ಪಿಎನ್ಬಿ ಹಗರಣ: ನೀರವ್ ಮೋದಿ ಜಾಮೀನು ಅರ್ಜಿ 5ನೇ ಬಾರಿ ವಜಾ
ಲಂಡನ್, ಮಾರ್ಚ್ 6: ಪಂಜಾಬ್ ನ್ಯಾಷನಲ್ ಬ್ಯಾಂಕ್ ನ ಬಹುಕೋಟಿ ವಂಚನೆ ಪ್ರಕರಣದ ಪ್ರಮುಖ ಆರೋಪಿ ಉದ್ಯಮಿ ನೀರವ್ ಮೋದಿ ಸಲ್ಲಿಸಿದ್ದ ಜಾಮೀನು ಅರ್ಜಿ 5ನೇ ಬಾರಿ ವಜಾಗೊಂಡಿದೆ.
ಮುಂಬೈ ಶಾಖೆಯೊಂದರಲ್ಲಿ 11,500 ಕೋಟಿ ರೂ.ಗಳ ವಂಚನೆ ಮತ್ತು ಅಕ್ರಮ ವಹಿವಾಟು ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಲಂಡನ್ನಿನಲ್ಲಿ ಬಂಧಿಯಾಗಿರುವ ಉದ್ಯಮಿ ನೀರವ್ ಮೋದಿ ಅವರ ಜಾಮೀನು ಅರ್ಜಿಯನ್ನು ಲಂಡನ್ನಿನ ಕೋರ್ಟ್ ಮತ್ತೊಮ್ಮೆ ವಜಾಗೊಳಿಸಿದೆ. ಮಾರ್ಚ್ 19ರಂದು ಲಂಡನ್ನಿನ ಸ್ಕಾಟ್ಲೆಂಡ್ ಯಾರ್ಡ್ ಅಧಿಕಾರಿಗಳು, ನೀರವ್ ಅವರನ್ನು ಬಂಧಿಸಿದ್ದರು.
ಭಾರತದಲ್ಲಿ ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಾಗೂ ಇನ್ನೂ ಕೆಲವು ಬ್ಯಾಂಕುಗಳಿಗೆ ವಂಚನೆ ಮಾಡಿ ಪರಾರಿ ಆಗಿರುವ ನೀರವ್ ಮೋದಿ ಸದ್ಯ ಲಂಡನ್ನ ವಾಂಡ್ಸ್ ವರ್ಥ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದು, ಜಾಮೀನಿಗಾಗಿ ಅರ್ಜಿ ಹಾಕಿದ್ದರು.

ಭಾರತ ತೊರೆದು ಇಂಗ್ಲೆಂಡ್ ಸೇರಿಕೊಂಡಿರುವ ದೇಶಭ್ರಷ್ಟ ಆರ್ಥಿಕ ಅಪರಾಧಿ ಪಟ್ಟಿಯಲ್ಲಿರುವ ಉದ್ಯಮಿ ನೀರವ್ ಮೋದಿ 2 ಬಿಲಿಯನ್ ಡಾಲರ್ ಮೊತ್ತದ ಹಣ ವಂಚನೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ.
ಪಂಜಾಬ್ ನ್ಯಾಷನಲ್ ಬ್ಯಾಂಕ್ನ (ಪಿಎನ್ಬಿ) ಬಹು ಕೋಟಿ ವಂಚನೆ ಪ್ರಕರಣದ ಆರೋಪಿ, ವಿಶ್ವ ಪ್ರಸಿದ್ಧ ಆಭರಣ ವಿನ್ಯಾಸಕ ನೀರವ್ ಮೋದಿ (49) ಅವರ ಆಸ್ತಿ ಬಗೆದಷ್ಟು ಸಿಗುತ್ತಲೇ ಇದೆ. ಜಾರಿ ನಿರ್ದೇಶನಾಲಯದ ಅಧಿಕಾರಿಗಳು ನೀರವ್ ಮೋದಿಗೆ ಸೇರಿರುವ 523 ಕೋಟಿ ರು ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಂಡಿದ್ದಾರೆ. ಇದಲ್ಲದೆ ಮೋದಿಗೆ ಸೇರಿದ ಆಸ್ತಿಯನ್ನು ಹರಾಜು ಹಾಕಿ 51 ಕೋಟಿ ರು ಗಳಿಸಲಾಗಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications