ರೈತರಿಗೆ ವರದಾನವಾದ ಮಾವು ಮಾಗಿಸುವ ನೂತನ ತಂತ್ರಜ್ಞಾನ
ಕೊಪ್ಪಳ, ಏಪ್ರಿಲ್ 24: ಕರ್ನಾಟಕದಲ್ಲಿ ಮಾವು ಬೆಳೆಯುವ ಜಿಲ್ಲೆಗಳಲ್ಲಿ ಕೊಪ್ಪಳ ಸಹ ಸೇರಿದೆ. 'ಕೊಪ್ಪಳ ಕೇಸರ್ ಮಾವು' ಎಂಬ ಬ್ರಾಂಡ್ ಇದ್ದು, ಕೊಪ್ಪಳದ ಮಾವಿನ ಹಣ್ಣುಗಳಿಗೆ ದೇಶ-ವಿದೇಶದಲ್ಲಿ ಹೆಚ್ಚಿನ ಬೇಡಿಕೆ ಇದೆ. ತೋಟಗಾರಿಕಾ ಇಲಾಖೆ ಕಾಲ ಕಾಲಕ್ಕೆ ಜಿಲ್ಲೆಯ ರೈತರಿಗೆ ಮಾವು ಬೆಳೆಯ ನೂತನ ತಂತ್ರಜ್ಞಾನದ ಕುರಿತು ಮಾಹಿತಿ ನೀಡುತ್ತಲೇ ಇರುತ್ತದೆ. ಈಗ ಮಾವು ಮಾಗಿಸುವ ನೂತನ ತಂತ್ರಜ್ಞಾನವನ್ನು ಪರಿಚಯಿಸಲಾಗಿದೆ.
ಕೊಪ್ಪಳ ಜಿಲ್ಲೆಯಾದ್ಯಂತ ಈಗ ಮಾವು ಬೆಳೆ ಈಗ ಕಟಾವಿಗೆ ಸಿದ್ದವಾಗಿದೆ. ರೈತರಿಗೆ ಉತ್ತಮ ಬೆಲೆ ದೊರೆಯುವ ನಿರೀಕ್ಷೆಯಿದ್ದು, ವೈಜ್ಞಾನಿಕವಾಗಿ ಹಣ್ಣು ಮಾಗಿಸಿದಲ್ಲಿ ಹೆಚ್ಚಿನ ಲಾಭ ಪಡೆಯಬಹುದಾಗಿದೆ ಎಂದು ಕೊಪ್ಪಳ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದ ವಿಜ್ಞಾನಿಗಳು ರೈತರಿಗೆ ಸಲಹೆ ನೀಡಿದ್ದಾರೆ.

ಮಾವು ಕಟಾವು ಮೊದಲು ರೈತರು ಮ್ಯಾಚುರಿಟಿ ಇಂಡೆಕ್ಸ್ ಅಂದರೆ, ಹಣ್ಣಿನ ಆಕಾರ, ಗಾತ್ರ ಮತ್ತು ಬಣ್ಣ ಆಧರಿಸಿ ಹಣ್ಣುಗಳು ಕಟಾವಿಗೆ ಬಂದಿದೆ, ಹಣ್ಣುಗಳ ಬುಜಗಳು ಎತ್ತರವಾಗಿ ಕಿತ್ತಳೆ ಬಣ್ಣಕ್ಕೆ ತಿರುಗುತ್ತವೆ ಎನ್ನುವ ಸೂಚನೆ ಕುರಿತು ತಿಳಿದುಕೊಂಡಿರಬೇಕು ಎಂದು ಹೇಳಿದ್ದಾರೆ.
ಸಾಮಾನ್ಯವಾಗಿ ತಳಿಯನ್ನಾಧರಿಸಿ ಕಾಯಿ ಕಚ್ಚಿದ ನಂತರ 15 ರಿಂದ 16 ವಾರಗಳಲ್ಲಿ ಕಾಯಿಗಳು ಕಟಾವಿಗೆ ಬರುತ್ತವೆ. ಈ ಸಮಯದಲ್ಲಿ 6 ರಿಂದ 8 ಕಾಯಿಗಳು ಉದುರಿ ಬೀಳುತ್ತವೆ. ಇವೆಲ್ಲವುಗಳನ್ನು ಗಮನಿಸಿ ಸೂಕ್ತ ಸಮಯದಲ್ಲಿ ಕೊಯ್ಲು ಮಾಡಬೇಕು. ಕಟಾವು ಮಾಡುವಾಗ ಸುಮಾರು 1 ರಿಂದ 1.5 ಇಂಚಿನಷ್ಟು ದೇಟಿನೊಂದಿಗೆ ಕಟಾವು ಮಾಡಿ ನೆರಳಿನಲ್ಲಿ ಆರಿಸಬೇಕು ಎಂದು ತಿಳಿಸಿದ್ದಾರೆ.
ಮಾವು ಮಾಗಿಸುವ ಪ್ಲಾಸ್ಟಿಕ್ ಟೆಂಟ್: ಮಾವು ಮಾಗಿಸುವ ಟೆಂಟುಗಳು ಕಡಿಮೆ ಬೆಲೆಯಲ್ಲಿ ಲಭ್ಯವಿದ್ದು, ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆ, ಹೆಸರಘಟ್ಟ, ಬೆಂಗಳೂರು ಇಲ್ಲಿ ಲಭ್ಯವಿರುತ್ತವೆ. ರೈತರು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬಹುದು. ಈ ಟೆಂಟುಗಳು 200 ಮೈಕ್ರಾನ್ ಪ್ಲಾಸ್ಟಿಕ್ನಿಂದ ತಯಾರಿಸಲಾಗಿದ್ದು, ಸುಮಾರು 4 ಘನ ಮೀಟರ್ ಅಳತೆಯುಳ್ಳದ್ದಾಗಿದೆ ಮತ್ತು ಒಂದು ಟನ್ನಷ್ಟು ಹಣ್ಣುಗಳನ್ನು ಮಾಗಿಸುವ ಸಾಮರ್ಥ್ಯವನ್ನು ಹೊಂದಿದೆ.
ಇದರ ಒಳಗಡೆ ಸುಮಾರು 750 ಕೆಜಿ ಹಣ್ಣುಗಳನ್ನು ಪ್ಲಾಸ್ಟಿಕ್ ಟ್ರೇಗಳಲ್ಲಿ ಅಳವಡಿಸಿ ನಂತರ 5 ಲೀಟರ್ ನೀರಿಗೆ 10 ಮಿ. ಲೀ. ಇಥ್ರೇಲ್ ಜೊತೆಗೆ 2 ಗ್ರಾಂ. ಸೋಡಿಯಂ ಹೈಡ್ರಾಕ್ಸೈಡ್ ಹರಳುಗಳನ್ನು ಮಿಶ್ರಣಮಾಡಿ ಈ ಟೆಂಟನಲ್ಲಿಟ್ಟು ತಕ್ಷಣ ಗಾಳಿಯಾಡದಂತೆ ಸೀಲ್ ಮಾಡಬೇಕು. ಇದರ ಜೊತೆಗೆ ಒಂದು ಬ್ಯಾಟರಿ ಚಾಲಿತ ಫ್ಯಾನ್ಇಡುವುದು ಹೆಚ್ಚು ಸೂಕ್ತ. ಈ ರೀತಿ ಉಪಚಾರ ಮಾಡಿದ 24 ಗಂಟೆಗಳ ನಂತರ ಟ್ರೇಗಳನ್ನು ಹೊರಗಡೆ ತೆಗೆದಿಡಬೇಕು. ಈ ರೀತಿ ಉಪಚರಿಸಿದ ಹಣ್ಣುಗಳು 4 ರಿಂದ 5 ದಿನಗಳಲ್ಲಿ ಏಕರೂಪವಾಗಿ ಪಕ್ವಗೊಳ್ಳುತ್ತವೆ. ಇಂತಹ ಹಣ್ಣುಗಳಿಗೆ ಮಾರುಕಟ್ಟೆಯಲ್ಲಿ ಹೆಚ್ಚಿನ ಬೆಲೆ ಸಿಗಲಿದೆ.
ಈ ಟೆಂಟ್ಗಳ ಬೆಲೆ ಸುಮಾರು ರೂ. 4,000 ಇದ್ದು, ಈಗಾಗಲೇ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ನೆಲೊಗಲ್ ಗ್ರಾಮದ ಶ್ರೀನಿವಾಸ ಜಾಲಿಹಾಳ ಅವರ ತೋಟದಲ್ಲಿ ಲಭ್ಯವಿದ್ದು, ಪ್ರಾತ್ಯಕ್ಷಿಕೆಗಾಗಿ ರೈತರು ಇದರ ಬಗ್ಗೆ ಮಾಹಿತಿ ಪಡೆದುಕೊಳ್ಳಬಹುದಾಗಿದೆ. ನಿಲೋಗಲ್ ಗ್ರಾಮದಲ್ಲಿ ಮಾವು ಮಾಗಿಸುವ ಪ್ಲಾಸ್ಟಿಕ್ ಟೆಂಟ್ ಬಗ್ಗೆ ವಿಧಾನ ಪ್ರಾತ್ಯಕ್ಷಿಕೆಯನ್ನು ಮಾಡಿ ರೈತರಿಗೆ ತೋರಿಸಲಾಗಿದೆ. ಇದರ ಪ್ರಾಮುಖ್ಯತೆಯನ್ನು ಹೆಚ್ಚಿನ ರೈತರು ತಿಳಿದುಕೊಂಡು ಆದಾಯವನ್ನು ಹೆಚ್ಚಿಸಬೇಕೆಂದು ಕರೆ ನೀಡಲಾಗಿದೆ.
ಹೀಗೆ ಈ ಟೆಂಟ್ಗಳ ಮೂಲಕ ಮಾಗಿಸಿದ ಹಣ್ಣುಗಳನ್ನು ಎ, ಬಿ, ಸಿ ಎಂದು ವರ್ಗಿಕರಿಸಿ 45x 6 x 17 ಸೆಂ.ಮೀ. ಅಥವಾ 32x 27x 10 ಸೆಂ.ಮೀ. ಗಾತ್ರದ ಪೆಟ್ಟಿಗೆಗಳಲ್ಲಿ ಮೆತ್ತನೆಯ ಹಾಸು (ಪೇಪರ್ ತುಂಡು ಅಥವಾ ಕಟ್ಟಿಗೆ ಹೊಟ್ಟು) ಹಾಕಿ ದೂರದ ಊರುಗಳಿಗೆ ಸಾಗಿಸಬಹುದಾಗಿದೆ.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications