ಭಾರತಕ್ಕೆ ನೀರವ್ ಮೋದಿ ಹಸ್ತಾಂತರಿಸಲು ಬ್ರಿಟನ್ ಸರ್ಕಾರ ಒಪ್ಪಿಗೆ
ಲಂಡನ್, ಏಪ್ರಿಲ್ 16: ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ 14,000 ಕೋಟಿ ರೂ. ವಂಚಿಸಿರುವ ಆರೋಪ ಎದುರಿಸುತ್ತಿರುವ ವಜ್ರದ ವ್ಯಾಪಾರಿ ನೀರವ್ ಮೋದಿಯನ್ನ ಭಾರತಕ್ಕೆ ಹಸ್ತಾಂತರ ಮಾಡಲು ಬ್ರಿಟನ್ ಸರ್ಕಾರ ಒಪ್ಪಿಗೆ ನೀಡಿದೆ.
ವಂಚನೆ ಪ್ರಕರಣದಲ್ಲಿ ಭಾಗಿಯಾಗಿರುವ ನೀರವ್ ಮೋದಿ ವೆಸ್ಟ್ ಮಿಸಿಸ್ಟರ್ ಮ್ಯಾಜಿಸ್ಟ್ರೇಟ್ ಕೋರ್ಟ್ಗೆ ಕಾರಾಗೃಹದಿಂದ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಫೆಬ್ರವರಿಯಲ್ಲಿ ಹಾಜರಾಗಿದ್ದರು. ಲಂಡನ್ ವೆಸ್ಟ್ ಮಿಸಿಸ್ಟರ್ ಮ್ಯಾಜಿಸ್ಟ್ರೇಟ್ ಕೋರ್ಟ್ನ ಜಡ್ಜ್ ಸ್ಯಾಮುವಲ್ ಗೊಜ್ ಈ ದೇಶ ನೀಡಿದ್ದು, ಮುಂಬೈನ ಅರ್ಥರ್ ರೋಡ್ ಜೈಲಿನಲ್ಲಿ ಅವರಿಗೆ ಎಲ್ಲ ರೀತಿಯ ಚಿಕಿತ್ಸೆ ಸಿಗಲಿದೆ ಎಂದಿದ್ದರು.
ನೀರವ್ ಮೋದಿಯನ್ನ ಭಾರತಕ್ಕೆ ಹಸ್ತಾಂತರ ಮಾಡುವುದು ಮಾನವ ಹಕ್ಕುಗಳಿಗೆ ಅನುಸಾರವಾಗಿದೆ ಎಂದಿದ್ದ ಅವರು, ಈ ಆದೇಶಕ್ಕೆ ಮೇಲ್ಮನವಿ ಸಲ್ಲಿಕೆ ಮಾಡಲು ಅವರಿಗೆ ಹಕ್ಕಿದೆ ಎಂದಿದ್ದರು ಜತೆಗೆ ಅವರ ಆರೋಗ್ಯ ಹದಗೆಡುತ್ತಿದೆ ಎಂಬ ವಾದವನ್ನ ತಳ್ಳಿ ಹಾಕಿದ್ದರು.

ಇದೀಗ ನೀರವ್ ಮೋದಿ ಹಸ್ತಾಂತರಕ್ಕೆ ಬ್ರಿಟನ್ ಸರ್ಕಾರ ಒಪ್ಪಿಗೆ ನೀಡಿದೆ. ಇತ್ತೀಚೆಗಷ್ಟೆ ನೀರವ್ ಮೋದಿ ಮತ್ತು ಮೆಹುಲ್ ಚೋಕ್ಸಿಗೆ ಸೇರಿದ 108 ಘಟಕಗಳಲ್ಲಿ ಪಾಲಿಶ್ ಮಾಡಿದ ವಜ್ರಗಳು, ಬೆಳ್ಳಿ ಆಭರಣಗಳು ಸೇರಿದಂತೆ 1,350 ಕೋಟಿ ರೂ.ಗಳ ಮೌಲ್ಯದ ಮುತ್ತುಗಳನ್ನು ಹಾಂಕಾಂಗ್ನಿಂದ ವಶಪಡಿಸಿಕೊಂಡಿದ್ದ ಜಾರಿ ನಿರ್ದೇಶನಾಲಯ (ಇಡಿ) ಭಾರತಕ್ಕೆ ಮರಳಿ ತಂದಿತ್ತು.
"ಈ ಸರಕುಗಳ ಮೌಲ್ಯವನ್ನು 1,350 ಕೋಟಿ ರೂ. (ಅಂದಾಜು) ಎಂದು ಘೋಷಿಸಲಾಗಿದೆ. ಈ ಬೆಲೆಬಾಳುವ ವಸ್ತುಗಳಲ್ಲಿ ನಯಗೊಳಿಸಿದ ವಜ್ರಗಳು, ಮುತ್ತುಗಳು, ಮುತ್ತು ಮತ್ತು ಬೆಳ್ಳಿ ಆಭರಣಗಳು ಸೇರಿದ್ದವು.
ಇದೀಗ ಯುಕೆ ಗೃಹ ಕಾರ್ಯದರ್ಶಿ ಪ್ರೀತಿ ಪಟೇಲ್ ಹಸ್ತಾಂತರ ಪ್ರಕ್ರಿಯೆಗೆ ಸಹಿ ಹಾಕಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications