ಶಿವಕುಮಾರ ಸ್ವಾಮೀಜಿ ಆರೋಗ್ಯಕ್ಕಾಗಿ ಲಂಡನ್ ಕನ್ನಡಿಗರ ಪ್ರಾರ್ಥನೆ
ಲಂಡನ್, ಜನವರಿ 21 : ತುಮಕೂರಿನ ಸಿದ್ದಗಂಗಾ ಮಠದ ಶ್ರೀಗಳಾದ ಶತಾಯುಶಿ ಶ್ರೀ ಶಿವಕುಮಾರ ಸ್ವಾಮೀಜಿಗಳು ಶೀಘ್ರ ಗುಣಮುಖರಾಗಲೆಂದು ಯುನೈಟೆಡ್ ಕಿಂಗಡಂನ ಅನಿವಾಸಿ ಭಾರತೀಯರು, ಅಲ್ಲಿನ ಬಸವೇಶ್ವರ ಪುತ್ಥಳಿಯ ಮುಂದೆ ಪ್ರಾರ್ಥನೆ ಮಾಡಿದ್ದಾರೆ.
111 ವರ್ಷ ವಯಸ್ಸಿನ, ನಡೆದಾಡುವ ದೇವರೆಂದೇ ಭಕ್ತರಿಂದ ಕರೆಯಿಸಿಕೊಳ್ಳುವ ಶಿವಕುಮಾರ ಸ್ವಾಮೀಜಿಗಳು, ಚೆನ್ನೈನಲ್ಲಿ ಶಸ್ತ್ರಚಿಕಿತ್ಸೆ ಪಡೆದುಬಂದ ನಂತರ ತುಮಕೂರಿನ ಮಠದಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ.

ಶ್ರೀಗಳ ಆರೋಗ್ಯ ಸ್ಥಿರವಾಗಿರಲೆಂದು ಮತ್ತು ಅವರು ಚೇತರಿಸಿಕೊಳ್ಳಲೆಂದು ಲ್ಯಾಂಬೆತ್ ಬಸವೇಶ್ವರ ಫೌಂಡೇಷನ್ ನಿಂದ, ಲಂಡನ್ ಸಂಸತ್ತಿನ ಮುಂದಿರುವ ಬಸವೇಶ್ವರ ಪುತ್ಥಳಿಯ ಮುಂದೆ ವಿಶೇಷ ಪ್ರಾರ್ಥನೆಯನ್ನು ಜನವರಿ 20ರಂದು ಆಯೋಜಿಸಲಾಗಿತ್ತು.

ಬಸವೇಶ್ವರ ಪುತ್ಥಳಿಯ ಪ್ರತಿಷ್ಠಾಪನೆಗೂ ಮೊದಲು 2013ರ ಫೆಬ್ರವರಿ 17ರಂದು ಶ್ರೀ ಶಿವಕುಮಾರ ಸ್ವಾಮೀಜಿಗಳು, ಲಂಡನ್ನಿನ ಬಸವೇಶ್ವರ ಪುತ್ಥಳಿ ಅಡಿಪಾಯಕ್ಕೆಂದು ಶಿಲೆಯನ್ನು ಕಾಣಿಕೆಯಾಗಿ ನೀಡಿದ್ದರು. ಶ್ರೀಗಳು ಕಾಣಿಕೆಯಾಗಿ ನೀಡಿರುವ ಶಿಲೆ ಪಂಚ ಲೋಹಗಳಿಂದ ತಯಾರಿಸಲಾಗಿದೆ.

ಲಂಡನ್ ಬರೋ ಆಫ್ ಲ್ಯಾಂಬೆತ್ ನ ಮಾಜಿ ಮೇಯರ್ ಡಾ. ನೀರಜ್ ಪಾಟೀಲ, ಬ್ರಿಟನ್ ನಾಗರಿಕರು, ಕನ್ನಡ ಸಂಘಟನೆಯ ಸದಸ್ಯರು, ಶ್ರೀಗಳ ಆರೋಗ್ಯಕ್ಕಾಗಿ ಭಿತ್ತಿಪತ್ರಗಳನ್ನು ಹಿಡಿದುಕೊಂಡು ಪ್ರಾರ್ಥನೆ ಸಲ್ಲಿಸಿದರು. ಶ್ರೀಗಳ ಸಮಾಜಕ್ಕೆ ಸಲ್ಲಿಸಿರುವ ಅಪಾರ ಸೇವೆಯನ್ನು ಪರಿಗಣಿಸಿ, ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ 'ಭಾರತ ರತ್ನ' ನೀಡಬೇಕೆಂದು ಭಾರತ ಸರಕಾರವನ್ನು ಆಗ್ರಹಿಸಿದರು.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications