ಕೊಪ್ಪಳ: ಆರ್ಸಿಬಿ ಫೈನಲ್ ಪಂದ್ಯದಲ್ಲಿ ಗೆದ್ದ ಹಿನ್ನೆಲೆ ಅಭಿಮಾನಿಗಳಿಂದ ಬಾಡೂಟ
ಕೊಪ್ಪಳ, ಜೂನ್, 7: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 17 ವರ್ಷದ ಬಳಿಕ 18ನೇ ಸೀಸನ್ನಲ್ಲಿ ಐಪಿಎಲ್ ಟ್ರೋಫಿ ಗೆದ್ದಿದೆ. ಈ ಹಿನ್ನೆಲೆ ಮಾರನೇ ದಿನವೇ ಬೆಂಗಳೂರಿನಲ್ಲಿ ವಿಜಯೋತ್ಸವನ್ನ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ 11 ಜನ ಮೃತಪಟ್ಟಿದ್ದು, ಇದು ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಈ ನಡುವೆಯೇ ಕೆಲ ಅಭಿಮಾನಿಗಳು ಆರ್ಸಿಬಿ ಕಪ್ ಮುಡಿಗೇರಿಸಿಕೊಂಡ ಖುಷಿಗೆ ಗುರುವಾರ ಇಡೀ ಊರಿಗೆ ಬಾಡೂಟ ಹಾಕಿಸಿದ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ.
ಇಂಡಿಯನ್ಸ್ ಪ್ರೀಪಿಯರ್ ಲೀಗ್ 2025 ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಆರ್ಸಿಬಿ ಗೆಲುವು ಸಾಧಿಸಿ ಮೊದಲ ಬಾರಿ ಟ್ರೋಫಿ ಗೆದ್ದುಕೊಂಡಿದೆ. ಇದೇ ಖಷಿಯಲ್ಲಿ ಬರೀ ರಾಜ್ಯ ಅಷ್ಟೇ ಅಲ್ಲದೆ, ಹೊರರಾಜ್ಯಗಳಲ್ಲೂ ಅಂದಿನ ರಾತ್ರಿ ಸಂಭ್ರಮಾಚರಣೆ ಜೋರಾಗಿಯೇ ನಡೆಯಿತು. ಅದರೆ, ಮಾರನೇ ದಿನ ಬೆಂಗಳೂರಿನಲ್ಲಿ ವಿಜಯೋತ್ಸವ ಹಮ್ಮಿಕೊಂಡ ವೇಳೆ ಕಾಲ್ತುಳಿತ ಸಂಭವಿಸಿ 11 ಮಂದಿ ಪ್ರಾಣ ಕಳೆದುಕೊಂಡಿದ್ದು, 40ಕ್ಕೂ ಹೆಚ್ಚು ಜನ ಗಾಯಗೊಂಡಿದ್ದರು. ಈ ದುರಂತ ಟ್ರೋಫಿ ಗೆದ್ದ ಸಂಭ್ರಾಮಾಚರಣೆಯನ್ನೇ ಕಿತ್ತುಕೊಂಡುಬಿಟ್ಟಿತು.

ಈ ಘಟನೆ ಇಡೀ ದೇಶವನ್ನೇ ಬೆಚ್ಚಿಬೀಳಿಸಿ ಮೌನವಾಗಿಸಿಬಿಟ್ಟಿತು. ಆದರೆ, ಇದಾದ ಮಾರನೇ ದಿನ ಅಂದರೆ ಗುರುವಾರ ಕೊಪ್ಪಳ ತಾಲೂಕಿನ ಬಂಡಿಹರ್ಲಾಪುರ ಯುವಕರು ಆರ್ಸಿಬಿ ಕಪ್ ಗೆದ್ದ ಖುಷಿಗೆ ಇಡೀ ಊರಿಗೆ ಬಾಡೂಟ ಹಾಕಿಸಿದ್ದಾರೆ. ಇದೇ ವೇಳೆ ಕಾಲ್ತುಳಿತದಲ್ಲಿ ಮೃತಪಟ್ಟ 11 ಜನರಿಗೂ ಶ್ರದ್ಧಾಂಜಲಿ ಕೂಡ ಸಲ್ಲಿಸಿದ್ದಾರೆ.
ಬೆಂಗಳೂರು ತಂಡ ಟ್ರೋಫಿ ಗೆದ್ದ ದಿನವೇ ಬಾಡೂಟ ಹಾಕಿಸಬೇಕು ಎಂದುಕೊಂಡಿದ್ದರು. ಆದರೆ ಅಂದು ತಡರಾತ್ರಿ ಆಗಿದ್ದರಿಂದ ಆಗಲಿಲ್ಲ. ಮರುದಿನಕ್ಕೆ ಈ ಯೋಜನೆಯನ್ನು ಮುಂದೂಡಿದ್ದರು. ಆದರೆ, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಿಂದ 11 ಜನರು ಮೃತಪಟ್ಟಿದ್ದರಿಂದ ಇದನ್ನು ಕೈಬಿಡಲಾಗಿತ್ತು. ಮಾರನೇ ದಿನ ಗುರುವಾರ ಬಾಡೂಟ ಹಾಕುವ ಜೊತೆಗೆ ದುರಂತದಲ್ಲಿ ಮೃತಪಟ್ಟವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಅಲ್ಲದೆ, ಘಟನೆಯಲ್ಲಿ ಗಾಯಗೊಂಡವರು ಶೀಘ್ರ ಗುಣಮುಖರಾಗಿ ಬರಲೆಂದು ದೇವರಲ್ಲಿ ಪ್ರಾರ್ಥನೆ ಮಾಡಿದ್ದಾರೆ.
ಆರ್ಸಿಬಿ ಫೈನಲ್ ಪ್ರವೇಶಿಸುತ್ತಿದ್ದಂತೆ ಗ್ರಾಮದ ಯುವಕರೆಲ್ಲರೂ ಈ ಬಾರಿ ಟ್ರೋಫಿ ಗೆದ್ದರೇ ಇಡೀ ಊರಿಗೆ ಬಾಡೂಟ ಹಾಕೋಣ ಎಂದು ಮಾತನಾಡಿದ್ದು, ಅದರಂತೆಯೇ ಫೈನಲ್ನಲ್ಲಿ ಗೆದ್ದಿದ್ದರಿಂದ ಎಲ್ಲರೂ ಸೇರಿ 2 ಕ್ವಿಂಟಲ್ ಚಿಕನ್ ಹಾಗೂ 2 ಕ್ವಿಂಟಲ್ ಪಲಾವ್ ಮಾಡಿ ಇಡೀ ಗ್ರಾಮದ ಜನರಿಗೆ ಬಾಡೂಟ ಹಾಕಿಸಿ ಗಮನ ಸೆಳೆದಿದ್ದಾರೆ.
-
ಬೆಂಗಳೂರಲ್ಲಿ RCB ಪಂದ್ಯ: ಏ.15ರಂದು ಸ್ಟೇಡಿಯಂ ಸುತ್ತ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ -
RCB Vs LSG: ಬೆಂಗಳೂರಿನಲ್ಲಿ ಆರ್ಸಿಬಿ-ಎಲ್ಎಸ್ಜಿ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
RCB Playing 11 Prediction: ಎಲ್ಎಸ್ಜಿ ವಿರುದ್ಧ ಆರ್ಸಿಬಿ ಪ್ಲೇಯಿಂಗ್ 11 ಭವಿಷ್ಯ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು












Click it and Unblock the Notifications