ಜಾತ್ಯಾತೀತರು ಅಪ್ಪ- ಅಮ್ಮನ ರಕ್ತದ ಗುರುತಿಲ್ಲದವರು: ಅನಂತಕುಮಾರ್ ಹೆಗಡೆ
ಕೊಪ್ಪಳ, ಡಿಸೆಂಬರ್ 24: "ನಾನೊಬ್ಬ ಮುಸ್ಲಿಂ, ಕ್ರೈಸ್ತ, ಲಿಂಗಾಯತ ಸೇರಿ ಯಾವುದೇ ಜಾತಿ ಹೆಸರು ಹೇಳಲಿ ನನ್ನ ತಕರಾರಿಲ್ಲ. ಆದರೆ ಜಾತ್ಯಾತೀತರಂತೆ ಕರೆದುಕೊಳ್ಳುವವರು ಅಪ್ಪ- ಅಮ್ಮನ ರಕ್ತದ ಗುರುತು ಇಲ್ಲದವರು. ಜಾತ್ಯಾತೀತರು ಇತಿಹಾಸ ಗೊತ್ತಿಲ್ಲದ ಮೂರ್ಖರು," ಅಂತ ಕೇಂದ್ರ ಕೌಶಲಾಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗಡೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಕುಕನೂರಿನಲ್ಲಿ ಬ್ರಾಹ್ಮಣ ಮಹಾಸಭಾದ ಯುವ ಸಮಾವೇಶ ಉದ್ದೇಶಿಸಿ ಮಾತನಾಡಿದ ಅನಂತ್ ಕುಮಾರ್ ಹೆಗಡೆ ಈ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

"ಜಾತಿ ಹೆಸರು ಹೇಳಿದರೆ ನನಗೆ ಖುಷಿ ಅನ್ಸುತ್ತೆ. ಆದರೆ ಜ್ಯಾತ್ಯಾತೀತರು ಅಂತ ಕರಕೊಂಡ್ರೆ ಅಪ್ಪ - ಅಮ್ಮನ ರಕ್ತ ಗೊತ್ತಿಲ್ಲ ಅಂತ ಅನ್ಸುತ್ತೆ. ಆದ್ರೂ ಈ ನನ್ನ ಮಕ್ಕಳು ವಿಚಾರವಾದಿಗಳೆಂದು ಕರೆದುಕೊಳ್ಳುತ್ತಾರೆ. ಅವರ ರಕ್ತದ ಬಗ್ಗೆ ನನಗೆ ಅನುಮಾನ ಬರುತ್ತೆ," ಎಂದು ಅನಂತ್ ಕುಮಾರ್ ಹೆಗಡೆ ಭಾಷಣ ಬಿಗಿದಿದ್ದಾರೆ.
"ಇಸ್ಲಾಂನ ಖಡ್ಗ ಜಗತ್ತು ಗೆದ್ದು ಭಾರತಕ್ಕೆ ಬಂದಾಗ ದಿಗ್ಭ್ರಮೆಯಾಗಿ ಗಂಗೆಯಲ್ಲಿ ತೊಳೆದು ಹೋಗಿತ್ತು. ಸುಮಾರು 800 ವರ್ಷಗಳ ಆಕ್ರಮಣದಿಂದ ಇಡೀ ಏಷ್ಯಾ ಆಕ್ರಮಿಸಿದರೂ ಇಸ್ಲಾಂ ಪುಟಗೋಸಿಗಳಿಗೆ ಇನ್ನು ತಲೆಯೆತ್ತಿ ನಿಲ್ಲಲಿಕ್ಕೆ ಆಗಲಿಲ್ಲ," ಎಂದು ಅವರು ವಿವಾದಾತ್ಮಕ ಭಾಷಣ ಮಾಡಿದ್ದಾರೆ.
"ಹಿಂದೂ ಒಂದು ಸಮಾಜದ ಸ್ವತ್ತಲ್ಲ. ಕಾಲ, ಕಾಲಕ್ಕೆ ಸಂವಿಧಾನ ಬದಲಾಗಬೇಕು; ಬದಲಾಗುತ್ತದೆ. ಸಂವಿಧಾನ ಬದಲಾಯಿಸುವುದಕ್ಕೆ ನಾವು ಬಂದಿರುವುದು," ಎಂದು ತಮ್ಮ ಎಂದಿನ ದಾಟಿಯ ಹೇಳಿಕೆಯನ್ನು ಅನಂತ ಕುಮಾರ್ ಹೆಗಡೆ ನೀಡಿದ್ದಾರೆ.
-
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ












Click it and Unblock the Notifications