Stories of strength; ಕೋವಿಡ್ ಗೆದ್ದ ಯುವಕನಿಂದ ಸೋಂಕಿತರ ಸೇವೆ
ಕೋವಿಡ್ ಸೋಂಕು ತಗುಲಿ ಗುಣಮುಖವಾದರೆ ಮನೆಯಲ್ಲಿಯೇ ಇರಲು ಬಯಸುವವರು ಹೆಚ್ಚು. ಆದರೆ ಇಲ್ಲೊಬ್ಬ ಯುವಕ ಕೊರೊನಾ ಸೋಂಕು ಗೆದ್ದ ಮೇಲೆ ಸ್ವಯಂ ಪ್ರೇರಣೆಯಿಂದ ಕೋವಿಡ್ ಆಸ್ಪತ್ರೆಯಲ್ಲಿ ಸೇವೆಯನ್ನು ಮಾಡುತ್ತಾ ಸೋಂಕಿತರಿಗೆ ಧೈರ್ಯ ತುಂಬುತ್ತಿದ್ದಾರೆ.
ಕೊಪ್ಪಳದ ಗವಿಶ್ರೀ ನಗರದ ನಿವಾಸಿಯಾದ ಮಹೇಶ ಸಾಲಿಮಠ ಬೆಂಗಳೂರಿನ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಆಗ ಕೋವಿಡ್ ಸೋಂಕು ತಗುಲಿತ್ತು. ಅಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು ಕೊಪ್ಪಳಕ್ಕೆ ಆಗಮಿಸಿದ್ದರು. ಬಳಿಕ ದೇಹದ ಆಮ್ಲಜನಕ ಮಟ್ಟ ಕುಸಿಯಿತು.
ಗವಿಸಿದ್ದೇಶ್ವರ ಕೋವಿಡ್ ಆಸ್ಪತ್ರೆಗೆ ಮೇ 13ರಂದು ದಾಖಲಾದರು. 12 ದಿನಗಳ ಕಾಲ ಚಿಕಿತ್ಸೆ ಪಡೆದು ಗುಣಮುಖಗೊಂಡರು. ಗುಣಮುಖರಾದ ಬಳಿಕ ಕೋವಿಡ್ ಸೋಂಕಿತರ ಸೇವೆ ಮಾಡಬೇಕು ಎಂದು ಮಹೇಶ ಸಾಲಿಮಠಗೆ ಅನ್ನಿಸಿದೆ.

ಈ ಕುರಿತು ವೈದ್ಯರ ಬಳಿ ವಿಚಾರಿಸಿದರು. ವೈದ್ಯರು ಕೋವಿಡ್ ಗೆದ್ದಿರುವುದರಿಂದ ನಿಮ್ಮಲ್ಲಿ ರೋಗ ನಿರೋಧಕ ಶಕ್ತಿ ವೃದ್ಧಿಯಾಗಿರುತ್ತದೆ. ಇಚ್ಛೇ ಇದ್ದರೆ ಸೇವೆ ಮಾಡಿ ಎಂದು ಸಲಹೆ ನೀಡಿದರು.
ಒಂದು ವಾರದಿಂದ ಗವಿಸಿದ್ದೇಶ್ವರ ಕೋವಿಡ್ ಆಸ್ಪತ್ರೆಯಲ್ಲಿ ರೋಗಿಗಳ ಸೇವೆ ಮಾಡುತ್ತಿದ್ದಾರೆ. ರೋಗಿಗಳ ಜೊತೆ ಮಾತನಾಡಿ ಅವರಿಗೆ ಧೈರ್ಯ ತುಂಬುವ ಕೆಲಸವನ್ನು ಮಾಡುತ್ತಿದ್ದಾರೆ. ನೀವು ಧೈರ್ಯವಾಗಿದ್ದರೆ ಕೋವಿಡ್ ಗೆಲ್ಲಬಹುದು ಎಂದು ಸೋಂಕಿತರಲ್ಲಿ ಆತ್ಮವಿಶ್ವಾಸವನ್ನು ತುಂಬುತ್ತಿದ್ದಾರೆ.
ಕುಟುಂಬದವರಿಗೆ ಮಾತನಾಡುವುದು, ವಿಡಿಯೋ ಕಾಲ್ ಮಾಡಿಸುವುದು. ವಿವಿಧ ರೀತಿಯ ಸಹಾಯವನ್ನು ಮಾಡುತ್ತಿದ್ದಾರೆ. ಸ್ವಯಂ ಪ್ರೇರಣೆಯಿಂದ ಸೇವೆ ಮಾಡುತ್ತಿರುವ ಮಹೇಶ ಸಾಲಿಮಠ ಕಾರ್ಯವನ್ನು ಮೆಚ್ಚಿದ್ದಾರೆ.
"ಈ ರೀತಿಯ ಸೇವೆ ಮಾಡುವುದು ತೀರಾ ಅಗತ್ಯವಾಗಿದೆ. ಮಹಾಮಾರಿಯನ್ನು ಕಟ್ಟಿ ಹಾಕಲು ಗೆದ್ದವರು ಕೈ ಜೋಡಿಸಬೇಕು. ಕೋವಿಡ್ ಗೆದ್ದವರಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಳವಾಗಿರುವುದರಿಂದ ಸಮಸ್ಯೆ ಆಗುವುದಿಲ್ಲ" ಎಂದು ಮಹೇಶ ಸಾಲಿಮಠ ಹೇಳಿದ್ದಾರೆ.
-
Top 3 Job Sectors: 2026ರಲ್ಲಿ ಯಾವ ಕ್ಷೇತ್ರ ಆಯ್ಕೆ ಮಾಡಬೇಕು? ಟಾಪ್ 3 ಉದ್ಯೋಗ ವಲಯಗಳು -
ವಾಸ್ತು ಅನುಸರಿಸುವುದು ಏಕೆ ಮುಖ್ಯ? ತಿಳಿಯಿರಿ ಕಾರಣಗಳು -
ದಾವಣಗೆರೆ ಉಪಚುನಾವಣೆ: ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್, ಕಾಂಗ್ರೆಸ್ ಬೆಂಬಲಕ್ಕೆ ನಿರ್ಧಾರ -
SSLC Hindi Exam: ಮಾರ್ಚ್ 30ರ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆಗೆ ಹೊಸ ಸಮಸ್ಯೆ: ಪರೀಕ್ಷಾ ಮಂಡಳಿ ಹೇಳಿದ್ದೇನು -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ










Click it and Unblock the Notifications