ಬಸವಣ್ಣ ಜಗತ್ತಿನ ಮೊಟ್ಟಮೊದಲ ಪ್ರಜಾಪ್ರಭುತ್ವವಾದಿ: ಸಚಿವ ಅಶ್ವತ್ಥ ನಾರಾಯಣ
ಲಂಡನ್, ಮೇ 22: ನಗರದ ಲ್ಯಾಂಬೆತ್ನ ಥೇಮ್ಸ್ ನದಿಯ ತಟದಲ್ಲಿರುವ ಬಸವೇಶ್ವರರ ಪ್ರತಿಮೆಗೆ ರಾಜ್ಯದ ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಭಾನುವಾರ ಭೇಟಿ ನೀಡಿ, ಗೌರವ ನಮನ ಸಲ್ಲಿಸಿದರು.
ನಮನ ಸಲ್ಲಿಸಿದ ನಂತರ ಮಾತನಾಡಿದ ಅವರು, "ಬಸವಣ್ಣನವರ ತತ್ತ್ವ-ಚಿಂತನೆಗಳಿಂದ ಪ್ರೇರಣೆ ಪಡೆದುಕೊಂಡಿರುವ ಕರ್ನಾಟಕವು ಇನ್ನು 25 ವರ್ಷಗಳಲ್ಲಿ ಸಾಮಾಜಿಕ, ರಾಜಕೀಯ, ಶೈಕ್ಷಣಿಕ ಮತ್ತು ಆರ್ಥಿಕ ಕ್ಷೇತ್ರಗಳಲ್ಲಿ ಜಾಗತಿಕವಾಗಿ ನಾಯಕ ಸ್ಥಾನದಲ್ಲಿ ಪ್ರತಿಷ್ಠಾಪಿತವಾಗಲಿದೆ" ಎಂದು ವಿಶ್ವಾಸ ವ್ಯಕ್ತಪಡಿಸಿದರು.
"2014ರಲ್ಲಿ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ ಈ ಪ್ರತಿಮೆಯು ಇಡೀ ವಿಶ್ವಕ್ಕೇ ಒಂದು ಅಮೂಲ್ಯ ಸಂದೇಶ ಸಾರುತ್ತಿದೆ. ಪ್ರಧಾನಿ ಮೋದಿ ಕೂಡ ಪ್ರಜಾಪ್ರಭುತ್ವದ ಪ್ರಸ್ತಾಪ ಬಂದಾಗಲೆಲ್ಲ ಬಸವಣ್ಣನವರ ಪ್ರಜಾಸತ್ತಾತ್ಮಕ ಪರಿಕಲ್ಪನೆಯಾದ ಅನುಭವ ಮಂಟಪದ ಉಲ್ಲೇಖ ಮಾಡುತ್ತಲೇ ಇರುತ್ತಾರೆ. ಈ ದೃಷ್ಟಿಯಿಂದ ನೋಡಿದರೆ, ಬಸವಣ್ಣನವರು ಜಗತ್ತಿನ ಮೊಟ್ಟಮೊದಲ ಪ್ರಜಾಪ್ರಭುತ್ವವಾದಿ" ಎಂದು ಹೇಳಿದರು.

ಸಮಾಜ ಸುಧಾರಣೆಯ ಹರಿಕಾರ
ಯಾವುದೇ ಸಮಾಜವು ಆರ್ಥಿಕವಾಗಿ ಪ್ರಗತಿ ಸಾಧಿಸಿದರೆ ಸಾಲದು. ಅದರ ಜತೆಯಲ್ಲೇ ಲಿಂಗ ಸಮಾನತೆ, ಸಾಮಾಜಿಕ ಸಮಾನತೆ ಮತ್ತು ನೈತಿಕತೆ ಹಾಗೂ ಮೌಲ್ಯಗಳನ್ನೂ ಸಾಧಿಸಬೇಕು. ಆಗ ಮಾತ್ರ ಮಾನವೀಯ ಸಂಸ್ಕೃತಿ ನೆಲೆಗೊಳ್ಳುತ್ತದೆ ಎನ್ನುವುದು ಬಸವಣ್ಣನವರ ಚಿಂತನೆಯಾಗಿತ್ತು ಎಂದರು.

ಕಾಯಕ, ಜ್ಞಾನ ಮತ್ತು ದಾಸೋಹಗಳಿಗೆ ಪ್ರಾಶಸ್ತ್ಯ ಕೊಡುವ ಮೂಲಕ ಬಸವಣ್ಣನವರು 12ನೇ ಶತಮಾನದಲ್ಲೇ ಉದ್ಯೋಗ, ಶಿಕ್ಷಣ ಮತ್ತು ಆಹಾರ ಭದ್ರತೆಗಳ ಬಗ್ಗೆ ಗಾಢವಾಗಿ ಚಿಂತನೆ ಮಾಡಿದ್ದರು. ಜತೆಗೆ ಸಮಾಜವನ್ನು ಅನಪೇಕ್ಷಿತ ನಿರ್ಬಂಧಗಳಿಂದ ಮುಕ್ತಗೊಳಿಸಲು ಅವರು ಪ್ರಾಮಾಣಿಕವಾಗಿ ಶ್ರಮಿಸಿದವರಾಗಿದ್ದಾರೆ ಎಂದು ಅಶ್ವತ್ಥ ನಾರಾಯಣ ಅಭಿಪ್ರಾಯಪಟ್ಟರು.
ಸರಳವಾಗಿ ನಡೆದ ಈ ಕಾರ್ಯಕ್ರಮದಲ್ಲಿ ಲ್ಯಾಂಬೆತ್ ಬಸವೇಶ್ವರ ಪ್ರತಿಷ್ಠಾನದ ಕಾರ್ಯಕಾರಿ ಸಮಿತಿ ಸದಸ್ಯ ಅಭಿಜಿತ್ ಸಾಲೀಮಠ ಮತ್ತು 'ಯುಕೆ ಕನ್ನಡಿಗರು' ಸಂಘಟನೆಯ ಅಧ್ಯಕ್ಷ ಗಣಪತಿ ಭಟ್ ಮುಂತಾದವರು ಹಾಜರಿದ್ದರು.
(ಒನ್ಇಂಡಿಯಾ ಸುದ್ದಿ)
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications