ಕೊಪ್ಪಳ: ಆರ್ಸಿಬಿ ಫೈನಲ್ ಪಂದ್ಯದಲ್ಲಿ ಗೆದ್ದ ಹಿನ್ನೆಲೆ ಅಭಿಮಾನಿಗಳಿಂದ ಬಾಡೂಟ
ಕೊಪ್ಪಳ, ಜೂನ್, 7: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 17 ವರ್ಷದ ಬಳಿಕ 18ನೇ ಸೀಸನ್ನಲ್ಲಿ ಐಪಿಎಲ್ ಟ್ರೋಫಿ ಗೆದ್ದಿದೆ. ಈ ಹಿನ್ನೆಲೆ ಮಾರನೇ ದಿನವೇ ಬೆಂಗಳೂರಿನಲ್ಲಿ ವಿಜಯೋತ್ಸವನ್ನ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ 11 ಜನ ಮೃತಪಟ್ಟಿದ್ದು, ಇದು ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಈ ನಡುವೆಯೇ ಕೆಲ ಅಭಿಮಾನಿಗಳು ಆರ್ಸಿಬಿ ಕಪ್ ಮುಡಿಗೇರಿಸಿಕೊಂಡ ಖುಷಿಗೆ ಗುರುವಾರ ಇಡೀ ಊರಿಗೆ ಬಾಡೂಟ ಹಾಕಿಸಿದ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ.
ಇಂಡಿಯನ್ಸ್ ಪ್ರೀಪಿಯರ್ ಲೀಗ್ 2025 ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಆರ್ಸಿಬಿ ಗೆಲುವು ಸಾಧಿಸಿ ಮೊದಲ ಬಾರಿ ಟ್ರೋಫಿ ಗೆದ್ದುಕೊಂಡಿದೆ. ಇದೇ ಖಷಿಯಲ್ಲಿ ಬರೀ ರಾಜ್ಯ ಅಷ್ಟೇ ಅಲ್ಲದೆ, ಹೊರರಾಜ್ಯಗಳಲ್ಲೂ ಅಂದಿನ ರಾತ್ರಿ ಸಂಭ್ರಮಾಚರಣೆ ಜೋರಾಗಿಯೇ ನಡೆಯಿತು. ಅದರೆ, ಮಾರನೇ ದಿನ ಬೆಂಗಳೂರಿನಲ್ಲಿ ವಿಜಯೋತ್ಸವ ಹಮ್ಮಿಕೊಂಡ ವೇಳೆ ಕಾಲ್ತುಳಿತ ಸಂಭವಿಸಿ 11 ಮಂದಿ ಪ್ರಾಣ ಕಳೆದುಕೊಂಡಿದ್ದು, 40ಕ್ಕೂ ಹೆಚ್ಚು ಜನ ಗಾಯಗೊಂಡಿದ್ದರು. ಈ ದುರಂತ ಟ್ರೋಫಿ ಗೆದ್ದ ಸಂಭ್ರಾಮಾಚರಣೆಯನ್ನೇ ಕಿತ್ತುಕೊಂಡುಬಿಟ್ಟಿತು.

ಈ ಘಟನೆ ಇಡೀ ದೇಶವನ್ನೇ ಬೆಚ್ಚಿಬೀಳಿಸಿ ಮೌನವಾಗಿಸಿಬಿಟ್ಟಿತು. ಆದರೆ, ಇದಾದ ಮಾರನೇ ದಿನ ಅಂದರೆ ಗುರುವಾರ ಕೊಪ್ಪಳ ತಾಲೂಕಿನ ಬಂಡಿಹರ್ಲಾಪುರ ಯುವಕರು ಆರ್ಸಿಬಿ ಕಪ್ ಗೆದ್ದ ಖುಷಿಗೆ ಇಡೀ ಊರಿಗೆ ಬಾಡೂಟ ಹಾಕಿಸಿದ್ದಾರೆ. ಇದೇ ವೇಳೆ ಕಾಲ್ತುಳಿತದಲ್ಲಿ ಮೃತಪಟ್ಟ 11 ಜನರಿಗೂ ಶ್ರದ್ಧಾಂಜಲಿ ಕೂಡ ಸಲ್ಲಿಸಿದ್ದಾರೆ.
ಬೆಂಗಳೂರು ತಂಡ ಟ್ರೋಫಿ ಗೆದ್ದ ದಿನವೇ ಬಾಡೂಟ ಹಾಕಿಸಬೇಕು ಎಂದುಕೊಂಡಿದ್ದರು. ಆದರೆ ಅಂದು ತಡರಾತ್ರಿ ಆಗಿದ್ದರಿಂದ ಆಗಲಿಲ್ಲ. ಮರುದಿನಕ್ಕೆ ಈ ಯೋಜನೆಯನ್ನು ಮುಂದೂಡಿದ್ದರು. ಆದರೆ, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಿಂದ 11 ಜನರು ಮೃತಪಟ್ಟಿದ್ದರಿಂದ ಇದನ್ನು ಕೈಬಿಡಲಾಗಿತ್ತು. ಮಾರನೇ ದಿನ ಗುರುವಾರ ಬಾಡೂಟ ಹಾಕುವ ಜೊತೆಗೆ ದುರಂತದಲ್ಲಿ ಮೃತಪಟ್ಟವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಅಲ್ಲದೆ, ಘಟನೆಯಲ್ಲಿ ಗಾಯಗೊಂಡವರು ಶೀಘ್ರ ಗುಣಮುಖರಾಗಿ ಬರಲೆಂದು ದೇವರಲ್ಲಿ ಪ್ರಾರ್ಥನೆ ಮಾಡಿದ್ದಾರೆ.
ಆರ್ಸಿಬಿ ಫೈನಲ್ ಪ್ರವೇಶಿಸುತ್ತಿದ್ದಂತೆ ಗ್ರಾಮದ ಯುವಕರೆಲ್ಲರೂ ಈ ಬಾರಿ ಟ್ರೋಫಿ ಗೆದ್ದರೇ ಇಡೀ ಊರಿಗೆ ಬಾಡೂಟ ಹಾಕೋಣ ಎಂದು ಮಾತನಾಡಿದ್ದು, ಅದರಂತೆಯೇ ಫೈನಲ್ನಲ್ಲಿ ಗೆದ್ದಿದ್ದರಿಂದ ಎಲ್ಲರೂ ಸೇರಿ 2 ಕ್ವಿಂಟಲ್ ಚಿಕನ್ ಹಾಗೂ 2 ಕ್ವಿಂಟಲ್ ಪಲಾವ್ ಮಾಡಿ ಇಡೀ ಗ್ರಾಮದ ಜನರಿಗೆ ಬಾಡೂಟ ಹಾಕಿಸಿ ಗಮನ ಸೆಳೆದಿದ್ದಾರೆ.
-
ಐಪಿಎಲ್ನಲ್ಲಿ ಯಾರೂ ಕೊಳ್ಳದಿದ್ದರೂ ಅಯೋಧ್ಯೆಯಲ್ಲಿ ಅಬ್ಬರಿಸಿದ ಆರ್ಸಿಬಿ ಮಾಜಿ ಆಟಗಾರ; 195 ರನ್ ಚಚ್ಚಿದ ಸ್ವಸ್ತಿಕ್ ಚಿಕಾರ -
Nandini: ಆರ್ಸಿಬಿ ಜೊತೆ ರಾರಾಜಿಸಲಿದೆ ನಮ್ಮ ಹೆಮ್ಮೆಯ 'ನಂದಿನಿ': ಐಪಿಎಲ್-2026ರಲ್ಲಿ ಕನ್ನಡಿಗರಿಗೆ ಡಬಲ್ ಧಮಾಕಾ -
RCB Yash Dayal: ಐಪಿಎಲ್ 2026ರ ಸೀಸನ್ನಿಂದ ಸ್ಟಾರ್ ವೇಗಿ ಯಶ್ ದಯಾಳ್ ಔಟ್; ಆರ್ಸಿಬಿ ಅಧಿಕೃತ ಮಾಹಿತಿ -
IPL 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಟಿಕೆಟ್ ಮಾರಾಟ ಶುರು; ಇಲ್ಲಿವೆ ಬುಕಿಂಗ್ ಮಾಡುವ ವಿಧಾನಗಳು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications