ರೈತರಿಗೆ ವರದಾನವಾದ ಮಾವು ಮಾಗಿಸುವ ನೂತನ ತಂತ್ರಜ್ಞಾನ
ಕೊಪ್ಪಳ, ಏಪ್ರಿಲ್ 24: ಕರ್ನಾಟಕದಲ್ಲಿ ಮಾವು ಬೆಳೆಯುವ ಜಿಲ್ಲೆಗಳಲ್ಲಿ ಕೊಪ್ಪಳ ಸಹ ಸೇರಿದೆ. 'ಕೊಪ್ಪಳ ಕೇಸರ್ ಮಾವು' ಎಂಬ ಬ್ರಾಂಡ್ ಇದ್ದು, ಕೊಪ್ಪಳದ ಮಾವಿನ ಹಣ್ಣುಗಳಿಗೆ ದೇಶ-ವಿದೇಶದಲ್ಲಿ ಹೆಚ್ಚಿನ ಬೇಡಿಕೆ ಇದೆ. ತೋಟಗಾರಿಕಾ ಇಲಾಖೆ ಕಾಲ ಕಾಲಕ್ಕೆ ಜಿಲ್ಲೆಯ ರೈತರಿಗೆ ಮಾವು ಬೆಳೆಯ ನೂತನ ತಂತ್ರಜ್ಞಾನದ ಕುರಿತು ಮಾಹಿತಿ ನೀಡುತ್ತಲೇ ಇರುತ್ತದೆ. ಈಗ ಮಾವು ಮಾಗಿಸುವ ನೂತನ ತಂತ್ರಜ್ಞಾನವನ್ನು ಪರಿಚಯಿಸಲಾಗಿದೆ.
ಕೊಪ್ಪಳ ಜಿಲ್ಲೆಯಾದ್ಯಂತ ಈಗ ಮಾವು ಬೆಳೆ ಈಗ ಕಟಾವಿಗೆ ಸಿದ್ದವಾಗಿದೆ. ರೈತರಿಗೆ ಉತ್ತಮ ಬೆಲೆ ದೊರೆಯುವ ನಿರೀಕ್ಷೆಯಿದ್ದು, ವೈಜ್ಞಾನಿಕವಾಗಿ ಹಣ್ಣು ಮಾಗಿಸಿದಲ್ಲಿ ಹೆಚ್ಚಿನ ಲಾಭ ಪಡೆಯಬಹುದಾಗಿದೆ ಎಂದು ಕೊಪ್ಪಳ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದ ವಿಜ್ಞಾನಿಗಳು ರೈತರಿಗೆ ಸಲಹೆ ನೀಡಿದ್ದಾರೆ.

ಮಾವು ಕಟಾವು ಮೊದಲು ರೈತರು ಮ್ಯಾಚುರಿಟಿ ಇಂಡೆಕ್ಸ್ ಅಂದರೆ, ಹಣ್ಣಿನ ಆಕಾರ, ಗಾತ್ರ ಮತ್ತು ಬಣ್ಣ ಆಧರಿಸಿ ಹಣ್ಣುಗಳು ಕಟಾವಿಗೆ ಬಂದಿದೆ, ಹಣ್ಣುಗಳ ಬುಜಗಳು ಎತ್ತರವಾಗಿ ಕಿತ್ತಳೆ ಬಣ್ಣಕ್ಕೆ ತಿರುಗುತ್ತವೆ ಎನ್ನುವ ಸೂಚನೆ ಕುರಿತು ತಿಳಿದುಕೊಂಡಿರಬೇಕು ಎಂದು ಹೇಳಿದ್ದಾರೆ.
ಸಾಮಾನ್ಯವಾಗಿ ತಳಿಯನ್ನಾಧರಿಸಿ ಕಾಯಿ ಕಚ್ಚಿದ ನಂತರ 15 ರಿಂದ 16 ವಾರಗಳಲ್ಲಿ ಕಾಯಿಗಳು ಕಟಾವಿಗೆ ಬರುತ್ತವೆ. ಈ ಸಮಯದಲ್ಲಿ 6 ರಿಂದ 8 ಕಾಯಿಗಳು ಉದುರಿ ಬೀಳುತ್ತವೆ. ಇವೆಲ್ಲವುಗಳನ್ನು ಗಮನಿಸಿ ಸೂಕ್ತ ಸಮಯದಲ್ಲಿ ಕೊಯ್ಲು ಮಾಡಬೇಕು. ಕಟಾವು ಮಾಡುವಾಗ ಸುಮಾರು 1 ರಿಂದ 1.5 ಇಂಚಿನಷ್ಟು ದೇಟಿನೊಂದಿಗೆ ಕಟಾವು ಮಾಡಿ ನೆರಳಿನಲ್ಲಿ ಆರಿಸಬೇಕು ಎಂದು ತಿಳಿಸಿದ್ದಾರೆ.
ಮಾವು ಮಾಗಿಸುವ ಪ್ಲಾಸ್ಟಿಕ್ ಟೆಂಟ್: ಮಾವು ಮಾಗಿಸುವ ಟೆಂಟುಗಳು ಕಡಿಮೆ ಬೆಲೆಯಲ್ಲಿ ಲಭ್ಯವಿದ್ದು, ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆ, ಹೆಸರಘಟ್ಟ, ಬೆಂಗಳೂರು ಇಲ್ಲಿ ಲಭ್ಯವಿರುತ್ತವೆ. ರೈತರು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬಹುದು. ಈ ಟೆಂಟುಗಳು 200 ಮೈಕ್ರಾನ್ ಪ್ಲಾಸ್ಟಿಕ್ನಿಂದ ತಯಾರಿಸಲಾಗಿದ್ದು, ಸುಮಾರು 4 ಘನ ಮೀಟರ್ ಅಳತೆಯುಳ್ಳದ್ದಾಗಿದೆ ಮತ್ತು ಒಂದು ಟನ್ನಷ್ಟು ಹಣ್ಣುಗಳನ್ನು ಮಾಗಿಸುವ ಸಾಮರ್ಥ್ಯವನ್ನು ಹೊಂದಿದೆ.
ಇದರ ಒಳಗಡೆ ಸುಮಾರು 750 ಕೆಜಿ ಹಣ್ಣುಗಳನ್ನು ಪ್ಲಾಸ್ಟಿಕ್ ಟ್ರೇಗಳಲ್ಲಿ ಅಳವಡಿಸಿ ನಂತರ 5 ಲೀಟರ್ ನೀರಿಗೆ 10 ಮಿ. ಲೀ. ಇಥ್ರೇಲ್ ಜೊತೆಗೆ 2 ಗ್ರಾಂ. ಸೋಡಿಯಂ ಹೈಡ್ರಾಕ್ಸೈಡ್ ಹರಳುಗಳನ್ನು ಮಿಶ್ರಣಮಾಡಿ ಈ ಟೆಂಟನಲ್ಲಿಟ್ಟು ತಕ್ಷಣ ಗಾಳಿಯಾಡದಂತೆ ಸೀಲ್ ಮಾಡಬೇಕು. ಇದರ ಜೊತೆಗೆ ಒಂದು ಬ್ಯಾಟರಿ ಚಾಲಿತ ಫ್ಯಾನ್ಇಡುವುದು ಹೆಚ್ಚು ಸೂಕ್ತ. ಈ ರೀತಿ ಉಪಚಾರ ಮಾಡಿದ 24 ಗಂಟೆಗಳ ನಂತರ ಟ್ರೇಗಳನ್ನು ಹೊರಗಡೆ ತೆಗೆದಿಡಬೇಕು. ಈ ರೀತಿ ಉಪಚರಿಸಿದ ಹಣ್ಣುಗಳು 4 ರಿಂದ 5 ದಿನಗಳಲ್ಲಿ ಏಕರೂಪವಾಗಿ ಪಕ್ವಗೊಳ್ಳುತ್ತವೆ. ಇಂತಹ ಹಣ್ಣುಗಳಿಗೆ ಮಾರುಕಟ್ಟೆಯಲ್ಲಿ ಹೆಚ್ಚಿನ ಬೆಲೆ ಸಿಗಲಿದೆ.
ಈ ಟೆಂಟ್ಗಳ ಬೆಲೆ ಸುಮಾರು ರೂ. 4,000 ಇದ್ದು, ಈಗಾಗಲೇ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ನೆಲೊಗಲ್ ಗ್ರಾಮದ ಶ್ರೀನಿವಾಸ ಜಾಲಿಹಾಳ ಅವರ ತೋಟದಲ್ಲಿ ಲಭ್ಯವಿದ್ದು, ಪ್ರಾತ್ಯಕ್ಷಿಕೆಗಾಗಿ ರೈತರು ಇದರ ಬಗ್ಗೆ ಮಾಹಿತಿ ಪಡೆದುಕೊಳ್ಳಬಹುದಾಗಿದೆ. ನಿಲೋಗಲ್ ಗ್ರಾಮದಲ್ಲಿ ಮಾವು ಮಾಗಿಸುವ ಪ್ಲಾಸ್ಟಿಕ್ ಟೆಂಟ್ ಬಗ್ಗೆ ವಿಧಾನ ಪ್ರಾತ್ಯಕ್ಷಿಕೆಯನ್ನು ಮಾಡಿ ರೈತರಿಗೆ ತೋರಿಸಲಾಗಿದೆ. ಇದರ ಪ್ರಾಮುಖ್ಯತೆಯನ್ನು ಹೆಚ್ಚಿನ ರೈತರು ತಿಳಿದುಕೊಂಡು ಆದಾಯವನ್ನು ಹೆಚ್ಚಿಸಬೇಕೆಂದು ಕರೆ ನೀಡಲಾಗಿದೆ.
ಹೀಗೆ ಈ ಟೆಂಟ್ಗಳ ಮೂಲಕ ಮಾಗಿಸಿದ ಹಣ್ಣುಗಳನ್ನು ಎ, ಬಿ, ಸಿ ಎಂದು ವರ್ಗಿಕರಿಸಿ 45x 6 x 17 ಸೆಂ.ಮೀ. ಅಥವಾ 32x 27x 10 ಸೆಂ.ಮೀ. ಗಾತ್ರದ ಪೆಟ್ಟಿಗೆಗಳಲ್ಲಿ ಮೆತ್ತನೆಯ ಹಾಸು (ಪೇಪರ್ ತುಂಡು ಅಥವಾ ಕಟ್ಟಿಗೆ ಹೊಟ್ಟು) ಹಾಕಿ ದೂರದ ಊರುಗಳಿಗೆ ಸಾಗಿಸಬಹುದಾಗಿದೆ.
-
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications