ಕೊಪ್ಪಳ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊಪ್ಪಳದಲ್ಲಿ ಮಧುಚಂದ್ರದ ರಾತ್ರಿಯೇ ಮದುಮಗಳ ಅಪಹರಣ

|
Google Oneindia Kannada News

ಗಂಗಾವತಿ, ಅಕ್ಟೋಬರ್ 11: ತಾಳಿಕಟ್ಟಿಸಿಕೊಂಡಾಗಿದೆ, ಗಂಡನೊಂದಿಗೆ ಸಪ್ತಪದಿ ತುಳಿದಾಗಿದೆ ಮದುವೆಯಾಗಿ ಹದಿನೈದು ದಿನಗಳ ಬಳಿಕ ಕಾರ್ಯಕ್ರಮವೊಂದನ್ನು ಆಯೋಜನೆ ಮಾಡಲಾಗಿತ್ತು, ಆದರೆ ಅದೇ ದಿನ ವಧು ನಾಪತ್ತೆಯಾಗಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ.

ಬೆಂಗಳೂರಿಂದ ಉತ್ತರ ಪ್ರದೇಶಕ್ಕೆ ಹೊರಟಿದ್ದ ತಾಯಿ-ಮಗಳು ಕಿಡ್ನ್ಯಾಪ್ ಬೆಂಗಳೂರಿಂದ ಉತ್ತರ ಪ್ರದೇಶಕ್ಕೆ ಹೊರಟಿದ್ದ ತಾಯಿ-ಮಗಳು ಕಿಡ್ನ್ಯಾಪ್

ಮುಂದಿನ ಜೀವನದ ಬಗ್ಗೆ ನವ ಜೋಡಿಗಳು ಕಟ್ಟಿಕೊಂಡಿದ್ದ ಸಾವಿರಾರು ಕನಸುಗಳು ಭಗ್ನವಾಗಿವೆ, ಗುಡೂರು ಗ್ರಾಮದ ಗಾಯಿತ್ರಿ ಹಾಗೂ ಮಲ್ಲನಗೌಡ ಕುಷ್ಟಗಿ ತಾಲೂಕಿನ ಪುರದ ಸೋಮನಾಥ ದೇವಸ್ಥಾನದಲ್ಲಿ ಕುಟುಂಬದವರ ಸಮ್ಮುಖದಲ್ಲಿ ವಿವಾಹವಾಗಿದ್ದರು. 15 ದಿನಗಳ ಬಳಿಕ ಯುವತಿ ತವರು ಮನೆ ಗುಡೂರಿನಲ್ಲಿ ಮೊದಲ ರಾತ್ರಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಸಾಲ ವಾಪಸ್ ನೀಡದ್ದಕ್ಕೆ ಸ್ನೇಹಿತನ ಹೆಂಡತಿಯನ್ನೇ ಮದುವೆಯಾದ ಭೂಪ ಸಾಲ ವಾಪಸ್ ನೀಡದ್ದಕ್ಕೆ ಸ್ನೇಹಿತನ ಹೆಂಡತಿಯನ್ನೇ ಮದುವೆಯಾದ ಭೂಪ

ಆದರೆ ಅಂದೇ ಯುವತಿಯನ್ನು ಆರು ಜನ ಸೇರಿ ಅಪಹರಿಸಿದ್ದಾರೆ ಎಂದು ತಿಳಿದುಬಂದಿದೆ. ಸೆಪ್ಟೆಂಬರ್ 24ರಂದು ಮದುವೆ ನಡೆದಿತ್ತು.

Newly married woman kidnapped at first night

ಅಪಹರಣಕಾರರ ವಿರುದ್ಧ ಕಾರಟಗಿ ಠಾಣೆಯಲ್ಲಿ ದೂರು ನೀಡಿದ್ದರೂ ಅವರು ವಿಚಾರಣೆ ನಡೆಸುತ್ತಿಲ್ಲ ಎಂದು ಮಲ್ಲನಗೌಡ ಆರೋಪಿಸಿದ್ದಾರೆ. ಅಪಹರಣಕ್ಕೆ ಕುಟುಂಬದ ವೈಶಮ್ಯ ಕಾರಣವಾ ಅಥವಾ ಇನ್ಯಾವ ಕಾರಣ ಇದೆ ಎಂದು ತಿಳಿದುಬಂದಿಲ್ಲ, ವಧು ಶೌಚಾಲಯಕ್ಕೆ ಹೋದಾಗ ಆಕೆಯನ್ನು ಅಪಹರಿಸಲಾಗಿದೆ.

English summary
In a strange incident, newly married woman kidnapped by miscreants at first from her husband's place. Police have arrested six persons who involved in the case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X