ಕಟ್ಟುಕಥೆ ನಿಲ್ಲಿಸಿ, ನಾನು ದುಡ್ಡು ಕದ್ದಿಲ್ಲ: ವಿಜಯ್ ಮಲ್ಯ ಅಳಲು
ಲಂಡನ್, ಡಿಸೆಂಬರ್ 6: ಬ್ಯಾಂಕುಗಳಿಂದ ಪಡೆದ ಸಾಲದ ಮೊತ್ತವನ್ನು ಸಂಪೂರ್ಣವಾಗಿ ವಾಪಸ್ ಮಾಡುವುದಾಗಿ ಹೇಳಿರುವ ಉದ್ಯಮಿ ವಿಜಯ್ ಮಲ್ಯ, ಮತ್ತೆ ಟ್ವಿಟ್ಟರ್ನಲ್ಲಿ ತಮ್ಮ ಅಹವಾಲು ತೋಡಿಕೊಂಡಿದ್ದಾರೆ.
ಅಗಸ್ಟಾ ವೆಸ್ಟ್ ಲ್ಯಾಂಡ್ ಹಗರಣದ ಮಧ್ಯವರ್ತಿ ಕ್ರಿಸ್ಟಿಯನ್ ಮೈಕಲ್ನನ್ನು ದುಬೈನಿಂದ ಭಾರತಕ್ಕೆ ಗಡಿಪಾರು ಮಾಡಿದ ಬೆನ್ನಲ್ಲೇ ಆರ್ಥಿಕ ಅಪರಾಧಿಯಾಗಿರುವ ವಿಜಯ್ ಮಲ್ಯ ಅವರನ್ನು ಕೂಡ ಗಡಿಪಾರು ಮಾಡುವ ಸಾಧ್ಯತೆ ಬಗ್ಗೆ ಚರ್ಚೆಗಳು ನಡೆಯುತ್ತಿವೆ.
ಲಂಡನ್ನಲ್ಲಿ ಆಶ್ರಯ ಪಡೆದಿರುವ ವಿಜಯ್ ಮಲ್ಯ ಅವರನ್ನು ಭಾರತಕ್ಕೆ ಗಡಿಪಾರು ಮಾಡುವ ವಿಚಾರದಲ್ಲಿ ಅಲ್ಲಿನ ಕೋರ್ಟ್ ವಿಚಾರಣೆ ನಡೆಸುತ್ತಿದೆ.

ಇತ್ತ ವಿಜಯ್ ಮಲ್ಯ, ಪಡೆದ ಸಾಲದ ಶೇ 100ರಷ್ಟು ಅಸಲು ಮೊತ್ತವನ್ನು ಮರಳಿಸುವುದಾಗಿ ಭರವಸೆ ನೀಡಿದ್ದಾರೆ.
ಆದರೆ, ತಮ್ಮನ್ನು ಹಣ ಕದ್ದವನು ಎಂದು ಮಾತ್ರ ಕರೆಯಬೇಡಿ ಎಂದು ಅವರು ಮನವಿ ಮಾಡಿದ್ದಾರೆ.
ತಮ್ಮ ಗಡಿಪಾರಿಗೂ, ಇತ್ತೀಚೆಗೆ ದುಬೈನಿಂದ ಆದ ಗಡಿಪಾರಿಗೂ ಸಂಬಂಧವೇನು ಎಂದು ಮಲ್ಯ ಟ್ವಿಟ್ಟರ್ನಲ್ಲಿ ಪ್ರಶ್ನಿಸಿದ್ದಾರೆ.
Respectfully to all commentators, I cannot understand how my extradition decision or the recent extradition from Dubai and my settlement offer are linked in any way. Wherever I am physically,my appeal is “Please take the money”. I want to stop the narrative that I stole money
— Vijay Mallya (@TheVijayMallya) 6 December 2018
'ಎಲ್ಲ ಕಾಮೆಂಟೇಟರ್ಗಳನ್ನು ಗೌರವಿಸುತ್ತಾ, ನನ್ನ ಗಡಿಪಾರು ನಿರ್ಧಾರ ಅಥವಾ ಇತ್ತೀಚಿನ ದುಬೈನಿಂದ ಗಡಿಪಾರು ಘಟನೆ ಮತ್ತು ನನ್ನ ಸೆಟ್ಲ್ಮೆಂಟ್ ಆಫರ್ ನಡುವೆ ಯಾವ ಸಂಬಂಧವಿದೆ ಎನ್ನುವುದು ನನಗೆ ಅರ್ಥವಾಗುತ್ತಿಲ್ಲ. ನಾನು ಎದುರಿಗೆ ಬಂದಾಗ ಮನವಿ ಮಾಡುವುದಿಷ್ಟು, ದಯವಿಟ್ಟು ಹಣ ತೆಗೆದುಕೊಳ್ಳಿ. ನಾನು ಹಣ ಕದ್ದಿದ್ದೇನೆ ಎಂದು ಕಥೆ ಸೃಷ್ಟಿಯನ್ನು ನಿಲ್ಲಿಸುವುದನ್ನು ನಾನು ಬಯಸುತ್ತೇನೆ' ಎಂದು ಮಲ್ಯ ಟ್ವೀಟ್ ಮಾಡಿದ್ದಾರೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications