ಜಾತ್ಯಾತೀತರು ಅಪ್ಪ- ಅಮ್ಮನ ರಕ್ತದ ಗುರುತಿಲ್ಲದವರು: ಅನಂತಕುಮಾರ್ ಹೆಗಡೆ
ಕೊಪ್ಪಳ, ಡಿಸೆಂಬರ್ 24: "ನಾನೊಬ್ಬ ಮುಸ್ಲಿಂ, ಕ್ರೈಸ್ತ, ಲಿಂಗಾಯತ ಸೇರಿ ಯಾವುದೇ ಜಾತಿ ಹೆಸರು ಹೇಳಲಿ ನನ್ನ ತಕರಾರಿಲ್ಲ. ಆದರೆ ಜಾತ್ಯಾತೀತರಂತೆ ಕರೆದುಕೊಳ್ಳುವವರು ಅಪ್ಪ- ಅಮ್ಮನ ರಕ್ತದ ಗುರುತು ಇಲ್ಲದವರು. ಜಾತ್ಯಾತೀತರು ಇತಿಹಾಸ ಗೊತ್ತಿಲ್ಲದ ಮೂರ್ಖರು," ಅಂತ ಕೇಂದ್ರ ಕೌಶಲಾಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗಡೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಕುಕನೂರಿನಲ್ಲಿ ಬ್ರಾಹ್ಮಣ ಮಹಾಸಭಾದ ಯುವ ಸಮಾವೇಶ ಉದ್ದೇಶಿಸಿ ಮಾತನಾಡಿದ ಅನಂತ್ ಕುಮಾರ್ ಹೆಗಡೆ ಈ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

"ಜಾತಿ ಹೆಸರು ಹೇಳಿದರೆ ನನಗೆ ಖುಷಿ ಅನ್ಸುತ್ತೆ. ಆದರೆ ಜ್ಯಾತ್ಯಾತೀತರು ಅಂತ ಕರಕೊಂಡ್ರೆ ಅಪ್ಪ - ಅಮ್ಮನ ರಕ್ತ ಗೊತ್ತಿಲ್ಲ ಅಂತ ಅನ್ಸುತ್ತೆ. ಆದ್ರೂ ಈ ನನ್ನ ಮಕ್ಕಳು ವಿಚಾರವಾದಿಗಳೆಂದು ಕರೆದುಕೊಳ್ಳುತ್ತಾರೆ. ಅವರ ರಕ್ತದ ಬಗ್ಗೆ ನನಗೆ ಅನುಮಾನ ಬರುತ್ತೆ," ಎಂದು ಅನಂತ್ ಕುಮಾರ್ ಹೆಗಡೆ ಭಾಷಣ ಬಿಗಿದಿದ್ದಾರೆ.
"ಇಸ್ಲಾಂನ ಖಡ್ಗ ಜಗತ್ತು ಗೆದ್ದು ಭಾರತಕ್ಕೆ ಬಂದಾಗ ದಿಗ್ಭ್ರಮೆಯಾಗಿ ಗಂಗೆಯಲ್ಲಿ ತೊಳೆದು ಹೋಗಿತ್ತು. ಸುಮಾರು 800 ವರ್ಷಗಳ ಆಕ್ರಮಣದಿಂದ ಇಡೀ ಏಷ್ಯಾ ಆಕ್ರಮಿಸಿದರೂ ಇಸ್ಲಾಂ ಪುಟಗೋಸಿಗಳಿಗೆ ಇನ್ನು ತಲೆಯೆತ್ತಿ ನಿಲ್ಲಲಿಕ್ಕೆ ಆಗಲಿಲ್ಲ," ಎಂದು ಅವರು ವಿವಾದಾತ್ಮಕ ಭಾಷಣ ಮಾಡಿದ್ದಾರೆ.
"ಹಿಂದೂ ಒಂದು ಸಮಾಜದ ಸ್ವತ್ತಲ್ಲ. ಕಾಲ, ಕಾಲಕ್ಕೆ ಸಂವಿಧಾನ ಬದಲಾಗಬೇಕು; ಬದಲಾಗುತ್ತದೆ. ಸಂವಿಧಾನ ಬದಲಾಯಿಸುವುದಕ್ಕೆ ನಾವು ಬಂದಿರುವುದು," ಎಂದು ತಮ್ಮ ಎಂದಿನ ದಾಟಿಯ ಹೇಳಿಕೆಯನ್ನು ಅನಂತ ಕುಮಾರ್ ಹೆಗಡೆ ನೀಡಿದ್ದಾರೆ.
-
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications