ನಿರ್ಬಂಧದ ನಡುವೆ ಪಲ್ಲಕ್ಕಿ ಉತ್ಸವ: 50ಕ್ಕೂ ಹೆಚ್ಚು ಜನರ ಬಂಧನ
ಕೊಪ್ಪಳ, ಆಗಸ್ಟ್ 21: ನಿರ್ಬಂಧದ ನಡುವೆಯೂ ಅಡ್ಡಪಲ್ಲಕ್ಕಿ ಉತ್ಸವವನ್ನು ಆಚರಣೆ ಮಾಡಿದ್ದರ ಪರಿಣಾಮ 50 ಜನರನ್ನು ಪೊಲೀಸರು ಬಂಧಿಸಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ.
Recommended Video
ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ದೋಟಿಹಾಳ ಗ್ರಾಮದ ಶ್ರೀಅವಧೂತ ಶುಕಮುನಿ ದೇವರ ಆರಾಧನೆ ಮಹೋತ್ಸವದ ನಿಮಿತ್ತ ಪ್ರತಿ ವರ್ಷ ಅಡ್ಡಪಲ್ಲಕ್ಕಿ ಉತ್ಸವ ಅದ್ಧೂರಿಯಾಗಿ ಆಚರಿಸಲಾಗುತ್ತಿತ್ತು. ಆದರೆ ಬಾರಿ ಕೊರೊನಾ ವೈರಸ್ ಭೀತಿಯಿಂದ ಅಡ್ಡಪಲ್ಲಕ್ಕಿ ಉತ್ಸವವನ್ನು ಸರಳವಾಗಿ ದೇವಸ್ಥಾನದ ಆವರಣದಲ್ಲಿ ಆಚರಿಸಲು ದೇವಸ್ಥಾನದ ಆಡಳಿತ ಮಂಡಳಿ ನಿರ್ಧರಿಸಿತ್ತು.
ಭಕ್ತರು ಏಕಾಏಕಿ ದೇವಸ್ಥಾನದ ಮುಖ್ಯದ್ವಾರದ ಬಾಗಿಲು ಒಡೆಯಲು ಆರಂಭಿಸಿದರು. ಕೊನೆಗೆ ದೇವಸ್ಥಾನದ ಶೆಟರ್ ಧ್ವಂಸಗೊಳಿಸಿ ಪಲ್ಲಕ್ಕಿಯನ್ನು ಹೊರ ತಂದು ಗ್ರಾಮದಲ್ಲಿ ಮೆರವಣಿಗೆ ಮಾಡಲಾಯಿತು. ಈ ಮಧ್ಯೆ ಪಲ್ಲಕ್ಕಿ ಹೊರಬರುತ್ತಿದಂತೆ ಅಲ್ಲೆ ನಿಲ್ಲಿಸಲಾಗಿದ್ದ ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದಿದ್ದು, ಪೊಲೀಸ್ ವಾಹನದ ಗಾಜು ಪುಡಿಪುಡಿಯಾಗಿದೆ.

ಅಡ್ಡಪಲ್ಲಕ್ಕಿ ಉತ್ಸವಕ್ಕೆ ತಹಶೀಲ್ದಾರರು ನಿರ್ಬಂಧ ಹೇರಿದ್ದರೂ ಕೂಡಾ ಸಾವಿರಾರು ಜನರ ಮಧ್ಯೆ ಪಲ್ಲಕ್ಕಿ ಉತ್ಸವ ಆಚರಣೆ ಮಾಡಿದ್ದಾರೆ. ಅಲ್ಲದೇ ನಾನಾ ಅವಾಂತರಕ್ಕೂ ಕಾರಣವಾಯಿತು.
ಸ್ಥಳದಲ್ಲಿ ಬೀಡು ಬಿಟ್ಟಿದ್ದ ಕುಷ್ಟಗಿ ತಹಶೀಲ್ದಾರ್ ಎಂ.ಸಿದ್ದೇಶ ಸೇರಿದಂತೆ ಪೊಲೀಸ್ ಅಧಿಕಾರಿಗಳ ಮಾತಿಗೂ ಜನರು ಕಿಮ್ಮತ್ತು ನೀಡಲಿಲ್ಲ. ಕೊನೆಗೆ ಪೊಲೀಸರು ಮತ್ತು ಜನರ ನಡುವೆ ಮಾತಿನ ಚಕಮಕಿ ನಡೆಯಿತು. ಈ ವೇಳೆ ಪೊಲೀಸರು ಜನರ ಮೇಲೆ ಲಾಠಿ ಕೂಡ ಬೀಸಿದರು.
ಒಂದು ಗಂಟೆಗಳ ಕಾಲ ಗ್ರಾಮದ ಮಧ್ಯೆ ಗ್ರಾಮಸ್ಥರು ಪಲ್ಲಕ್ಕಿ ಬಿಟ್ಟು ಹೋಗಿದ್ದರು. ಪೊಲೀಸರು ಪಲ್ಲಕ್ಕಿ ಹೊತ್ತು ದೇವಸ್ಥಾನಕ್ಕೆ ತಂದಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ರಾತ್ರಿ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಸಂಗೀತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ಕುಷ್ಟಗಿ ಕಂದಾಯ ನೀರಿಕ್ಷಕ ಮತ್ತು ಪೊಲೀಸ್ ಠಾಣೆ ಸಿಬ್ಬಂದಿಯಿಂದ ಪ್ರತ್ಯೇಕ ದೂರು ದಾಖಲು ಮಾಡಿದ್ದಾರೆ. ಇಬ್ಬರ ದೂರಿನನ್ವಯ ಪೊಲೀಸರು 50ಕ್ಕೂ ಹೆಚ್ಚು ಜನರನ್ನು ಬಂಧಿಸಿದ್ದಾರೆ.
-
Moodbidri: ಮಹಿಳೆಯರನ್ನು ಮಂಚಕ್ಕೆ ಕರೆದಿದ್ದ ಆರೋಪ: ಮೂಡುಬಿದರೆ ಇನ್ಸ್ಪೆಕ್ಟರ್ ದೌರ್ಜನ್ಯ ಪ್ರಕರಣ ಸಿಐಡಿ ತನಿಖೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications