ಜಲಿಯನ್ ವಾಲಾಬಾಗ್ ಹತ್ಯಾಕಾಂಡ: ಮತ್ತೆ 'ವಿಷಾದ' ವ್ಯಕ್ತಪಡಿಸಿದ ಬ್ರಿಟನ್
ಲಂಡನ್, ಮೇ 9: ಜಲಿಯನ್ ವಾಲಾಬಾಗ್ ಭೀಕರ ಹತ್ಯಾಕಾಂಡಕ್ಕೆ ನೂರು ವರ್ಷ ತುಂಬಿದ ಸಂದರ್ಭದಲ್ಲಿಯೂ ಘಟನೆ ಕುರಿತು ಭಾರತಕ್ಕೆ ಕ್ಷಮೆ ಯಾಚಿಸದ ಬ್ರಿಟನ್, ಮತ್ತೊಮ್ಮೆ ವಿಷಾದ ವ್ಯಕ್ತಪಡಿಸಿದೆ.
ಅಮೃತಸರದ ಜಲಿಯನ್ ವಾಲಾಬಾಗ್ನಲ್ಲಿ ಸಾವಿರಾರು ಮಂದಿಯನ್ನು ಅಮಾನುಷವಾಗಿ ಹತ್ಯೆ ಮಾಡಿದ ಘಟನೆ ಬ್ರಿಟಿಷ್ ಭಾರತದ ಇತಿಹಾಸದಲ್ಲಿ 'ನಾಚಿಕೆಗೇಡಿನ ಗಾಯ' ಎಂದಿರುವ ಬ್ರಿಟನ್ ಪ್ರಧಾನಿ ಥೆರೆಸಾ ಮೇ, ಈ ಬಗ್ಗೆ ತೀವ್ರ ವಿಷಾದ ವ್ಯಕ್ತಪಡಿಸುತ್ತಿರುವುದಾಗಿ ಪುನರುಚ್ಚರಿಸಿದ್ದಾರೆ.
ಭಾರತೀಯ ಜನಸಮೂಹವನ್ನು ಉದ್ದೇಶಿಸಿದ ಬುಧವಾರ ಮಾತನಾಡಿದ ಅವರು, 'ಅಂದು ನಡೆದ ಘಟನೆಗೆ ಮತ್ತು ಅನೇಕ ಜನರಿಗೆ ಉಂಟಾದ ನೋವಿಗೆ ತೀವ್ರ ವಿಷಾದ ವ್ಯಕ್ತಪಡಿಸುತ್ತೇವೆ. ಆ ದಿನ ಏನು ನಡೆಯಿತು ಎಂಬುದನ್ನು ಕೇಳಿದವರು ಯಾರೂ ನೋವಿಗೆ ಒಳಗಾಗದೆ ಇರಲಾರರು. ನೂರು ವರ್ಷದ ಹಿಂದೆ ಆ ಉದ್ಯಾನದೊಳಗೆ ಏನಾಯಿತು ಎಂದು ಈಗ ಭೇಟಿ ನೀಡಿದವರು ಖಂಡಿತವಾಗಿಯೂ ಊಹಿಸಲು ಸಾಧ್ಯವಿಲ್ಲ' ಎಂದರು.

'ಅದು ನಮ್ಮ ಇತಿಹಾಸದಲ್ಲಿಯೇ ಅತ್ಯಂತ ಕೆಟ್ಟ ಘಟನೆಗಳಲ್ಲಿ ಒಂದು' ಎಂದು ಒಂದು ಕಾಲದಲ್ಲಿ ಮಾಜಿ ಪ್ರಧಾನಿ ಎಚ್ ಎಚ್ ಅಸ್ಕಿತ್ ವರ್ಣಿಸಿದ್ದರು ಎಂದು ಹೇಳಿದರು.
ಸಾವಿರಾರು ಭಾರತೀಯರ ಜೀವವನ್ನು ಬಲಿತೆಗೆದುಕೊಂಡ ಭೀಕರ ಹತ್ಯಾಕಾಂಡದ ಬಗ್ಗೆ ಕ್ಷಮೆ ಯಾಚಿಸಬೇಕು ಎಂದು ಬ್ರಿಟಿಷ್ ಸಂಸತ್ನ ಒಂದು ವರ್ಗ ಹಾಗೂ ಸಿಖ್ ಸಂಘಟನೆಗಳು ಒತ್ತಾಯಿಸಿದ್ದವು. ಆದರೆ, ಥೆರೆಸಾ ಮೇ ಏಪ್ರಿಲ್ 10ರಂದು ವಿಷಾದ ವ್ಯಕ್ತಪಡಿಸಿದ್ದರು. ಈಗಲೂ ವಿಷಾದ ವ್ಯಕ್ತಪಡಿಸಿದರೇ ವಿನಾ ಕ್ಷಮೆ ಯಾಚಿಸಲಿಲ್ಲ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications