ನೀರವ್ ಮೋದಿಗೆ ಸಿಗಲಿಲ್ಲ ಜಾಮೀನು, ಮೇ 24ರ ತನಕ ಜೈಲು
ಲಂಡನ್, ಏಪ್ರಿಲ್ 24 : ಪಂಜಾಬ್ ನ್ಯಾಷನಲ್ ಬ್ಯಾಂಕಿನ ಬಹುಕೋಟಿ ಹಗರಣದ ಪ್ರಮುಖ ಆರೋಪಿ, ದೇಶಭ್ರಷ್ಟ ಉದ್ಯಮಿ, ಉದ್ದೇಶಪೂರ್ವಕ ಸುಸ್ತಿದಾರ ನೀರವ್ ಮೋದಿ ಅವರಿಗೆ ಲಂಡನ್ ನ್ಯಾಯಾಲಯವು ಇಂದು ಮತ್ತೆ ಜಾಮೀನು ನಿರಾಕರಿಸಿದೆ. ಮೇ 30ರ ನಂತರ ಪೂರ್ಣಾವಧಿ ವಿಚಾರಣೆ ನಡೆಸಲಾಗುತ್ತದೆ
ಲಂಡನ್ನ ವೆಸ್ಟ್ಮಿನಿಸ್ಟರ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ನೀರವ್ ಮೋದಿ ಅವರು ಜಾಮೀನಿನಾಗಿ ಮೂರನೇ ಬಾರಿ ಅರ್ಜಿ ಹಾಕಿದ್ದರು. ಆದರೆ, ಈ ಬಾರಿಯೂ ಜಾಮೀನು ಅರ್ಜಿ ತಿರಸ್ಕೃತಗೊಂಡಿದೆ.
ನೀರವ್ ಮೋದಿ ಅವರು ಸಾಕ್ಷ್ಯದಾರರೊಬ್ಬರಿಗೆ ಬೆದರಿಕೆ ಒಡ್ಡಿದ್ದಾರೆ ಮತ್ತು ತಮ್ಮ ಬಂಧನವನ್ನು ಮುಂದೂಡಲು ಲಂಚದ ಆಮೀಷ ಒಡ್ಡಿದ್ದಾರೆ ಎಂದು ನ್ಯಾಯಾಲಯದಲ್ಲಿ ನೀರವ್ ವಿರುದ್ಧ ವಾದ ಮಂಡನೆ ಮಾಡಲಾಯಿತು.
ನೀರವ್ ಮೋದಿಯನ್ನು ಈಗ ಮತ್ತೆ ಎಚ್ಎಂಪಿ ವ್ಯಾಂಡ್ಸ್ವರ್ತ್ ಜೈಲಿಗೆ ಕಳುಹಿಸಲಾಯಿತು, ಪ್ರಕರಣದ ಮುಂದಿನ ವಿಚಾರಣೆಯನ್ನು ಮೇ 24ಕ್ಕೆ ಮುಂದೂಡಲಾಗಿದೆ.

ನೀರವ್ ಮೋದಿ ಅವರು 6,400 ಕೋಟಿ ರು ಮನಿಲಾಂಡ್ರಿಂಗ್ ಅವ್ಯವಹಾರದಲ್ಲಿ ತೊಡಗಿದ್ದರು ಎಂದು ಜಾರಿ ನಿರ್ದೇಶನಾಲಯವು ತನ್ನ ದೋಷಾರೋಪಣ ಪಟ್ಟಿಯಲ್ಲಿ ಹೇಳಿದೆ. ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ 13 ಸಾವಿರ ಕೋಟಿ ರೂ. ವಂಚಿಸಿದ ಆರೋಪವನ್ನು ಹೊತ್ತುಕೊಂಡಿರುವ ನೀರವ್ ಮೋದಿ, ಮೆಹುಲ್ ಚೊಕ್ಸಿ ಅವರು ಭಾರತದಿಂದ ಪರಾರಿಯಾಗಿದ್ದು, ವಿವಿಧ ತನಿಖಾ ಸಂಸ್ಥೆಗಳು ಇವರಿಬ್ಬರನ್ನು ಭಾರತಕ್ಕೆ ಕರೆ ತಂದು ವಿಚಾರಣೆ ನಡೆಸಲು ಯತ್ನಿಸುತ್ತಿವೆ. ಲಂಡನ್ನಲ್ಲಿ ನೀರವ್ ಮೋದಿಯನ್ನು ಬಂಧಿಸಲಾಗಿದ್ದು, ಆತನನ್ನು ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications