ಅಂಜನಾದ್ರಿ ಬೆಟ್ಟಕ್ಕೆ ಯೋಗೀಶ್ವರ್ ಭೇಟಿ; ಕೋವಿಡ್ ನಿಯಮ ಉಲ್ಲಂಘನೆ?
ಕೊಪ್ಪಳ, ಜೂನ್ 30; ಕರ್ನಾಟಕದ ಪ್ರವಾಸೋದ್ಯಮ ಸಚಿವ ಸಿ. ಪಿ. ಯೋಗೀಶ್ವರ್ ಅಂಜನಾದ್ರಿ ಬೆಟ್ಟಕ್ಕೆ ಭೇಟಿ ನೀಡಿದರು. ಕೋವಿಡ್ ಸಂದರ್ಭದಲ್ಲಿ ದೇವಾಲಯಕ್ಕೆ ಭೇಟಿ ನೀಡುವ ಮೂಲಕ ಅವರು ಮಾರ್ಗಸೂಚಿಗಳನ್ನು ಉಲ್ಲಂಘನೆ ಮಾಡಿದ್ದಾರೆ.
ಬುಧವಾರ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟಕ್ಕೆ ಸಿ. ಪಿ. ಯೋಗೀಶ್ವರ್ ಭೇಟಿ ನೀಡಿದರು. ಕೋವಿಡ್ ಮಾರ್ಗಸೂಚಿ ಅನ್ವಯ ದೇವಾಲಯದ ಸಿಬ್ಬಂದಿ ಬಿಟ್ಟು ಬೇರೆಯವರಿಗೆ ದೇವಾಲಯ ಭೇಟಿಗೆ ಅವಕಾಶವಿಲ್ಲ.
ಆದರೆ ಸಚಿವರು ಎಂಬ ಕಾರಣಕ್ಕೆ ಸ್ಥಳೀಯ ಆಡಳಿತವೂ ಕೋವಿಡ್ ಮಾರ್ಗಸೂಚಿಗಳನ್ನು ಪಕ್ಕಕ್ಕೆ ತಳ್ಳಿ ಸಿ. ಪಿ. ಯೋಗೀಶ್ವರ್ ದೇವಾಲಯಕ್ಕೆ ಭೇಟಿ ನೀಡಲು ಅವಕಾಶ ನೀಡಿತೆ? ಎಂಬ ಪ್ರಶ್ನೆ ಎದ್ದಿದೆ. ಸಚಿವರಿಗೆ ಮಾರ್ಗಸೂಚಿ ಅನ್ವಯವಾಗುವುದಿಲ್ಲವೇ? ಎಂದು ಜನರು ಪ್ರಶ್ನಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿದ ಸಚಿವರು, "ನಾವು ಲಾಕ್ಡೌನ್ ತೆರವುಗೊಂಡ ಬಳಿಕ ಇಲ್ಲಿಗೆ ಬಂದಿದ್ದೇವೆ. ನಾವು ಮಾತ್ರ ಒಳಗೆ ತೆರಳಿದ್ದು, ಇಲಾಖೆ ಅಭಿವೃದ್ಧಿ ವಿಚಾರ ಚರ್ಚೆ ಮಾಡಲು ಬಂದಿದ್ದೇನೆ. ಯಾವ ನಿಯಮವನ್ನೂ ಉಲ್ಲಂಘನೆ ಮಾಡಿಲ್ಲ" ಎಂದು ಸ್ಪಷ್ಟನೆ ನೀಡಿದ್ದಾರೆ.

ಸಾವಿರಾರು ಕೋಟಿ ರೂ.ಗಳು ಬೇಕು
ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, "ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ ಸಾವಿರಾರು ಕೋಟಿ ರೂ.ಗಳು ಬೇಕು. ಪ್ರವಾಸೋದ್ಯಮ ಇಲಾಖೆ ಮಾತ್ರ ಇದನ್ನು ಅಭಿವೃದ್ಧಿಗೊಳಿಸಲು ಸಾಧ್ಯವಿಲ್ಲ. ನಾಲ್ಕಾರು ಇಲಾಖೆಗಳು ಸೇರಿ ಅಭಿವೃದ್ಧಿಗೊಳಿಸಬೇಕು" ಎಂದರು.

ಹಲವಾರು ಸಾಕ್ಷ್ಯಗಳಿವೆ
"ಅಂಜನಾದ್ರಿ ಬೆಟ್ಟದಲ್ಲಿ ಪ್ರವಾಸೋದ್ಯಮ ಬೆಳೆಯುತ್ತಿದೆ. ಇಲ್ಲಿಯೇ ಹನುಮಂತ ಜನಿಸಿದ್ದು ಎಂಬುವುದಕ್ಕೆ ಹಲವು ಸಾಕ್ಷಿ, ಪುರಾವೆಗಳಿವೆ. ಯಾರೋ ಹೇಳುತ್ತಾರೆ ಎಂದು ನಾವು ಸುಮ್ಮನಿರಬಾರದು. ಇಲ್ಲಿಯೇ ಹನುಮಂತ ಜನಿಸಿದ್ದು ಎಂಬ ನಿಲುವು ಸರ್ಕಾರದ್ದೂ ಆಗಿದೆ. ಸರ್ಕಾರ ಬೆಟ್ಟದ ಅಭಿವೃದ್ಧಿಗೆ ಬದ್ಧವಾಗಿದೆ" ಎಂದರು.

ನಮ್ಮ ಆಂತರಿಕ ವಿಚಾರ ಹೇಳಿಕೊಂಡಿದ್ಧೇವೆ
ದೆಹಲಿ ಭೇಟಿಯ ಬಗ್ಗೆ ಮಾತನಾಡಿದ ಯೋಗೀಶ್ವರ್, "ನಮ್ಮಲ್ಲಿ ಆತಂರಿಕ ಸಮಸ್ಯೆಗಳಿವೆ. ಹಾಗಾಗಿ ನಾಯಕರ ಬಳಿ ಹೇಳಿಕೊಳ್ಳಲು ದೆಹಲಿಗೆ ಹೋಗುತ್ತಿದ್ದೇವೆ. ಯಡಿಯೂರಪ್ಪರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುವ ಕೆಲಸವನ್ನು ನಾವು ಮಾಡುತ್ತಿಲ್ಲ" ಎಂದು ಸಚಿವರು ಸ್ಪಷ್ಟಪಡಿಸಿದರು.

ಹಿರಿಯರು ತೀರ್ಮಾನ ಮಾಡುತ್ತಾರೆ
"ನಾವು ಪರೀಕ್ಷೆ ಬರೆದಿದ್ದೇವೆ. ಫಲಿತಾಂಶ ಯಾವಾಗ ಬರುತ್ತೆ ಎಂದು ನೋಡೋಣ. ಪಕ್ಷದ ಹಿರಿಯರು ತೀರ್ಮಾನ ಮಾಡಿದಾಗ ಆವಾಗ ಬರುತ್ತದೆ. ರಮೇಶ್ ಜಾರಕಿಹೊಳಿ ದೆಹಲಿ ಭೇಟಿ ವಿಚಾರ ನನಗೆ ತಿಳಿದಿಲ್ಲ" ಎಂದು ಸಿ. ಪಿ. ಯೋಗೀಶ್ವರ್ ಹೇಳಿದರು.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications