ರಾಜೀನಾಮೆ ಪ್ರಕಟಿಸಿದ ಬ್ರಿಟನ್ ಪ್ರಧಾನಿ ಥೆರೆಸಾ ಮೇ
ಲಂಡನ್, ಮೇ 24: ಬ್ರೆಕ್ಸಿಟ್ ಜಾರಿಗೊಳಿಸುವ ವಿಚಾರದಲ್ಲಿ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಬ್ರಿಟನ್ ಪ್ರಧಾನಿ ಥೆರೆಸಾ ಮೇ, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಪ್ರಕಟಿಸಿದ್ದಾರೆ. ಪ್ರಧಾನಿ ಸ್ಥಾನಕ್ಕೆ ಪರ್ಯಾಯ ನಾಯಕನ ಆಯ್ಕೆಯಾಗುವವರೆಗೂ ಜೂನ್ 7ರವರೆಗೆ ಮಾತ್ರ ಕನ್ಸರ್ವೇಟಿವ್ ಪಕ್ಷದ ನಾಯಕಿಯಾಗಿ ಮುಂದುವರಿಯುವುದಾಗಿ ಅವರು ತಿಳಿಸಿದ್ದಾರೆ.
'ಬ್ರಿಕ್ಸಿಟ್ ಜಾರಿಗೊಳಿಸಲು ನನ್ನಿಂದ ಸಾಧ್ಯವಾಗದೆ ಇರುವುದಕ್ಕೆ ತೀವ್ರ ಪಶ್ಚಾತ್ತಾಪ ಎಂದಿಗೂ ಉಳಿಯಲಿದೆ' ಎಂದು ತಮ್ಮ ಭಾವನಾತ್ಮಕ ಭಾಷಣದಲ್ಲಿ ಅವರು ಹೇಳಿದ್ದಾರೆ.
'ಜೂನ್ 7ರಂದು ಕನ್ಸರ್ವೇಟಿವ್ ನಾಯಕತ್ವಕ್ಕೆ ಮತ್ತು ಯೂನಿಯನಿಸ್ಟ್ ಪಕ್ಷಕ್ಕೆ ರಾಜೀನಾಮೆ ನೀಡುತ್ತೇನೆ. ಹೊಸ ನಾಯಕತ್ವವನ್ನು ಆಯ್ಕೆ ಮಾಡುವ ಪ್ರಕ್ರಿಯೆ ಮುಂದಿನ ವಾರದಲ್ಲಿ ಆರಂಭವಾಗಬೇಕಿದೆ' ಎಂದು ಹೇಳಿದ್ದಾರೆ.

ಭಾಷಣದ ವೇಳೆ ಅವರು ಆರ್ಥಿಕ ಮುಗ್ಗಟ್ಟನ್ನು ಎದುರಿಸಿದ್ದು, ನಿರುದ್ಯೋಗದ ಸಮಸ್ಯೆಯನ್ನು ನಿವಾರಿಸಿದ್ದು, ಮಾನಸಿಕ ಆರೋಗ್ಯದ ವೃದ್ಧಿಗೆ ನೆರವಾದದ್ದು ಸೇರಿದಂತೆ ವಿವಿಧ ಸಾಧನೆಗಳನ್ನು ಸರ್ಕಾರ ಮಾಡಿರುವುದಾಗಿ ಹೇಳಿಕೊಂಡರು.
'ಈ ಒಪ್ಪಂದದ ವಿಚಾರದಲ್ಲಿ ಸಂಸದರ ಮನವೊಲಿಸಲು ನನ್ನಿಂದ ಸಾಧ್ಯವಾದುದ್ದನ್ನೆಲ್ಲ ಮಾಡಿದ್ದೇನೆ. ಆದರೆ, ನನ್ನಿಂದ ಅದು ಸಾಧ್ಯವಾಗಲಿಲ್ಲ ಎನ್ನುವುದು ದುಃಖಕರ. ನಾನು ಮೂರು ಬಾರಿ ಪ್ರಯತ್ನಿಸಿದ್ದೇನೆ. ಇದನ್ನು ಇಲ್ಲಿಗೆ ಬಿಟ್ಟುವುದು ಸೂಕ್ತ ಎನಿಸಿದೆ. ಈ ಪ್ರಯತ್ನವನ್ನು ಹೊಸ ಪ್ರಧಾನಿ ಮುನ್ನಡೆಸುವುದು ದೇಶದ ಹಿತಾಸಕ್ತಿಯಿಂದ ಒಳ್ಳೆಯದು ಎನ್ನುವುದು ನನಗೆ ಸ್ಪಷ್ಟವಾಗಿದೆ' ಎಂದು ಗದ್ಗದಿತರಾಗಿ ಅವರು ನುಡಿದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications