ನಾಲ್ಕು ಪ್ರಾಂತ್ಯವನ್ನೇ ನಿಭಾಯಿಸಲಾಗುತ್ತಿಲ್ಲ, ಕಾಶ್ಮೀರ ಬೇಕೇ?: ಅಫ್ರಿದಿ ಪ್ರಶ್ನೆ
Recommended Video

ಲಂಡನ್, ನವೆಂಬರ್ 14: ವಿವಾದಾತ್ಮಕ ಹೇಳಿಕೆಗಳನ್ನು ನೀಡುವುದರಲ್ಲಿ ಹೆಸರಾಗಿರುವ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶಾಹಿದ್ ಅಫ್ರಿದಿ, ಕಾಶ್ಮೀರದ ವಿವಾದವನ್ನು ಕೆದಕಿದ್ದಾರೆ.
ಆದರೆ, ಅವರು ಈ ಬಾರಿ ತಮ್ಮ ದೇಶದ ಸರ್ಕಾರ ಮತ್ತು ವ್ಯವಸ್ಥೆಯ ವಿರುದ್ಧವೇ ಚಾಟಿ ಬೀಸಿದ್ದಾರೆ.
ಲಂಡನ್ನಲ್ಲಿ ಮಾತನಾಡಿದ ಅಫ್ರಿದಿ, ಪಾಕಿಸ್ತಾನಕ್ಕೆ ತನ್ನ ನಾಲ್ಕು ಪ್ರಾಂತ್ಯಗಳನ್ನೇ ಸರಿಯಾಗಿ ನಿಭಾಯಿಸಲು ಸಾಧ್ಯವಾಗುತ್ತಿಲ್ಲ. ಹೀಗಿರುವಾಗ ಕಾಶ್ಮೀರ ಬೇಕೆಂದು ಬೇಡಿಕೆ ಇರಿಸುವುದು ಸರಿಯಲ್ಲ ಎಂದು ಅಫ್ರಿದಿ ಹೇಳಿದ್ದಾರೆ.
'ಪಾಕಿಸ್ತಾನಕ್ಕೆ ಕಾಶ್ಮಿರದ ಅಗತ್ಯವಿಲ್ಲ; ಅದಕ್ಕೆ ತನ್ನಲ್ಲಿರುವ ನಾಲ್ಕು ಪ್ರಾಂತ್ಯಗಳನ್ನೇ ನಿಭಾಯಿಸುವ ಸಾಮರ್ಥ್ಯವಿಲ್ಲ' ಎಂದು ಹೇಳಿದ್ದಾರೆ.

ಹಾಗೆಂದು ಅವರು ಭಾರತದೊಂದಿಗೆ ಕೂಡ ಕಾಶ್ಮೀರ ಇರುವುದನ್ನು ಒಪ್ಪಿಕೊಂಡಿಲ್ಲ.
'ಪಾಕಿಸ್ತಾನಕ್ಕೆ ಕಾಶ್ಮೀರದ ಅಗತ್ಯವಿಲ್ಲ. ಹಾಗೆಂದು ಅದನ್ನು ಭಾರತಕ್ಕೆ ಕೊಡಬಾರದು. ಕಾಶ್ಮೀರ ಸ್ವತಂತ್ರ ದೇಶವಾಗಬೇಕು. ಅಲ್ಲಿ ಸಾಯುತ್ತಿರುವ ಜನರು ಸಾಯಬಾರದು. ಮಾನವೀಯತೆ ಬದುಕುಳಿಯಬೇಕು. ಅಲ್ಲಿನ ಜನರು ಸಾಯುತ್ತಿರುವುದನ್ನು ನೋಡಿದಾಗ ನೋವಾಗುತ್ತದೆ' ಎಂದು ಅಫ್ರಿದಿ ಹೇಳಿದ್ದಾರೆ.
ದೇಶದಲ್ಲಿ ಏಕತೆ ತರಲು ಮತ್ತು ಉಗ್ರರಿಂದ ಸುರಕ್ಷತೆ ಮೂಡಿಸುವ ಪ್ರಯತ್ನದಲ್ಲಿ ಪಾಕಿಸ್ತಾನ ವಿಫಲವಾಗಿದೆ ಎಂದಿದ್ದಾರೆ.
ಪಾಕಿಸ್ತಾನದ ವಿರುದ್ಧ ಇದೇ ರೀತಿಯ ಟೀಕೆಗಳು ಭಾರತೀಯರು ಮಾಡುತ್ತಿರುವುದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು. ಕ್ಯಾಚ್ ಬಿಟ್ಟ ವಿಡಿಯೋಗಳನ್ನು ಬಳಸಿ, ಪಾಕಿಸ್ತಾನ ಪಂದ್ಯ ಸೋತಾಗ ಮೀಮ್ಗಳನ್ನು ಸೃಷ್ಟಿಸಿ ಇವರಿಗೆ 'ಕಾಶ್ಮೀರ ಬೇಕಂತೆ' ಎಂದು ಲೇವಡಿ ಮಾಡುವ ಅನೇಕ ಪೋಸ್ಟ್ಗಳು ಸಾಮಾಜಿಕ ಜಾಲತಾಣಗಳಲ್ಲಿ ಆಗಾಗ ಹರಿದಾಡುತ್ತಿರುತ್ತವೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications