ಕೊಪ್ಪಳ ರಾಯರ ಮಠದ ಆಸ್ತಿ ವಿವಾದ: ಸುಬುಧೇಂದ್ರ ಶ್ರೀಗಳ ವಿರುದ್ಧ ಭಕ್ತರಿಂದ ಪ್ರತಿಭಟನೆ
ಕೊಪ್ಪಳ, ಮಾರ್ಚ್, 28: ಕೊಪ್ಪಳ ರಾಘವೇಂದ್ರ ಮಠದ ಆಸ್ತಿ ವಿವಾದ ಮತ್ತೆ ಮುನ್ನಲೆಗೆ ಬಂದಿದೆ. ಕೊಪ್ಪಳದ ರಾಯರ ಮಠ ಮಂತ್ರಾಲಯದ ಪೀಠಕ್ಕೆ ಸೇರಿದೆ ಎಂಬ ಮಂತ್ರಾಲಯ ಮಠದ ಪೀಠಾಧಿಪತಿ ಸುಬುಧೇಂದ್ರ ಶ್ರೀಗಳ ಹೇಳಿಕೆಯನ್ನು ಖಂಡಿಸಿ ಬುಧವಾರ ಮಧ್ಯರಾತ್ರಿ ಕೊಪ್ಪಳದ ರಾಯರ ಮಠದ ಭಕ್ತರು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.
ರಾಯರ ಮಠದಲ್ಲಿ ಆಯೋಜನೆಗೊಂಡಿದ್ದ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಂತ್ರಾಲಯದ ರಾಯರ ಮಠದ ಸುಬುಧೇಂದ್ರ ಶ್ರೀಗಳು ಬುಧವಾರ ರಾತ್ರಿ ನಗರಕ್ಕೆ ಆಗಮಿಸಿದ್ದರು. ಭಕ್ತರನ್ನುದ್ದೇಶಿಸಿ ಆಶೀರ್ವಚನ ನೀಡುವಾಗ, ಕೊಪ್ಪಳದ ರಾಯರ ಮಠ ಮಂತ್ರಾಲಯದ ಪೀಠಕ್ಕೆ ಸೇರಿದೆ. ಇದಕ್ಕೆ ಸಂಬಂಧಿಸಿದ ದಾಖಲೆಗಳು ನಮ್ಮ ಬಳಿಯಿವೆ ಎಂದು ಹೇಳಿದ್ಧಾರೆ.

ಅಲ್ಲದೆ, ಮಠಕ್ಕೆ ನೂತನವಾಗಿ ಟ್ರಸ್ಟ್ ರಚನೆ ಮಾಡಬೇಕು. ಟ್ರಸ್ಟ್ ಸಮಿತಿಯಲ್ಲಿ ಯಾರು ಇರಬೇಕು ಎನ್ನುವ ಪಟ್ಟಿಯನ್ನು ನೀಡಿ. ಅದರಲ್ಲಿ ಟ್ರಸ್ಟ್ ಸಮಿತಿಯಲ್ಲಿ ಯಾರು ಇರಬೇಕು ಎಂಬ ಬಗ್ಗೆ ತೀರ್ಮಾನ ಮಾಡಿತ್ತೇವೆ. ಮಠ ಶಿಥಿಲಗೊಂಡಿದ್ದು, ನಾವು ಹಣ ನೀಡಿ ಅಭಿವೃದ್ಧಿ ಮಾಡುತ್ತೇವೆ ಎಂದು ಹೇಳಿದ್ದರು.
ಸುಬುಧೇಂದ್ರ ತೀರ್ಥರ ಈ ಹೇಳಿಕೆಯನ್ನು ಭಕ್ತರಿ ಖಂಡಿಸಿ ಪ್ರತಿಭಟನೆ ನಡೆಸಿದ್ದಾರೆ. ಕೊಪ್ಪಳದ ರಾಯರ ಮಠದ ವಿವಾದವು ಬುಧವಾರ ರಾತ್ರೋ ರಾತ್ರಿ ಭುಗಿಲೆದಿದೆ. ಕೊಪ್ಪಳದ ರಾಘವೇಂದ್ರ ಮಠವನ್ನು ಮಂತ್ರಾಲಯದ ಮಠದ ಸುರ್ಪದಿಗೆ ಹಂತ ಹಂತವಾಗಿ ಪಡೆಯಲು ಹುನ್ನಾರ ನಡೆಸಿದ್ದಾರೆ ಆರೋಪಿಸಿದ್ಧಾರೆ. ಅಲ್ಲದೆ, ಇದಕ್ಕೆ ಅವಕಾಶ ನೀಡುವುದಿಲ್ಲ ಎಂದು ಶ್ರೀಗಳ ವಿರುದ್ಧ ಭಕ್ತರಿ ಪ್ರತಿಭಟನೆ ನಡೆಸಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಮಂತ್ರಾಲಯದ ರಾಯರ ಮಠದ ಸುಬುಧೇಂದ್ರ ತೀರ್ಥರು, ನಾನೂ ಯಾವುದೇ ವಿವಾದಾತ್ಮಕ ಹೇಳಿಕೆಯನ್ನೂ ನೀಡಿಲ್ಲ. 1971ರಲ್ಲಿ ಮಂತ್ರಾಲಯದ ರಾಯರ ಮಠಕ್ಕೆ ಕೊಪ್ಪಳದ ರಾಘವೇಂದ್ರ ಮಠವನ್ನು ಸುಪರ್ದಿಗೆ ಕೊಟ್ಟ ದಾಖಲೆಗಳು ಇವೆ ಎಂದು ಹೇಳಿದರು. ಈ ಹಿನ್ನೆಲೆ ಗುರುವಾರ ಸಂಜೆಯವರೆಗೆ ನಡೆಯಬೇಕಿದ್ದ ಎಲ್ಲಾ ಕಾರ್ಯಕ್ರಮಗಳನ್ನು ಸುಬುಧೇಂದ್ರ ತೀರ್ಥರು ರದ್ದುಗೊಳಿಸಿದ್ದಾರೆ.
ಇಂದು ನಡೆಬೇಕಿದ್ದ ರಾಯರ ಮಠದಲ್ಲಿಯ ಕಾರ್ಯಕ್ರಮಗಳೆಲ್ಲವನ್ನು ರದ್ದುಗೊಳಿಸಿ, ಮುಂದಿನ ದಿನದಲ್ಲಿ ಮತ್ತೊಮ್ಮೆ ಬಂದು ಕಾರ್ಯಕ್ರಮ ಮಾಡುವೆ ಎಂದು ಮಂತ್ರಾಲಯದ ಶ್ರೀಗಳು ಮಠದ ಒಳಗಡೆ ಬರದೆ ಹೊರಗೆ ಇರುವ ಹನುಮನ ದರ್ಶನ ಪಡೆದು ಮರಳಿ ತಮ್ಮ ವಾಹನವನ್ನು ಏರಿ ಹೊರಗಡೆ ನಡೆದದರು.
-
Bda: ಬಿಡಿಎ ಮುಕ್ತ ಸಂವಾದದಿಂದ ಸೈನಿಕರ ಸಮಸ್ಯೆಗೆ ಪರಿಹಾರ: ಬೆಂಗಳೂರು ಆಸ್ತಿದಾರರಿಗೆ ಇಲ್ಲಿದೆ ಗುಡ್ನ್ಯೂಸ್ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ












Click it and Unblock the Notifications