ಅಂಜನಾದ್ರಿ ಬೆಟ್ಟದಲ್ಲಿ ಹನುಮ ಮಾಲೆ ವಿಸರ್ಜನೆ: ರಾಜಕೀಯ ಗಣ್ಯರು ಸೇರಿ ಸಾವಿರಾರು ಭಕ್ತರು ಭಾಗಿ
ಕೊಪ್ಪಳ, ಡಿಸೆಂಬರ್ 6: ಇತಿಹಾಸ ಪ್ರಸಿದ್ಧ ಅಂಜನಾದ್ರಿ ಬೆಟ್ಟದಲ್ಲಿ ಸೋಮವಾರ ಹನುಮ ವ್ರತ ಅದ್ಧೂರಿಯಾಗಿ ಜರುಗಿತು. ಹನುಮಂತನ ಜನ್ಮಸ್ಥಳ ಅಂಜನಾದ್ರಿ ಬೆಟ್ಟಕ್ಕೆ ಸಾಗರೋಪಾದಿಯಲ್ಲಿ ಭಕ್ತರ ದಂಡು ಹರಿದು ಬಂದಿದ್ದು, ಹನುಮ ಮಾಲೆ ವಿಸರ್ಜನೆ ಮಾಡಿದರು.
ಸಾವಿರಾರು ಭಕ್ತರು ಜೈ ಶ್ರೀರಾಮ್ ಘೋಷಣೆ ಕೂಗುತ್ತಾ ಹನುಮಾ ಚಾಲೀಸಾ ಜಪಿಸುತ್ತಾ ಅಂಜನಾದ್ರಿ ಬೆಟ್ಟ ಏರಿ, ಹನುಮ ಮಾಲೆ ವಿಸರ್ಜಿಸಿ, ಪೂಜೆ ಸಲ್ಲಿಸಿದ್ದಾರೆ.
ಬೆಳಗಾವಿ, ಹುಬ್ಬಳ್ಳಿ, ಗದಗ, ಹಾವೇರಿ ಬಾಗಲಕೋಟ, ಬಳ್ಳಾರಿ ಸೇರಿದಂತೆ ವಿವಿಧ ಜಿಲ್ಲೆಯಿಂದ ಸಾವಿರಾರು ಹನುಮ ಭಕ್ತರು ಅಂಜನಾದ್ರಿ ಬೆಟ್ಟಕ್ಕೆ ಸಾಗರೋಪಾದಿಯಲ್ಲಿ ಹರಿದು ಬಂದರು. ಸೋಮವಾರ ಮಧ್ಯರಾತ್ರಿ 1 ಗಂಟೆಯಿಂದಲೇ ಮಾಲಾಧಾರಿಗಳು ಬೆಟ್ಟದ ಕಡೆ ಹೆಜ್ಜೆ ಹಾಕಿದರು. ಮಾಲಾಧಾರಿಗಳು ಪಾದಯಾತ್ರೆ ಮೂಲಕ ಅಂಜನಾದ್ರಿಗೆ ಬಂದು ಪುನೀತರಾದರು.

ಮಾಲೆ ವಿಸರ್ಜನೆ ಕಾರ್ಯಕ್ರಮದ ಭಾಗವಾಗಿ ಅಂಜನಾದ್ರಿ ಬೆಟ್ಟದ ಮೇಲೆ ಬೆಳಗ್ಗೆಯಿಂದಲೇ ಹೋಮ- ಹವನ ನಡೆದವು. ಬೆಟ್ಟದ ಮುಂದಿನ 575 ಮೆಟ್ಟಲು ಏರಿ ಬಂದ ಭಕ್ತರು ಹನುಮಂತನ ದರ್ಶನ ಪಡೆದು, ಮಾಲೆ ವಿಸರ್ಜಿಸಿದರು. ಇನ್ನು ಇದೇ ವೇಳೆ ಹನುಮ ಮಾಲಾಧಾರಿಗಳ ಜೊತೆ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕೂಡ ಆಗಮಿಸಿದ್ದರು.
ಕೊಪ್ಪಳ ಮಾರ್ಗವಾಗಿ ಅಂಜನಾದ್ರಿಗೆ ಬಂದ ಮಾಲಾಧಾರಿಗಳು ನೇರವಾಗಿ ಬೆಟ್ಟ ಏರಿದರು. ಆದರೆ ಗಂಗಾವತಿ ಭಾಗದಿಂದ ಅಂಜನಾದ್ರಿಗೆ ಬರುವ ಬಾಗಲಕೋಟೆ, ರಾಯಚೂರು, ಯಾದಗಿರಿ, ಕಲಬುರಗಿ ಸೇರಿ ವಿವಿಧ ಜಿಲ್ಲೆಯ ಭಕ್ತರು ಗಂಗಾವತಿ ನಗರದಲ್ಲಿ ಸಂಕೀರ್ತನೆ ಯಾತ್ರೆ ಮೂಲಕ ನಗರ ದಾಟಿ, ನಂತರ ವಾಹನಗಳ ಮೂಲಕ ಬೆಟ್ಟಕ್ಕೆ ಆಗಮಿಸಿದರು.
ಗಂಗಾವತಿ ನಗರದಲ್ಲಿ ನಡೆದ ಹನುಮ ಮೂಲಾಧಾರಿಗಳ ಸಂಕೀರ್ತನಾ ಯಾತ್ರೆಯಲ್ಲಿ ಶಾಸಕ ಪರಣ್ಣ ಮುನವಳ್ಳಿ, ಕನಕಗಿರಿ ಶಾಸಕ ಬಸವರಾಜ್ ದಡೆಸೂಗೂರು, ಸಂಸದ ಸಂಗಣ್ಣ ಕರಡಿ, ಮಾಜಿ ವಿಧಾನ ಪರಿಷತ್ ಸದಸ್ಯ ಎಚ್.ಆರ್.ಶ್ರೀನಾಥ್, ಸೇರಿ ವಿವಿಧ ಗಣ್ಯರು ಭಾಗಿ ಆಗಿದ್ದರು.

ಇನ್ನು ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಸೋಮವಾರ ಬೆಳಗ್ಗೆ ಪಂಪಾ ಸರೋವರದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಹನುಮ ಮಾಲೆ ಧರಿಸಿ, ಸಂಕೀರ್ತನಾ ಯಾತ್ರೆಯಲ್ಲಿ ಭಾಗಿಯಾಗಿದ್ದು ವಿಶೇಷವಾಗಿತ್ತು. ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಧಿಡೀರ್ ಪ್ರವೇಶ ಗಂಗಾವತಿ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications