ ಸಮಯದಲ್ಲಿ ಕೊಯ್ಲು ಮಾಡಬೇಕು. ಕಟಾವು ಮಾಡುವಾಗ ಸುಮಾರು 1 ರಿಂದ 1.5 ಇಂಚಿನಷ್ಟು ದೇಟಿನೊಂದಿಗೆ ಕಟಾವು ಮಾಡಿ ನೆರಳಿನಲ್ಲಿ ಆರಿಸಬೇಕು ಎಂದು ತಿಳಿಸಿದ್ದಾರೆ.
ಮಾವು ಮಾಗಿಸುವ ಪ್ಲಾಸ್ಟಿಕ್ ಟೆಂಟ್: ಮಾವು ಮಾಗಿಸುವ ಟೆಂಟುಗಳು ಕಡಿಮೆ ಬೆಲೆಯಲ್ಲಿ ಲಭ್ಯವಿದ್ದು, ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆ, ಹೆಸರಘಟ್ಟ, ಬೆಂಗಳೂರು ಇಲ್ಲಿ ಲಭ್ಯವಿರುತ್ತವೆ. ರೈತರು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬಹುದು. ಈ ಟೆಂಟುಗಳು 200 ಮೈಕ್ರಾನ್ ಪ್ಲಾಸ್ಟಿಕ್ನಿಂದ ತಯಾರಿಸಲಾಗಿದ್ದು, ಸುಮಾರು 4 ಘನ ಮೀಟರ್ ಅಳತೆಯುಳ್ಳದ್ದಾಗಿದೆ ಮತ್ತು ಒಂದು ಟನ್ನಷ್ಟು ಹಣ್ಣುಗಳನ್ನು ಮಾಗಿಸುವ ಸಾಮರ್ಥ್ಯವನ್ನು ಹೊಂದಿದೆ.
ಇದರ ಒಳಗಡೆ ಸುಮಾರು 750 ಕೆಜಿ ಹಣ್ಣುಗಳನ್ನು ಪ್ಲಾಸ್ಟಿಕ್ ಟ್ರೇಗಳಲ್ಲಿ ಅಳವಡಿಸಿ ನಂತರ 5 ಲೀಟರ್ ನೀರಿಗೆ 10 ಮಿ. ಲೀ. ಇಥ್ರೇಲ್ ಜೊತೆಗೆ 2 ಗ್ರಾಂ. ಸೋಡಿಯಂ ಹೈಡ್ರಾಕ್ಸೈಡ್ ಹರಳುಗಳನ್ನು ಮಿಶ್ರಣಮಾಡಿ ಈ ಟೆಂಟನಲ್ಲಿಟ್ಟು ತಕ್ಷಣ ಗಾಳಿಯಾಡದಂತೆ ಸೀಲ್ ಮಾಡಬೇಕು. ಇದರ ಜೊತೆಗೆ ಒಂದು ಬ್ಯಾಟರಿ ಚಾಲಿತ ಫ್ಯಾನ್ಇಡುವುದು ಹೆಚ್ಚು ಸೂಕ್ತ. ಈ ರೀತಿ ಉಪಚಾರ ಮಾಡಿದ 24 ಗಂಟೆಗಳ ನಂತರ ಟ್ರೇಗಳನ್ನು ಹೊರಗಡೆ ತೆಗೆದಿಡಬೇಕು. ಈ ರೀತಿ ಉಪಚರಿಸಿದ ಹಣ್ಣುಗಳು 4 ರಿಂದ 5 ದಿನಗಳಲ್ಲಿ ಏಕರೂಪವಾಗಿ ಪಕ್ವಗೊಳ್ಳುತ್ತವೆ. ಇಂತಹ ಹಣ್ಣುಗಳಿಗೆ ಮಾರುಕಟ್ಟೆಯಲ್ಲಿ ಹೆಚ್ಚಿನ ಬೆಲೆ ಸಿಗಲಿದೆ.
ಈ ಟೆಂಟ್ಗಳ ಬೆಲೆ ಸುಮಾರು ರೂ. 4,000 ಇದ್ದು, ಈಗಾಗಲೇ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ನೆಲೊಗಲ್ ಗ್ರಾಮದ ಶ್ರೀನಿವಾಸ ಜಾಲಿಹಾಳ ಅವರ ತೋಟದಲ್ಲಿ ಲಭ್ಯವಿದ್ದು, ಪ್ರಾತ್ಯಕ್ಷಿಕೆಗಾಗಿ ರೈತರು ಇದರ ಬಗ್ಗೆ ಮಾಹಿತಿ ಪಡೆದುಕೊಳ್ಳಬಹುದಾಗಿದೆ. ನಿಲೋಗಲ್ ಗ್ರಾಮದಲ್ಲಿ ಮಾವು ಮಾಗಿಸುವ ಪ್ಲಾಸ್ಟಿಕ್ ಟೆಂಟ್ ಬಗ್ಗೆ ವಿಧಾನ ಪ್ರಾತ್ಯಕ್ಷಿಕೆಯನ್ನು ಮಾಡಿ ರೈತರಿಗೆ ತೋರಿಸಲಾಗಿದೆ. ಇದರ ಪ್ರಾಮುಖ್ಯತೆಯನ್ನು ಹೆಚ್ಚಿನ ರೈತರು ತಿಳಿದುಕೊಂಡು ಆದಾಯವನ್ನು ಹೆಚ್ಚಿಸಬೇಕೆಂದು ಕರೆ ನೀಡಲಾಗಿದೆ.
ಹೀಗೆ ಈ ಟೆಂಟ್ಗಳ ಮೂಲಕ ಮಾಗಿಸಿದ ಹಣ್ಣುಗಳನ್ನು ಎ, ಬಿ, ಸಿ ಎಂದು ವರ್ಗಿಕರಿಸಿ 45x 6 x 17 ಸೆಂ.ಮೀ. ಅಥವಾ 32x 27x 10 ಸೆಂ.ಮೀ. ಗಾತ್ರದ ಪೆಟ್ಟಿಗೆಗಳಲ್ಲಿ ಮೆತ್ತನೆಯ ಹಾಸು (ಪೇಪರ್ ತುಂಡು ಅಥವಾ ಕಟ್ಟಿಗೆ ಹೊಟ್ಟು) ಹಾಕಿ ದೂರದ ಊರುಗಳಿಗೆ ಸಾಗಿಸಬಹುದಾಗಿದೆ.
-
ಮಾರ್ಚ್ 3, 2026 – ಪೂರ್ವ ಫಲ್ಗುಣಿ ನಕ್ಷತ್ರದಲ್ಲಿ ಕೇತುಗ್ರಸ್ತ ಮಹಾ ಚಂದ್ರಗ್ರಹಣ: ದ್ವಾದಶ ರಾಶಿಗಳ ಫಲಿತಾಂಶ -
Gold Rate Today: ಆಭರಣ ಪ್ರಿಯರ ಗಮನಕ್ಕೆ: ಬೆಂಗಳೂರಿನಲ್ಲಿ ಇಂದು ಚಿನ್ನ-ಬೆಳ್ಳಿ ದರ ಹೇಗಿದೆ? ಇಲ್ಲಿದೆ ಮಾಹಿತಿ -
National Highway: ರಾಜ್ಯದಲ್ಲಿ ಹೊಸ ರಾಷ್ಟ್ರೀಯ ಹೆದ್ದಾರಿಯ ಮಹತ್ವದ ಅಪ್ಡೇಟ್ -
ಹರ್ಮೂಜ್ ಜಲಸಂಧಿ ಬಂದ್: ಭಾರತಕ್ಕೆ ತಟ್ಟಲಿದೆ ತೈಲ ದರದ ಬಿಸಿ, ಆರ್ಥಿಕತೆಗೂ ಭಾರಿ ಹೊಡೆತ -
ಅಮೆರಿಕಕ್ಕೆ ಸೆಡ್ಡು ಹೊಡೆದು 16,800 ಕೋಟಿ ರೂ ಒಪ್ಪಂದ ಕಡಿದುಕೊಂಡ ಆಂತ್ರೋಪಿಕ್: ಬೆಂಗಳೂರು ಟೆಕ್ಕಿ ಮೆಚ್ಚುಗೆ -
Horoscope March 1: ಈ ರಾಶಿಯವರ ವ್ಯಾಪಾರ, ಆರೋಗ್ಯ ವೃದ್ಧಿ, ಇಂದಿನ ದಿನ ಭವಿಷ್ಯ ಇಲ್ಲಿದೆ. -
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಜೋಡಿಯಿಂದ ಕರ್ನಾಟಕ ಸೇರಿ ದೇಶದ ಪ್ರಮುಖ ದೇವಸ್ಥಾನಗಳಲ್ಲಿ ಅನ್ನದಾನ ಸೇವೆ -
ಮದುವೆ ಪೋಸ್ಟ್ನಲ್ಲಿ ರಶ್ಮಿಕಾ ವಿಶೇಷ ಸಾಲುಗಳು: ಕೊಡಗಿನ ಬೆಡಗಿಯ ವಿದ್ಯಾರ್ಹತೆ ಬಗ್ಗೆ ನಿಮಗೆಷ್ಟು ಗೊತ್ತು? -
Ali Khamenei: ಇರಾನ್ ಸುಪ್ರೀಂ ನಾಯಕ ಖಮೇನಿ ಭೇಟಿ ನೀಡಿದ್ದ ಚಿಕ್ಕಬಳ್ಳಾಪುರದ ಅಲೀಪುರ ಗ್ರಾಮದ ವಿಶೇಷವೇನು -
ಮಧ್ಯಪ್ರಾಚ್ಯದಲ್ಲಿ ವಿಮಾನಗಳ ಸಂಚಾರ ವ್ಯತ್ಯಯ: ಕರ್ನಾಟಕದ ನಾಗರಿಕರಿಗೆ ಸರ್ಕಾರ ನೆರವು -
ಬೇರೆ ದೇಶಗಳಂತೆ ಭಾರತೀಯರಿಗೆ ಭಯದಿಂದ ನಿದ್ರಿಸುವ ಪರಿಸ್ಥಿತಿ ಅಲ್ಲ: ನಿವೃತ್ತ ಸೇನಾಧಿಕಾರಿ ಸುನೀಲ್ ಕುಮಾರ್ ಶಾಸ್ತ್ರಿ -
Lunar Eclipse: ಮಾರ್ಚ್ 3 ಹುಣ್ಣಿಮೆ: ವರ್ಷದ ಮೊದಲ ಮಹಾ ಚಂದ್ರ ಗ್ರಹಣ – ನಾಲ್ಕು ರಾಶಿಗಳಿಗೆ ಮಹಾ ಶುಭ ಫಲ












Click it and Unblock the Notifications