ಕಾಶ್ಮೀರದ ಮಕ್ಕಳು, ಮಹಿಳೆಯರ ಬಗ್ಗೆ ಆತಂಕವಿದೆ ಎಂದ ಮಲಾಲಾ
ಲಂಡನ್, ಆಗಸ್ಟ್ 08: ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಅನ್ನು ಪ್ರತ್ಯೇಕ ಕೇಂದ್ರಾಡಳಿತ ಪ್ರದೇವನ್ನಾಗಿ ಘೋಷಿಸಿ, ಈ ರಾಜ್ಯಕ್ಕೆ ವಿಷೇಷ ಸ್ಥಾನಮಾನ ನೀಡಿದ್ದ ಸಂವಿಧಾನದ 370 ನೇ ವಿಧಿಯನ್ನು ರದ್ದುಗೊಳಿಸಿದ ಭಾರತದ ಕ್ರಮದ ಬಗ್ಗೆ ನೊಬೆಲ್ ಪ್ರಶಸ್ತಿ ವಿಜೇತೆ ಮಲಾಲಾ ಯೂಸಫ್ಜಾಯ್ ಆತಂಕ ವ್ಯಕ್ತಪಡಿಸಿದ್ದಾರೆ.
22 ವರ್ಷ ವಯಸ್ಸಿನ ಮಲಾಲಾ ಪಾಕಿಸ್ತಾನದಲ್ಲಿ ಭಯೋತ್ಪಾದನೆಯ ನಿಯಂತ್ರಣ ಮತ್ತು ಮಹಿಳೆಯರ ಶಿಕ್ಷಣಕ್ಕೆ ಒತ್ತು ನೀಡುವಂತೆ ಚಿಕ್ಕ ವಯಸ್ಸಿನಲ್ಲೇ ಹೋರಾಟಕ್ಕಿಳಿದಿದ್ದರು. 2012 ರಲ್ಲಿ ತಾಲಿಬಾನಿಗಳ ಗುಂಡಿನ ದಾಳಿಗೊಳಗಾಗಿದ್ದ ಮಲಾಲಾ ನಂತರ ಲಂಡನ್ನಿನಲ್ಲಿ ಚಿಕಿತ್ಸೆ ಪಡೆದು ಬದುಕುಳಿದಿದ್ದರು. ಸದ್ಯ ಲಂಡನ್ನಿನಲ್ಲೇ ವಾಸವಿರುವ ಮಲಾಲ ತಮ್ಮ 17 ನೇ ವಯಸ್ಸಿನಲ್ಲಿಯೇ ನೊಬೆಲ್ ಶಾಂತಿ ಪ್ರಶಸ್ತಿ ಪಡೆದು, ಈ ಸಾಧನೆ ಮಾಡಿದ ಅತೀ ಕಿರಿಯ ವಯಸ್ಸಿನ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.
ಕಾಶ್ಮೀರದ ಮಹಿಳೆಯರು ಮತ್ತು ಮಕ್ಕಳ ಬಗ್ಗೆ ನನಗೆ ಆತಂಕವಿದೆ ಎಂದು ಮಲಾಲಾ ಅವರು ಬರೆದಿರುವ ಪತ್ರದ ಯಥಾವತ್ ಅನುವಾದ ಇಲ್ಲಿದೆ...

ಕಾಶ್ಮೀರದಲ್ಲಿ ಸಂಘರ್ಷ ಮುಗಿದಿಲ್ಲ
"ನಾನು ಮಗುವಾಗಿದ್ದಾಗಿನಿಂದಲೂ ಕಾಶ್ಮೀರದ ಜನರು ಸಂಘರ್ಷದಲ್ಲಿ ಬದುಕುತ್ತಿದ್ದಾರೆ, ನನ್ನ ತಂದೆ-ತಾಯಿ ಮಕ್ಕಳಾಗಿದ್ದಾಗಲೂ ಅವರು ಸಂಘರ್ಷದಲ್ಲೇ ಬದುಕಿದ್ದಾರೆ, ನನ್ನ ಅಜ್ಜ-ಅಜ್ಜಿ ಯುವಕರಾಗಿದ್ದಾಗಲೂ ಅಲ್ಲಿ ಸಂಘರ್ಷವಿತ್ತು. ಏಳು ದಶಕಗಳಿಂದ ಕಾಶ್ಮೀರದ ಮಕ್ಕಳು ಹಿಂಸೆಯ ನಡುವಲ್ಲೇ ಬದುಕುತ್ತಿದ್ದಾರೆ" - ಮಲಾಲಾ ಯೂಸಫ್ಜಾಯ್.

ದಕ್ಷಿಣ ಏಷ್ಯಾ ನನ್ನ ಮನೆ
"ನಾನು ಕಾಶ್ಮೀರದ ಬಗ್ಗೆ ಕಾಳಜಿ ಹೊಂದಿದ್ದೇನೆ. ಏಕೆಂದರೆ ದಕ್ಷಿಣ ಏಷ್ಯಾ ನನ್ನ ಮನೆ. ಆ ಮನೆಯನ್ನು ನಾನು ಕಾಶ್ಮೀರಿಗಳೂ ಸೇರಿ 1.8 ಬಿಲಿಯನ್ ಜನರೊಂದಿಗೆ ಹಂಚಿಕೊಂಡಿದ್ದೇನೆ. ನಾವು ಬೇರೆ ಬೇರೆ ಸಂಸ್ಕೃತಿ, ಮತ, ಭಾಷೆ, ಸಂಪ್ರದಾಯವನ್ನು ಪ್ರತಿನಿಧಿಸುತ್ತೇವೆ. ಆದರೂ ನಾವು ಶಾಂತಿಯಿಂದ ಬದುಕಲು ಸಾಧ್ಯವಿದೆ ಎಂದು ನಾನು ನಂಬುತ್ತೇನೆ. ವಿವಿಧತೆಯೊಂದಿಗೇ ಈ ಜಗತ್ತಿಗೆ ನಮ್ಮ ಜನರು ನೀಡಿದ ಕೊಡುಗೆಗೆ ನಮಗೆಲ್ಲರಿಗೂ ಹೆಮ್ಮೆಯಿದೆ" - ಮಲಾಲಾ ಯೂಸಫ್ಜಾಯ್.

ಕಾಶ್ಮೀರದ ಮಹಿಳೆ ಮತ್ತು ಮಕ್ಕಳ ಬಗ್ಗೆ ಆತಂಕ
"ನಾವು ಪರಸ್ಪರ ನೋವು ಮಾಡಿಕೊಳ್ಳುವ, ನರಳುವುದರ ಅಗತ್ಯವಿಲ್ಲ. ನನಗೆ ಈಗ ಕಾಶ್ಮೀರದ ಮಹಿಳೆ ಮತ್ತು ಮಕ್ಕಳ ಬಗ್ಗೆ ಆತಂಕವಿದೆ. ಹಿಂಸೆ ಮತ್ತು ಸಂಘರ್ಷದ ನೇರ ಪರಿಣಾಮವನ್ನು ಹೆಚ್ಚಾಗಿ ಅನುಭವಿಸುವವರು ಅವರೇ" - ಮಲಾಲಾ ಯೂಸಫ್ಜಾಯ್.

ಮಾನವ ಹಕ್ಕುಗಳಿಗೆ ಬೆಲೆ ನೀಡೋಣ
"ಎಲ್ಲಾ ದಕ್ಷಿಣ ಏಷ್ಯಾದ ಮತ್ತು ಅಂತಾರಾಷ್ಟ್ರೀಯ ಸಮುದಾಯಗಳು ಆ ಮಹಿಳೆಯರ ಮತ್ತು ಮಕ್ಕಳ ನರಳಾಟಕ್ಕೆ ಸ್ಪಂದಿಸುತ್ತಾರೆ ಎಂಬ ಭರವಸೆ ನನಗಿದೆ. ನಮ್ಮ ನಡುವೆ ಎಷ್ಟೇ ಭಿನ್ನಾಭಿಪ್ರಾಯಗಳಿದ್ದರೂ ನಾವು ಮಾನವ ಹಕ್ಕುಗಳಿಗೆ ಬೆಲೆ ಕೊಡಬೇಕು, ಮಹಿಳೆಯರು ಮತ್ತು ಮಕ್ಕಳ ಭದ್ರತೆಗೆ ಆದ್ಯತೆ ನೀಡಬೇಕು ಮತ್ತು ಏಳು ದಶಕಗಳ ಹಳೆಯ ಕಾಶ್ಮೀರ ವಿವಾದಕ್ಕೆ ಶಾಂತಿಯುತ ಪರಿಹಾರ ನೀಡುವುದಕ್ಕೆ ಮುಂದಾಗಬೇಕು" - ಮಲಾಲಾ ಯೂಸಫ್ಜಾಯ್.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications