ಅಂಜನಾದ್ರಿ ಬೆಟ್ಟದಲ್ಲಿ ಹನುಮ ಮಾಲೆ ವಿಸರ್ಜನೆ: ರಾಜಕೀಯ ಗಣ್ಯರು ಸೇರಿ ಸಾವಿರಾರು ಭಕ್ತರು ಭಾಗಿ
ಕೊಪ್ಪಳ, ಡಿಸೆಂಬರ್ 6: ಇತಿಹಾಸ ಪ್ರಸಿದ್ಧ ಅಂಜನಾದ್ರಿ ಬೆಟ್ಟದಲ್ಲಿ ಸೋಮವಾರ ಹನುಮ ವ್ರತ ಅದ್ಧೂರಿಯಾಗಿ ಜರುಗಿತು. ಹನುಮಂತನ ಜನ್ಮಸ್ಥಳ ಅಂಜನಾದ್ರಿ ಬೆಟ್ಟಕ್ಕೆ ಸಾಗರೋಪಾದಿಯಲ್ಲಿ ಭಕ್ತರ ದಂಡು ಹರಿದು ಬಂದಿದ್ದು, ಹನುಮ ಮಾಲೆ ವಿಸರ್ಜನೆ ಮಾಡಿದರು.
ಸಾವಿರಾರು ಭಕ್ತರು ಜೈ ಶ್ರೀರಾಮ್ ಘೋಷಣೆ ಕೂಗುತ್ತಾ ಹನುಮಾ ಚಾಲೀಸಾ ಜಪಿಸುತ್ತಾ ಅಂಜನಾದ್ರಿ ಬೆಟ್ಟ ಏರಿ, ಹನುಮ ಮಾಲೆ ವಿಸರ್ಜಿಸಿ, ಪೂಜೆ ಸಲ್ಲಿಸಿದ್ದಾರೆ.
ಬೆಳಗಾವಿ, ಹುಬ್ಬಳ್ಳಿ, ಗದಗ, ಹಾವೇರಿ ಬಾಗಲಕೋಟ, ಬಳ್ಳಾರಿ ಸೇರಿದಂತೆ ವಿವಿಧ ಜಿಲ್ಲೆಯಿಂದ ಸಾವಿರಾರು ಹನುಮ ಭಕ್ತರು ಅಂಜನಾದ್ರಿ ಬೆಟ್ಟಕ್ಕೆ ಸಾಗರೋಪಾದಿಯಲ್ಲಿ ಹರಿದು ಬಂದರು. ಸೋಮವಾರ ಮಧ್ಯರಾತ್ರಿ 1 ಗಂಟೆಯಿಂದಲೇ ಮಾಲಾಧಾರಿಗಳು ಬೆಟ್ಟದ ಕಡೆ ಹೆಜ್ಜೆ ಹಾಕಿದರು. ಮಾಲಾಧಾರಿಗಳು ಪಾದಯಾತ್ರೆ ಮೂಲಕ ಅಂಜನಾದ್ರಿಗೆ ಬಂದು ಪುನೀತರಾದರು.

ಮಾಲೆ ವಿಸರ್ಜನೆ ಕಾರ್ಯಕ್ರಮದ ಭಾಗವಾಗಿ ಅಂಜನಾದ್ರಿ ಬೆಟ್ಟದ ಮೇಲೆ ಬೆಳಗ್ಗೆಯಿಂದಲೇ ಹೋಮ- ಹವನ ನಡೆದವು. ಬೆಟ್ಟದ ಮುಂದಿನ 575 ಮೆಟ್ಟಲು ಏರಿ ಬಂದ ಭಕ್ತರು ಹನುಮಂತನ ದರ್ಶನ ಪಡೆದು, ಮಾಲೆ ವಿಸರ್ಜಿಸಿದರು. ಇನ್ನು ಇದೇ ವೇಳೆ ಹನುಮ ಮಾಲಾಧಾರಿಗಳ ಜೊತೆ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕೂಡ ಆಗಮಿಸಿದ್ದರು.
ಕೊಪ್ಪಳ ಮಾರ್ಗವಾಗಿ ಅಂಜನಾದ್ರಿಗೆ ಬಂದ ಮಾಲಾಧಾರಿಗಳು ನೇರವಾಗಿ ಬೆಟ್ಟ ಏರಿದರು. ಆದರೆ ಗಂಗಾವತಿ ಭಾಗದಿಂದ ಅಂಜನಾದ್ರಿಗೆ ಬರುವ ಬಾಗಲಕೋಟೆ, ರಾಯಚೂರು, ಯಾದಗಿರಿ, ಕಲಬುರಗಿ ಸೇರಿ ವಿವಿಧ ಜಿಲ್ಲೆಯ ಭಕ್ತರು ಗಂಗಾವತಿ ನಗರದಲ್ಲಿ ಸಂಕೀರ್ತನೆ ಯಾತ್ರೆ ಮೂಲಕ ನಗರ ದಾಟಿ, ನಂತರ ವಾಹನಗಳ ಮೂಲಕ ಬೆಟ್ಟಕ್ಕೆ ಆಗಮಿಸಿದರು.
ಗಂಗಾವತಿ ನಗರದಲ್ಲಿ ನಡೆದ ಹನುಮ ಮೂಲಾಧಾರಿಗಳ ಸಂಕೀರ್ತನಾ ಯಾತ್ರೆಯಲ್ಲಿ ಶಾಸಕ ಪರಣ್ಣ ಮುನವಳ್ಳಿ, ಕನಕಗಿರಿ ಶಾಸಕ ಬಸವರಾಜ್ ದಡೆಸೂಗೂರು, ಸಂಸದ ಸಂಗಣ್ಣ ಕರಡಿ, ಮಾಜಿ ವಿಧಾನ ಪರಿಷತ್ ಸದಸ್ಯ ಎಚ್.ಆರ್.ಶ್ರೀನಾಥ್, ಸೇರಿ ವಿವಿಧ ಗಣ್ಯರು ಭಾಗಿ ಆಗಿದ್ದರು.

ಇನ್ನು ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಸೋಮವಾರ ಬೆಳಗ್ಗೆ ಪಂಪಾ ಸರೋವರದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಹನುಮ ಮಾಲೆ ಧರಿಸಿ, ಸಂಕೀರ್ತನಾ ಯಾತ್ರೆಯಲ್ಲಿ ಭಾಗಿಯಾಗಿದ್ದು ವಿಶೇಷವಾಗಿತ್ತು. ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಧಿಡೀರ್ ಪ್ರವೇಶ ಗಂಗಾವತಿ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications