Stories of strength; ಕೋವಿಡ್ ಗೆದ್ದ ಯುವಕನಿಂದ ಸೋಂಕಿತರ ಸೇವೆ
ಕೋವಿಡ್ ಸೋಂಕು ತಗುಲಿ ಗುಣಮುಖವಾದರೆ ಮನೆಯಲ್ಲಿಯೇ ಇರಲು ಬಯಸುವವರು ಹೆಚ್ಚು. ಆದರೆ ಇಲ್ಲೊಬ್ಬ ಯುವಕ ಕೊರೊನಾ ಸೋಂಕು ಗೆದ್ದ ಮೇಲೆ ಸ್ವಯಂ ಪ್ರೇರಣೆಯಿಂದ ಕೋವಿಡ್ ಆಸ್ಪತ್ರೆಯಲ್ಲಿ ಸೇವೆಯನ್ನು ಮಾಡುತ್ತಾ ಸೋಂಕಿತರಿಗೆ ಧೈರ್ಯ ತುಂಬುತ್ತಿದ್ದಾರೆ.
ಕೊಪ್ಪಳದ ಗವಿಶ್ರೀ ನಗರದ ನಿವಾಸಿಯಾದ ಮಹೇಶ ಸಾಲಿಮಠ ಬೆಂಗಳೂರಿನ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಆಗ ಕೋವಿಡ್ ಸೋಂಕು ತಗುಲಿತ್ತು. ಅಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು ಕೊಪ್ಪಳಕ್ಕೆ ಆಗಮಿಸಿದ್ದರು. ಬಳಿಕ ದೇಹದ ಆಮ್ಲಜನಕ ಮಟ್ಟ ಕುಸಿಯಿತು.
ಗವಿಸಿದ್ದೇಶ್ವರ ಕೋವಿಡ್ ಆಸ್ಪತ್ರೆಗೆ ಮೇ 13ರಂದು ದಾಖಲಾದರು. 12 ದಿನಗಳ ಕಾಲ ಚಿಕಿತ್ಸೆ ಪಡೆದು ಗುಣಮುಖಗೊಂಡರು. ಗುಣಮುಖರಾದ ಬಳಿಕ ಕೋವಿಡ್ ಸೋಂಕಿತರ ಸೇವೆ ಮಾಡಬೇಕು ಎಂದು ಮಹೇಶ ಸಾಲಿಮಠಗೆ ಅನ್ನಿಸಿದೆ.

ಈ ಕುರಿತು ವೈದ್ಯರ ಬಳಿ ವಿಚಾರಿಸಿದರು. ವೈದ್ಯರು ಕೋವಿಡ್ ಗೆದ್ದಿರುವುದರಿಂದ ನಿಮ್ಮಲ್ಲಿ ರೋಗ ನಿರೋಧಕ ಶಕ್ತಿ ವೃದ್ಧಿಯಾಗಿರುತ್ತದೆ. ಇಚ್ಛೇ ಇದ್ದರೆ ಸೇವೆ ಮಾಡಿ ಎಂದು ಸಲಹೆ ನೀಡಿದರು.
ಒಂದು ವಾರದಿಂದ ಗವಿಸಿದ್ದೇಶ್ವರ ಕೋವಿಡ್ ಆಸ್ಪತ್ರೆಯಲ್ಲಿ ರೋಗಿಗಳ ಸೇವೆ ಮಾಡುತ್ತಿದ್ದಾರೆ. ರೋಗಿಗಳ ಜೊತೆ ಮಾತನಾಡಿ ಅವರಿಗೆ ಧೈರ್ಯ ತುಂಬುವ ಕೆಲಸವನ್ನು ಮಾಡುತ್ತಿದ್ದಾರೆ. ನೀವು ಧೈರ್ಯವಾಗಿದ್ದರೆ ಕೋವಿಡ್ ಗೆಲ್ಲಬಹುದು ಎಂದು ಸೋಂಕಿತರಲ್ಲಿ ಆತ್ಮವಿಶ್ವಾಸವನ್ನು ತುಂಬುತ್ತಿದ್ದಾರೆ.
ಕುಟುಂಬದವರಿಗೆ ಮಾತನಾಡುವುದು, ವಿಡಿಯೋ ಕಾಲ್ ಮಾಡಿಸುವುದು. ವಿವಿಧ ರೀತಿಯ ಸಹಾಯವನ್ನು ಮಾಡುತ್ತಿದ್ದಾರೆ. ಸ್ವಯಂ ಪ್ರೇರಣೆಯಿಂದ ಸೇವೆ ಮಾಡುತ್ತಿರುವ ಮಹೇಶ ಸಾಲಿಮಠ ಕಾರ್ಯವನ್ನು ಮೆಚ್ಚಿದ್ದಾರೆ.
"ಈ ರೀತಿಯ ಸೇವೆ ಮಾಡುವುದು ತೀರಾ ಅಗತ್ಯವಾಗಿದೆ. ಮಹಾಮಾರಿಯನ್ನು ಕಟ್ಟಿ ಹಾಕಲು ಗೆದ್ದವರು ಕೈ ಜೋಡಿಸಬೇಕು. ಕೋವಿಡ್ ಗೆದ್ದವರಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಳವಾಗಿರುವುದರಿಂದ ಸಮಸ್ಯೆ ಆಗುವುದಿಲ್ಲ" ಎಂದು ಮಹೇಶ ಸಾಲಿಮಠ ಹೇಳಿದ್ದಾರೆ.
-
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ












Click it and Unblock the Notifications