ನವಾಜ್ ಷರೀಫ್ ವೀಸಾ ಅವಧಿ ವಿಸ್ತರಣೆ ಅರ್ಜಿ ತಿರಸ್ಕರಿಸಿದ ಬ್ರಿಟನ್
ಲಂಡನ್, ಆಗಸ್ಟ್ 06: ಪಾಕಿಸ್ತಾನ ಮಾಜಿ ಪ್ರಧಾನಿ ನವಾಜ್ ಷರೀಫ್ ವೀಸಾ ಅವಧಿ ವಿಸ್ತರಣೆ ಕುರಿತು ಸಲ್ಲಿಸಿದ್ದ ಅರ್ಜಿಯನ್ನು ಬ್ರಿಟನ್ ಗೃಹ ಸಚಿವಾಲಯ ತಿರಸ್ಕರಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ನವಾಜ್ ಷರೀಫ್ ಅವರ ವೀಸಾ ಅವಧಿ ವಿಸ್ತರಿಸಲಾಗದು ಎಂದು ಬ್ರಿಟನ್ ಗೃಹ ಸಚಿವಾಲಯ ತಿಳಿಸಿದೆ ಎಂದು ಪಾಕಿಸ್ತಾನ ಮುಸ್ಲಿಂ ಲೀಗ್ ವಕ್ತಾರರ ಹೇಳಿಕೆಯನ್ನು ಉಲ್ಲೇಖಿಸಿ ಡಾನ್ ನ್ಯೂಸ್ ವರದಿ ಮಾಡಿದೆ.
ಗೃಹ ಸಚಿವಾಲಯ ತೀರ್ಮಾನದ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ, ಅದು ಇತ್ಯರ್ಥವಾಗುವವರೆಗೂ ಷರೀಫ್ ಅವರು ಲಂಡನ್ನಲ್ಲೇ ಇರಲಿದ್ದಾರೆ ಎಂದು ಪಿಎಂಎಲ್ ಎನ್ ವಕ್ತಾರ ಔರಂಗಜೇಬ್ ತಿಳಿಸಿದ್ದಾರೆ.

71 ವರ್ಷದ ನವಾಜ್ ಷರೀಫ್ ಪಾಕಿಸ್ತಾನದಲ್ಲಿ ಎರಡು ಭ್ರಷ್ಟಾಚಾರ ಪ್ರಕರಣಗಳಲ್ಲಿ ಶಿಕ್ಷೆಗೆ ಒಳಗಾಗಿದ್ದಾರೆ. ವಿದೇಶಕ್ಕೆ ಹೋಗಲು ಲಾಹೋರ್ ಹೈಕೋರ್ಟ್ ಅನುಮತಿ ನೀಡಿದ ಬಳಿಕ ನವೆಂಬರ್ 2019ರಿಂದಲೂ ಲಂಡನ್ನಲ್ಲೇ ನೆಲೆಸಿದ್ದಾರೆ.
ಭ್ರಷ್ಟಾಚಾರ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿರುವ ಪಾಕ್ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರನ್ನು ಲಂಡನ್ನಿಂದ ಗಡಿಪಾರು ಮಾಡಬೇಕೆಂದು ಇಮ್ರಾನ್ ಖಾನ್ ನೇತೃತ್ವದ ಸರ್ಕಾರ ಬ್ರಿಟನ್ ಸರಕಾರಕ್ಕೆ ಮನವಿ ಮಾಡಿತ್ತು .
ಇಮ್ರಾನ್ ಖಾನ್ ಸರಕಾರದ ಮನವಿ ಪತ್ರವನ್ನು ಬ್ರಿಟನ್ನಲ್ಲಿನ ಪಾಕ್ ರಾಯಭಾರಿ ಖುದ್ದಾಗಿ ಬ್ರಿಟನ್ ವಿದೇಶಾಂಗ ಆಯುಕ್ತರಿಗೆ ನೀಡಿದ್ದರು. '' 2019ರ ನವೆಂಬರ್ನಿಂದಲೂ ವೈದ್ಯಕೀಯ ಚಿಕಿತ್ಸೆ ಅಡಿಯಲ್ಲಿ ನವಾಜ್ ಅವರಿಗೆ ಲಂಡನ್ನಲ್ಲಿ ವಾಸಕ್ಕೆ ಅವಕಾಶ ಮಾಡಿಕೊಡಲಾಗಿದೆ. ಈ ವೀಸಾವನ್ನು ಕೂಡಲೇ ರದ್ದುಗೊಳಿಸಬೇಕು.
ನಾಲ್ಕು ವರ್ಷಕ್ಕಿಂತ ಹೆಚ್ಚಿನ ಜೈಲು ಶಿಕ್ಷೆಗೆ ಗುರಿಯಾಗಿರುವ ಅಪರಾಧಿಯನ್ನು ಅವರ ಮೂಲ ದೇಶಕ್ಕೆ ಗಡೀಪಾರು ಮಾಡಬೇಕು ಎಂಬುದಾಗಿ 1974ರ ಬ್ರಿಟನ್ನ ವಲಸೆ ಕಾನೂನು ಕೂಡ ಹೇಳುತ್ತದೆ," ಎಂದು ಪಾಕ್ ಸರಕಾರ ತನ್ನ ಮನವಿ ಪತ್ರದಲ್ಲಿ ಉಲ್ಲೇಖಿಸಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅವರ ಆಂತರಿಕ ವಿಚಾರಗಳ ಸಲಹೆಗಾರ ಶೆಹಜಾದ್ ಅಕ್ಬರ್ ಅವರು, "2020ರ ಸೆಪ್ಟೆಂಬರ್ನಲ್ಲಿ ಇಸ್ಲಾಮಾಬಾದ್ ಹೈಕೋರ್ಟ್ ಷರೀಫ್ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಅದರ ಬಳಿಕ ಇದುವರೆಗೂ ಒಟ್ಟು ಮೂರು ಬಾರಿ ನವಾಜ್ ಅವರ ಗಡಿಪಾರಿಗೆ ಲಂಡನ್ ಸರಕಾರಕ್ಕೆ ಮನವಿ ಸಲ್ಲಿಸಲಾಗಿದೆ," ಎಂದಿದ್ದಾರೆ.
ಅಲ್ ಅಜಿಜಿಯಾ ಭ್ರಷ್ಟಾಚಾರ ಪ್ರಕರಣ ಸಂಬಂಧ ಇಸ್ಲಾಮಾಬಾದ್ ಹೈಕೋರ್ಟ್ ಕಳೆದ ಸೆ. 15ರಂದು ನವಾಜ್ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸಿದೆ.
ದೇಶದಲ್ಲಿರುವ ಎಲ್ಲ ಸಮಸ್ಯೆಗಳಿಗೆ ಪ್ರಧಾನಿ ಇಮ್ರಾನ್ ಖಾನ್ ಕಾರಣ ಎಂದು ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಆರೋಪಿಸಿದ್ದರು.
ವಿಪಕ್ಷಗಳ ಒಕ್ಕೂಟ ಪಾಕಿಸ್ತಾನ್ ಡೆಮಾಕ್ರಾಟಿಕ್ ಅಲಯನ್ಸ್ (ಪಿಡಿಎಂ) ವತಿಯಿಂದ ಲಾಹೋರ್ನಲ್ಲಿ ನಡೆದ ಸರ್ಕಾರದ ವಿರುದ್ಧದ ಶಕ್ತಿ ಪ್ರದರ್ಶನ ಸಮಾವೇಶದಲ್ಲಿ ಅವರು ಮಾತನಾಡಿದ್ದರು.
ಕೋವಿಡ್ ಹಿನ್ನೆಲೆ ನಗರದಲ್ಲಿ ಸಾರ್ವಜನಿಕ ರ್ಯಾಲಿಗಳನ್ನು ನಿಷೇಧಿಸಲಾಗಿದೆ. ಆದರೂ ನಗರದ ಮಿನಾರ್-ಎ- ಪಾಕಿಸ್ತಾನ್ ಬಳಿ ವಿಪಕ್ಷಗಳ ಒಕ್ಕೂಟ ಶಕ್ತಿ ಪ್ರದರ್ಶನ ಸಮಾವೇಶ ನಡೆಸಿದೆ ಎಂದು ಎಕ್ಸ್ಪ್ರೆಸ್ ಟ್ರಿಬ್ಯೂನ್ ವರದಿ ಮಾಡಿತ್ತು.
ಕಳೆದ ಒಂದು ವರ್ಷದಿಂದ ಲಂಡನ್ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ನವಾಜ್ ಷರೀಫ್, ಅಲ್ಲಿಂದಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದ್ದರು.
ಇಮ್ರಾನ್ ಖಾನ್ ದೇಶವನ್ನು ಹಣದುಬ್ಬರ ಮತ್ತು ನಿರೋದ್ಯೋಗ ಸಮಸ್ಯೆಗೆ ತಳ್ಳಿದ್ದಾರೆ. ದೇಶದಲ್ಲಿ ಗೋದಿ ಮತ್ತು ಸಕ್ಕರೆ ಸಮಸ್ಯೆ ಇದ್ದರೂ, ಖಾನ್ ಬೆಂಬಲಿಗರು ಹಣ ಸಂಗ್ರಹದಲ್ಲಿ ತೊಡಗಿದ್ದಾರೆ ಎಂದು ಉಚ್ಚಾಟಿತ ಪ್ರಧಾನಿ ವಾಗ್ದಾಳಿ ನಡೆಸಿದ್ದರು.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications