ತೆರೆಸಾ ಮೇ ಸರ್ಕಾರ ಪತನದ ಭೀತಿ, ಮುಳುವಾದ ಬ್ರೆಕ್ಸಿಟ್ ಒಪ್ಪಂದ
ಲಂಡನ್, ಜನವರಿ 16: ಐರೋಪ್ಯ ಒಕ್ಕೂಟದಿಂದ ಬ್ರಿಟನ್ ಹೊರಬರುವ ತೀರ್ಮಾನ ಕುರಿತ ಒಪ್ಪಂದಕ್ಕೆ ಬ್ರಿಟನ್ನಿನ ಸಂಸತ್ತಿನಲ್ಲಿ ಸೋಲುಂಟಾಗಿದೆ. ಇದರಿಂದ ಕನ್ಸರ್ವೇಟಿವ್ ಪಕ್ಷದ ಸರ್ಕಾರ ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿದೆ. ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವುದಾಗಿ ವಿಪಕ್ಷ ಲೇಬರ್ ಪಾರ್ಟಿ ಹೇಳಿದೆ.
ಐರೋಪ್ಯ ಒಕ್ಕೂಟದಿಂದ ಬ್ರಿಟನ್ ಹೊರಬರುವ ತೀರ್ಮಾನವನ್ನು ಕಳೆದ ವರ್ಷ ಮಾರ್ಚ್ 29ರಂದು ತೆಗೆದುಕೊಳ್ಳಲಾಗಿದೆ. ಆದರೆ ಇದಕ್ಕೆ ಬ್ರಿಟನ್ ಸಂಸತ್ತಿನಲ್ಲಿ ಸಮ್ಮತಿ ಸಿಕ್ಕಿಲ್ಲ, ಹೀಗಾಗಿ, ಸರ್ಕಾರ ಪತನದ ಭೀತಿಯಲ್ಲಿಯೇ ಇಲ್ಲಿ ತನಕ ಥೆರೆಸಾ ಮೇ ಅವರು ಅಧಕರ ನಡೆಸುತ್ತಾ ಬಂದಿದ್ದಾರೆ.

ಬ್ರೆಕ್ಸಿಟ್ ವಿರುದ್ಧ ಮತ: ಪ್ರಧಾನಿ ತೆರೇಸಾ ಮೇ ಅವರು ಬ್ರೆಕ್ಸಿಟ್ ಒಪ್ಪಂದ ಪರ ಮತ ಹಾಕುವಂತೆ ಹೌಸ್ ಆಫ್ ಕಾಮನ್ಸ್ ನಲ್ಲಿ ನಿರ್ಣಯ ಮಂಡಿಸಿದ್ದರು. ಇದನ್ನು ಅನುಮೋದಿಸಿ 202 ಮಂದಿ ಮತ ಬಂದಿದ್ದರೆ, 432 ಮಂದಿ ಇದನ್ನು ವಿರೋಧಿಸಿ ಮತ ಚಲಾಯಿಸಿದ್ದಾರೆ. ಹೀಗಾಗಿ, 230ಕ್ಕೂ ಅಧಿಕ ಮತಗಳ ಅಂತರದಲ್ಲಿ ಸರ್ಕಾರಕ್ಕೆ ಮುಖಭಂಗವಾಗಿದೆ.
. @jeremycorbyn has tabled a no confidence motion in the Government after their historic defeat on Theresa May’s deal. The Government have confirmed that this will be debated and voted upon tomorrow. pic.twitter.com/c1hdmLuKrB
— Labour Whips (@labourwhips) January 15, 2019
ಐರೋಪ್ಯ ಒಕ್ಕೂಟದಿಂದ ಬ್ರಿಟನ್ ಬೇರ್ಪಡುವ 'ಬ್ರೆಕ್ಸಿಟ್' ನಿರ್ಧಾರದ ಬಗ್ಗೆ ಜನಾಭಿಪ್ರಾಯ ಸಂಗ್ರಹಿಸಲಾಗಿತ್ತು. ಬ್ರೆಕ್ಸಿಟ್ ಪರವಾಗಿ ಹೆಚ್ಚು ಮತಗಳು(2016 ಜೂನ್ 23ರ ಎಣಿಕೆ 51.9%) ಬಿದ್ದಿದ್ದವು. ಜನಾದೇಶದ ಬಳಿಕ ಪ್ರಧಾನಿ ಹುದ್ದೆಗೆ ಡೇವಿಡ್ ಕ್ಯಾಮರೂನ್ ರಾಜೀನಾಮೆ ನೀಡಿದ್ದರು. ಆ ಸ್ಥಾನವನ್ನು ತುಂಬಿದ್ದ ತೆರೇಸಾ ಮೇ ಬ್ರೆಕ್ಸಿಟ್ ಪ್ರಕ್ರಿಯೆಗೆ ಚಾಲನೆ ನೀಡಿದ್ದರು.
ದೇಶದ ಒಳಿತಿಗಾಗಿ ಈ ವಿಧೇಯಕ ಪರ ಮತ ಚಲಾಯಿಸುವಂತೆ ಮೇ ಸಂಸತ್ ಸದಸ್ಯರಲ್ಲಿ ಮನವಿ ಮಾಡಿದ್ದರು. ಒಂದು ವೇಳೆ ಬ್ರೆಕ್ಸಿಟ್ ಒಪ್ಪಂದಕ್ಕೆ ಸಂಸತ್ನಲ್ಲಿ ಅನುಮೋದನೆ ದೊರೆಯದಿದ್ದರೆ ಅದು ನಮ್ಮ ಪ್ರಜಾಪ್ರಭುತ್ವದ ದೊಡ್ಡ ದುರಂತ ಮತ್ತು ಕ್ಷಮಿಸಲಾಗದ ನಂಬಿಕೆ ದ್ರೋಹ ಆಗಲಿದೆ ಎಂದು ಮೇ ಎಚ್ಚರಿಕೆ ನೀಡಿದ್ದರು.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications