ಕೊಪ್ಪಳದಲ್ಲಿ 50ಕ್ಕೂ ಹೆಚ್ಚು ಕೋವಿಡ್ ಸೋಂಕಿತ ಗರ್ಭಿಣಿಯರಿಗೆ ಯಶಸ್ವಿ ಹೆರಿಗೆ
ಕೊಪ್ಪಳ, ಮೇ 25: ರಾಜ್ಯ ಮತ್ತು ದೇಶದಲ್ಲಿ ಕಳೆದ ಒಂದೂವರೆ ವರ್ಷದಿಂದ ಕೊರೊನಾ ಮಹಾಮಾರಿ ವಕ್ಕರಿಸಿಕೊಂಡಿದ್ದು, ಸಾಮಾನ್ಯ ಹಾಗೂ ಮಧ್ಯಮ ವರ್ಗದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಅದರಲ್ಲಿಯೂ ಕೊರೊನಾ ಸಂಕಷ್ಟದಲ್ಲಿ ಅತಿ ಹೆಚ್ಚು ನೋವು ಅನುಭವಿಸಿದ್ದು ಗರ್ಭಿಣಿಯರು. ಆಸ್ಪತ್ರೆಗಳಲ್ಲಿ ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೆ, ವೈದ್ಯರಿಲ್ಲದೆ ಅನೇಕ ಗರ್ಭಿಣಿಯರು ಸಾವನ್ನಪ್ಪಿರುವುದನ್ನು ನಾವು ನೋಡಿದ್ದೇವೆ.
ಇಂತಹ ಸಂದರ್ಭದಲ್ಲಿ ಕೊರೊನಾ ಸೋಂಕಿತ ಗರ್ಭಿಣಿಯರಿಗೆ ಹೆರಿಗೆ ಮಾಡಿಸುವುದೇ ದೊಡ್ಡ ಸಾಹಸದ ಸರಿ. ಆದರೆ ಕೊಪ್ಪಳ ಜಿಲ್ಲೆಯಲ್ಲಿ 50ಕ್ಕೂ ಹೆಚ್ಚು ಕೊರೊನಾ ಸೋಂಕಿತ ಗರ್ಭಿಣಿಯರಿಗೆ ಯಶಸ್ವಿಯಾಗಿ ಹೆರಿಗೆ ಮಾಡಲಾಗಿರುವುದು ಗಮನಾರ್ಹ ಅಂಶವಾಗಿದೆ.

50ಕ್ಕೂ ಹೆಚ್ಚು ಕೊರೊನಾ ಸೋಂಕಿತ ಗರ್ಭಿಣಿಯರಿಗೆ ಯಶಸ್ವಿಯಾಗಿ ಹೆರಿಗೆ ಮಾಡಲಾಗಿದ್ದು, ನವಜಾತ ಶಿಶುಗಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿಲ್ಲ ಎಂದು ಕೊಪ್ಪಳ ಡಿಎಚ್ಒ ಟಿ.ಲಿಂಗರಾಜ್ ಹೇಳಿದ್ದಾರೆ.
ಕೊಪ್ಪಳ ಜಿಲ್ಲೆಯಲ್ಲಿ ಕೊರೊನಾ ವೈರಸ್ ೨ನೇ ಅಲೆಯಲ್ಲಿ 100ಕ್ಕೂ ಹೆಚ್ಚು ಗರ್ಭಿಣಿಯರಿಗೆ ಪಾಸಿಟಿವ್ ಆಗಿತ್ತು. ಇದರಲ್ಲಿ ಕೊಪ್ಪಳ ತಾಲ್ಲೂಕಿನಲ್ಲಿ 33, ಯಲಬುರ್ಗಾ ತಾಲ್ಲೂಕಿನಲ್ಲಿ 45, ಕುಷ್ಟಗಿ ತಾಲ್ಲೂಕಿನಲ್ಲಿ 12 ಹಾಗೂ ಗಂಗಾವತಿ ತಾಲ್ಲೂಕಿನಲ್ಲಿ 32 ಗರ್ಭಿಣಿಯರಿಗೆ ಕೋವಿಡ್ ಸೋಂಕು ಪತ್ತೆಯಾಗಿತ್ತು. ಇದರಲ್ಲಿ 80ಕ್ಕೂ ಹೆಚ್ಚು ಜನ ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದರು.
ಇದರಲ್ಲಿ 54 ಮಹಿಳೆಯರ ಹೆರಿಗೆಯನ್ನು ಯಶಸ್ವಿಯಾಗಿ ಮಾಡಲಾಗಿದ್ದು, ಈ ಪೈಕಿ 26 ಜನರಿಗೆ ನಾರ್ಮಲ್ ಡೆಲಿವರಿ, 28 ಸಿಜರಿನ್ ಆಗಿವೆ. ಇದುವರೆಗೂ ಯಾವುದೇ ಸಾವು ಸಂಭವಿಸಿಲ್ಲ. ಇದು ಸಂತಸದ ವಿಷಯ ಎಂದು ಹೆರಿಗೆ ವಿಭಾಗದ ಮುಖ್ಯಸ್ಥರಿಗೆ ಡಿಎಚ್ಒ ಧನ್ಯವಾದ ಸಲ್ಲಿಸಿದ್ದಾರೆ.
ಹೆರಿಗೆಯಾದ ಮಕ್ಕಳಲ್ಲಿ ಕೊರೊನಾ ಸೋಂಕಿಲ್ಲ
Recommended Video
ಸದ್ಯ 54 ಮಹಿಳೆಯರ ಹೆರಿಗೆಯನ್ನು ಯಶಸ್ವಿಯಾಗಿ ಮಾಡಲಾಗಿದ್ದು, ಹೆರಿಗೆಯಾದ ಮಕ್ಕಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿಲ್ಲ. ಆದರೆ ಬೇರೆ ಬೇರೆ ಜಿಲ್ಲೆಯಲ್ಲಿ ಹೆರಿಗೆಯಾದ ಬಳಿಕ ಐದು ಜನರಿಗೆ ಪಾಸಿಟಿವ್ ಆಗಿದೆ. ಅವರಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಮಕ್ಕಳಿಗೆ ವಿಶೇಷ ಶಿಶು ತೀವ್ರ ಘಟಕದಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ. ಅವರಲ್ಲೂ ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದ ಕೊಪ್ಪಳ ಡಿಎಚ್ಒ ಟಿ.ಲಿಂಗರಾಜ್ ತಿಳಿಸಿದ್ದಾರೆ.
-
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ












Click it and Unblock the Notifications