ನವವೃಂದಾವನ ಧ್ವಂಸ ಪ್ರಕರಣ: ಮತ್ತೊಬ್ಬ ಆರೋಪಿ ಬಂಧನ
ಬೆಂಗಳೂರು, ಜುಲೈ 30: ಕೊಪ್ಪಳದ ಗಂಗಾವತಿ ತಾಲ್ಲೂಕಿನ ಆನೆಗುಂದಿ ಸಮೀಪದ ನವವೃಂದಾವನದ ಶ್ರೀ ವ್ಯಾಸರಾಜರ ವೃಂದಾವನ ದ್ವಂಸಗೊಳಿಸಿದ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ಶ್ರೀನಿವಾಸ ರೆಡ್ಡಿಯನ್ನು ಪೊಲೀಸರು ಬಂಧಿಸಿದ್ದಾರೆ.
ವೃಂದಾವನ ಧ್ವಂಸ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಶ್ರೀನಿವಾಸ ರೆಡ್ಡಿ ಸಿಕಂದರಾಬಾದ್ನಲ್ಲಿ ಅಡಗಿಕೊಂಡಿದ್ದ. ಆತನ ಪತ್ತೆಗೆ ತೀವ್ರ ಶೋಧ ನಡೆಸಿದ್ದ ಪೊಲೀಸರು ಕೊನೆಗೂ ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದರಿಂದ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲ ಎಂಟು ಆರೋಪಿಗಳನ್ನು ಬಂಧಿಸಿದಂತಾಗಿದೆ.
ಇದಕ್ಕೂ ಮುನ್ನ ಕ್ಷಿಪ್ರ ಕಾರ್ಯಾಚರಣೆ ನಡೆಸಿದ್ದ ಪೊಲೀಸರು ಏಳು ಆರೋಪಿಗಳನ್ನು ಕಳೆದ ವಾರ ಬಂಧಿಸಿದ್ದರು. ನಿಧಿಯಾಸೆಯಿಂದ ವೃಂದಾವನದ ಕಂಬಗಳನ್ನು ಕಿತ್ತು ಧ್ವಂಸಗೊಳಿಸಿದ್ದಾಗಿ ಅವರು ಹೇಳಿಕೆ ನೀಡಿದ್ದರು.

ಆಂಧ್ರಪ್ರದೇಶದ ತಾಡಪತ್ರಿಯ ಶ್ರೀ ಬುಗ್ಗ ರಾಮಲಿಂಗೇಶ್ವರ ದೇವಸ್ಥಾನದ ಅರ್ಚಕ ಟಿ. ಬಾಲನರಸಯ್ಯ, ಡ. ಮನೋಹರ ಡೆರಂಗಲು, ಶ್ರೀರಾಮುಲು, ಬಿ. ವಿಜಯಕುಮಾರ್, ಕೆ. ಕುಮ್ಮಟ ಕೇಶವ, ಮುರಳಿ ಮನೋಹರ್ ರೆಡ್ಡಿ ಅವರನ್ನು ಜುಲೈ 21ರಂದು ಬಂಧಿಸಲಾಗಿತ್ತು.
ಜುಲೈ 17ರಂದು ನವವೃಂದಾವನಕ್ಕೆ ಬಂದಿದ್ದ ಈ ದುಷ್ಕರ್ಮಿಗಳ ತಂಡ, ರಾತ್ರಿ 8.30ರಿಂದ 2.40ರವರೆಗೂ ಅಗೆದು ಕಂಬಗಳನ್ನು ಕಿತ್ತಿದ್ದರು. ಅದಕ್ಕೂ ಮುನ್ನ ಅರ್ಚಕ ವೃಂದಾವನಕ್ಕೆ ಪೂಜೆ ಸಲ್ಲಿಸಿದ್ದ. ಆದರೆ, ಅವರಿಗೆ ಕೆಳಗೆ ಕಲ್ಲು ಸಿಕ್ಕಿತ್ತು. ನಿಧಿ ಸಿಗದ ಕಾರಣ ಅವರು ಅದನ್ನು ಅಲ್ಲಿಯೇ ಬಿಟ್ಟು ಇನ್ನೋವಾ ಕಾರ್ನಲ್ಲಿ ಪರಾರಿಯಾಗಿದ್ದರು. ಈ ಘಟನೆ ಭಾರಿ ಆಕ್ರೋಶಕ್ಕೆ ಕಾರಣವಾಗಿತ್ತು. ಸಮುದಾಯದ ಜನರು ಒಗ್ಗೂಡಿ ಒಂದು ದಿನದಲ್ಲಿಯೇ ವೃಂದಾವನವನ್ನು ಅದೇ ರೂಪದಲ್ಲಿ ಮರು ನಿರ್ಮಾಣ ಮಾಡಿದ್ದರು.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications