ಮೊದಲ ರಾತ್ರಿ ಅಪಹರಣ ಕೇಸ್ಗೆ ಟ್ವಿಸ್ಟ್: ನಾನೇ ಹೋಗಿದ್ದು ಎಂದ ಮಹಿಳೆ
ಕೊಪ್ಪಳ, ಅಕ್ಟೋಬರ್, 11: ಕೊಪ್ಪಳದಲ್ಲಿ ಮೊದಲ ರಾತ್ರಿಯಂದೇ ವಧು ಅಪಹರಣವಾಗಿರುವ ಘಟನೆಗೆ ಹೊಸ ಟ್ವಿಸ್ಟ್ ಸಿಕ್ಕಿದ್ದು, ನಾನು ಸ್ವಇಚ್ಛೆಯಿಂದಲೇ ಹೋಗಿದ್ದೇನೆ, ಯಾರೂ ನನ್ನನ್ನು ಅಪಹರಿಸಿಲ್ಲ ಎಂದು ನವ ವಿವಾಹಿತೆ ಗಾಯಿತ್ರಿ ಸ್ಪಷ್ಟನೆ ನೀಡಿದ್ದಾರೆ.
ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನವ ಜೋಡಿಯ ಮೊದಲರಾತ್ರಿಯಂದೇ ವಧು ಅಪಹರಣವಾಗಿದೆ ಎಂದು ಆಕೆಯ ಪತಿ ದೂರು ನೀಡಿದ್ದರು.
ಈ ಕುರಿತು ಸತ್ಯ ಬಾಯಿ ಬಿಟ್ಟಿರುವ ವಧು ಗಾಯತ್ರಿ, ನನಗೆ ಇದು ಇಷ್ಟವಿಲ್ಲದ ಮದುವೆಯಾಗಿದ್ದು, ನಾನು ಅಂಜುಕುಮಾರ್ ಅವರನ್ನು ಇಷ್ಟಪಟ್ಟಿದ್ದೆ, ಮದುವೆಯನ್ನೂ ಕೂಡ ಆಗಿದ್ದೆ, ಆದರೆ ತಾಳಿಯನ್ನು ಕಿತ್ತು ಹಾಕಿ ಸೋದರಮಾವನ ಜತೆಗೆ ಬಲವಂತದ ಮದುವೆ ಮಾಡಿದ್ದರು ಎಂದಿದ್ದಾರೆ.
ಮದುವೆಯಾದ ಬಳಿಕ ಹದಿನೈದು ದಿನಗಳ ನಂತರ ಫರ್ಸ್ಟ್ ನೈಟ್ ಅರೇಂಜ್ ಮಾಡಿದ್ದರು. ಹಾಗಾಗಿ ಅಂಜುಕುಮಾರ್ ಗೆ(ಮೊದಲ ಪತಿ) ಕಾಲ್ ಮಾಡಿ ನಾನೇ ಕರೆದುಕೊಂಡು ಹೋಗುವಂತೆ ಕೇಳಿಕೊಂಡೆ. ಇದು ಅಪಹರಣವಲ್ಲ, ಸ್ವಇಚ್ಛೆಯಿಂದಲೇ ಹೋಗಿದ್ದೇನೆ. ನನಗೆ ಅಂಜುಕುಮಾರ್ ಜೊತೆಗೆ ಬದುಕಲು ಬಿಡಿ ಎಂದು ವಧು ಗಾಯಿತ್ರಿ ಬೇಡಿಕೊಂಡಿದ್ದಾಳೆ.

ಸೆಪ್ಟೆಂಬರ್ 24ರಂದು ಗುಡೂರು ಗ್ರಾಮದ ಗಾಯಿತ್ರಿ ಹಾಗೂ ಮಲ್ಲನಗೌಡ ಕುಷ್ಟಗಿ ತಾಲೂಕಿನ ಪುರದ ಸೋಮನಾಥ ದೇವಸ್ಥಾನದಲ್ಲಿ ಕುಟುಂಬದವರ ಸಮ್ಮುಖದಲ್ಲಿ ವಿವಾಹವಾಗಿದ್ದರು. ವಧು ಶೌಚಾಲಯಕ್ಕೆ ಹೋದಾಗ ಅಪಹರಿಸಲಾಗಿದೆ ಎಂದು ಹೇಳಿರುವುದು ಸುಳ್ಳು ಎಂದು ಗಾಯಿತ್ರಿ ಸ್ಪಷ್ಟಪಡಿಸಿದ್ದಾಳೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications