ವಿಶ್ವಾಸಮತ ಗೆದ್ದ ತೆರೆಸಾ ಮೇ, ಉಳಿದ ಬ್ರಿಟನ್ ಸರ್ಕಾರ
ಲಂಡನ್, ಜನವರಿ 17: ಬ್ರಿಟನ್ನ ಕಾರ್ಮಿಕ ಪಕ್ಷವು ಪ್ರಧಾನಿ ತೆರೆಸಾ ಮೇ ವಿರುದ್ಧ ಮಂಡಿಸಿದ್ದ ಅವಿಶ್ವಾಸ ನಿರ್ಣಯಕ್ಕೆ ಸೋಲಾಗಿದ್ದು. ತೆರೆಸಾ ಮೇ ವಿಜಯ ಸಾಧಿಸಿದ್ದಾರೆ.
ಐರೋಪ್ಯ ಒಕ್ಕೂಟದಿಂದ ಬ್ರಿಟನ್ ಹೊರಬರುವ ಬ್ರಿಕ್ಸೆಟ್ ಒಪ್ಪಂದ ಕಳೆದ ವರ್ಷ ಮಾರ್ಚ್ ನಲ್ಲಿ ಆಗಿತ್ತು. ಆದರೆ ಇದಕ್ಕೆ ಬ್ರಿಟನ್ ಸಂಸತ್ತಿನ ಒಮ್ಮತ ಇರಲಿಲ್ಲ. ಈ ಒಪ್ಪಂದಕ್ಕೆ ಸಂಸತ್ತಿನಲ್ಲಿ ಸೋಲಾಗಿತ್ತು. ಹಾಗಾಗಿ ವಿರೋಧ ಪಕ್ಷಗಳು ತೆರೆಸಾ ಮೇ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದ್ದವು.

ಪ್ರಧಾನಿ ತೆರೆಸಾ ವಿರುದ್ಧ ಮಂಡಿಸಿದ್ದ ಅವಿಶ್ವಾಸ ನಿರ್ಣಯಕ್ಕೆ ಇಂದು ಬ್ರಿಟನ್ ಸಂಸತ್ತಿನಲ್ಲಿ ಮತದಾನ ನಡೆದು ಸುಲಭವಾಗಿ ತೆರೆಸಾ ಮೇ ಅವರು ವಿಶ್ವಾಸಮತಗಳನ್ನು ಗಳಿಸಿದ್ದಾರೆ. ಕಾರ್ಮಿಕ ಪಕ್ಷ ಮಂಡಿಸಿದ್ದ ಅವಿಶ್ವಾಸ ನಿರ್ಣಯಕ್ಕೆ ಸೋಲಾಗಿದೆ.
ಪ್ರಧಾನಿ ತೆರೆಸಾ ಮೇ ಅವರು 325-306 ವಿಶ್ವಾಸಮತ ಪಡೆದು, 19 ಮತಗಳ ಅಂತರದಲ್ಲಿ ಗೆದ್ದಿದ್ದಾರೆ. ಆ ಮೂಲಕ ಸರ್ಕಾರವನ್ನು ಉಳಿಸಿಕೊಂಡಿದ್ದಾರೆ. ಮೇ ಅವರ ಕನ್ಸರ್ವೇಟಿವ್ ಪಕ್ಷ ಮತ್ತು ಡೆಮಾಕ್ರಟಿಕ್ ಯೂನಿಯನ್ ಪಕ್ಷದ ಸದಸ್ಯರು ಮೇ ಪರ ಮತ ಚಲಾಯಿಸಿದ್ದಾರೆ.
ನಿನ್ನೆಯಷ್ಟೆ (ಜನವರಿ 16)ರಂದು ಇದೇ ಬ್ರಿಟನ್ ಸಂಸತ್ತಿನಲ್ಲಿ ಸರ್ಕಾರ ಮಂಡಿಸಿದ ಬ್ರಿಕ್ಸೆಟ್ ಒಪ್ಪಂದಕ್ಕೆ ಭಾರಿ ಸೋಲಾಗಿತ್ತು. ಹಾಗಾಗಿ ಇಂದು ತೆರೆಸಾ ಮೇ ಗೂ ಸೋಲು ಎದುರಾಗುವ ಭೀತಿ ಇತ್ತು. ಆದರೆ ಅವರು ಗೆದ್ದಿದ್ದಾರೆ.
ಜನವರಿ 15ರಂದು ಪ್ರಧಾನಿ ತೆರೇಸಾ ಮೇ ಅವರು ಬ್ರೆಕ್ಸಿಟ್ ಒಪ್ಪಂದ ಪರ ಮತ ಹಾಕುವಂತೆ ಹೌಸ್ ಆಫ್ ಕಾಮನ್ಸ್ ನಲ್ಲಿ ನಿರ್ಣಯ ಮಂಡಿಸಿದ್ದರು. ಇದನ್ನು ಅನುಮೋದಿಸಿ 202 ಮಂದಿ ಮತ ಬಂದಿತ್ತು, 432 ಮಂದಿ ಇದನ್ನು ವಿರೋಧಿಸಿ ಮತ ಚಲಾಯಿಸಿದ್ದಾರೆ. ಹೀಗಾಗಿ, 230ಕ್ಕೂ ಅಧಿಕ ಮತಗಳ ಅಂತರದಲ್ಲಿ ಸರ್ಕಾರಕ್ಕೆ ಮುಖಭಂಗವಾಗಿತ್ತು.
ಅವಿಶ್ವಾಸ ನಿರ್ಣಯದ ವಿರುದ್ಧ ಗೆದ್ದಿರುವ ತೆರೆಸಾ ಮೇ ಅವರು, 'ಸೋಮವಾರದಂದು ಹೊಸ ಮಾದರಿಯ ಬ್ರಿಕ್ಸೆಟ್ ಒಪ್ಪಂದದೊಂದಿಗೆ ಸಂಸತ್ತಿಗೆ ಆಗಮಿಸುವುದಾಗಿ' ಹೇಳಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications