ಕೊಪ್ಪಳ: ಸರ್ಕಾರಿ ಪ್ರೌಢಶಾಲೆಗೆ 1 ಲಕ್ಷ ರುಪಾಯಿ ದೇಣಿಗೆ ನೀಡಿದ ಪವರ್ ಸ್ಟಾರ್
ಕೊಪ್ಪಳ, ಅಕ್ಟೋಬರ್ 29: ಕನ್ನಡದ ಖ್ಯಾತ ಚಿತ್ರನಟ ಪುನೀತ್ ರಾಜ್ ಕುಮಾರ್ ಹಾಗೂ ಜೇಮ್ಸ್ ಚಿತ್ರತಂಡ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಮಲ್ಲಾಪುರ ಸರ್ಕಾರಿ ಶಾಲೆಗೆ 1 ಲಕ್ಷ ರುಪಾಯಿ ದೇಣಿಗೆ ನೀಡಿದ್ದಾರೆ.
ಈ ಕುರಿತು ಧನ್ಯವಾದ ತಿಳಿಸಿರುವ ಮಲ್ಲಾಪುರ ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರು, ""ಕನ್ನಡದ ವರನಟ ಡಾ.ರಾಜಕುಮಾರ್ ಅವರ ಸುಪುತ್ರರಾದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಹಾಗೂ ಜೇಮ್ಸ್ ಚಿತ್ರತಂಡವು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗಾಗಿ ನಮ್ಮ ಶಾಲೆಯ ಕಲಿಕಾ ವಾತಾವರಣವನ್ನು ಉತ್ತೇಜಿಸಲು ಹಾಗೂ ವಿದ್ಯಾರ್ಥಿಗಳಿಗೆ ಕಲಿಕಾ ಪ್ರೋತ್ಸಾಹವನ್ನು ನೀಡುವ ಉದೇಶದಿಂದ 1 ಲಕ್ಷ ರೂ.ಗಳನ್ನು ಪ್ರೋತ್ಸಾಹ ಧನವಾಗಿ ನೀಡಿರುತ್ತಾರೆ.
ಈ ಕಾರಣ ಶಾಲೆಯ ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಹಾಗೂ ಗ್ರಾಮದವರು ತಮಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತಿದ್ದೇವೆ. ತಮ್ಮ ಅಭಿನಯದ ಜೇಮ್ಸ್ ಚಿತ್ರತಂಡಕ್ಕೆ ಯಶಸ್ಸು ಸಿಗಲೆಂದು ಶುಭ ಕೋರುತ್ತೇವೆ'' ಎಂದು ಪತ್ರದ ಮೂಲಕ ತಿಳಿಸಿದ್ದಾರೆ.

ಈ ಹಿಂದೆ ಕೊಪ್ಪಳದಲ್ಲಿ ಜೇಮ್ಸ್ ಚಿತ್ರೀಕರಣ ನಡೆಯುತ್ತಿರುವುದನ್ನು ತಿಳಿದ ಪೊಲೀಸರು ಕೊರೊನಾ ಜಾಗೃತಿ ಮೂಡಿಸುವ ಕಾರ್ಯಕ್ರಮಕ್ಕೆ ಪುನೀತ್ ರಾಜಕುಮಾರ್ ಅವರನ್ನು ಆಹ್ವಾನಿಸಿದ್ದರು.
ಸಿನಿಮಾ ಶೂಟಿಂಗ್ ಮಧ್ಯೆ ಇದು ಕೂಡ ನನ್ನ ಕರ್ತವ್ಯ ಎಂದು ಅಷ್ಟೇ ಖುಷಿಯಿಂದ ಅಪ್ಪು ಕಾರ್ಯಕ್ರಮದಲ್ಲಿ ಹಾಜರಾಗಿ ಜನರಿಗೆ ಕೊರೊನಾ ಬಗ್ಗೆ ತಿಳಿ ಹೇಳಿದ್ದರು. ಕೊರೊನಾದಿಂದ ಸುರಕ್ಷಿತರಾಗಿರಿ, ಸ್ವಾಸ್ಥ್ಯ ಕಾಪಾಡಿಕೊಳ್ಳಿ, ಮಾಸ್ಕ್ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಎಂದು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದ್ದರು.
ಯುವರತ್ನ ಸಿನಿಮಾದಲ್ಲಿ ಬ್ಯುಸಿಯಾಗಿದ್ದ ನಟ ಪುನೀತ್ ರಾಜಕುಮಾರ್, ಕೊರೊನಾ ಲಾಕ್ ಡೌನ್ ವೇಳೆ ಬಿಡುವು ಪಡೆದಿದ್ದರು. ಯುವರತ್ನ ಸಿನಿಮಾದ ಶೂಟಿಂಗ್ ಬಹುತೇಕ ಮುಗಿದಿದೆ ಎನ್ನಲಾಗಿದ್ದು, ಹೀಗಾಗಿಯೇ ಜೇಮ್ಸ್ ಸಿನಿಮಾದ ಚಿತ್ರೀಕರಣದತ್ತ ಮುಖ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿತ್ತು.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications